ನಾಳೆಯಿಂದ 2 ದಿನ ಹಲಸಿನ ಹಬ್ಬ


Team Udayavani, Aug 2, 2019, 12:28 PM IST

mysuru-tdy-1

ಮೈಸೂರು: ಬಡವರ ಹಣ್ಣು ಎಂದೇ ಜನಪ್ರಿಯವಾಗಿರುವ ಹಲಸಿನ ಮಹತ್ವವನ್ನು ಗ್ರಾಹಕರಿಗೆ ಮತ್ತು ರೈತರಿಗೆ ತಿಳಿಸಿಕೊಡುವ ಉದ್ದೇಶದಿಂದ ಸಹಜ ಸಮೃದ್ಧ ಸಂಸ್ಥೆ ಮತ್ತು ರೋಟರಿ ಕ್ಲಬ್‌ ಮೈಸೂರು ಪಶ್ಚಿಮದ ಆಶ್ರಯದಲ್ಲಿ ಆ.3 ಮತ್ತು 4ರಂದು ಹಲಸಿನ ಹಬ್ಬ ವನ್ನು ನಗರದ ನಂಜರಾಜ ಬಹದ್ದೂರ್‌ ಛತ್ರದಲ್ಲಿ ಏರ್ಪಡಿಸಲಾಗಿದೆ.

ಹಲಸು ಖಾದ್ಯ: ಹಲಸಿನ ಮಹತ್ವ ಸಾರುವ ಮೇಳದಲ್ಲಿ, ಕೆಂಪು, ಹಳದಿ ಮತ್ತು ಬಿಳಿ ಹಲಸಿನ ತಳಿ ಹಣ್ಣುಗಳು ತಿನ್ನಲು ಸಿಗಲಿವೆ. ಹಲಸಿನ ಐಸ್‌ಕ್ರೀಂ, ಚಿಪ್ಸ್ಸ್, ಚಾಕೋಲೇಟ್, ಹಪ್ಪಳ, ಹಲ್ವ, ಕಬಾಬ್‌,ಹೋಳಿಗೆ, ವಡೆ, ದೋಸೆ, ಪಲ್ಯ , ಬಿರಿಯಾನಿಯ ಮಳಿಗೆಗಳು ಇರಲಿವೆ. ಹಲಸಿನ ಬೀಜದ ಪೇಯ ‘ಜಾಫಿ’ ಕುಡಿಯಲು ಸಿಗಲಿದೆ. 14 ಜಾತಿಯ ಹಲಸಿನ ತಳಿಗಳು ವಿಶೇಷವಾಗಿ ಕೆಂಪು ಹಲಸಿನ ತಳಿಯ ಗಿಡಗಳು ಮಾರಾಟಕ್ಕೆ ಬರಲಿವೆ. ಹಲಸಿನ ಸಾಗುವಳಿ ಮತ್ತು ಮೌಲ್ಯವರ್ಧನೆ ಕುರಿತ ಪುಸ್ತಕಗಳು ಸಿಗಲಿವೆ. ಹಲಸು ಹಚ್ಚುವ ಯಂತ್ರವೂ ಸಿಗಲಿದೆ.

ಹಲಸಿನ ಹಬ್ಬವನ್ನು ಜಿಲ್ಲಾ ರೋಟರಿ ಗೌರ್ನರ್‌ ರೊ.ಜೋಸೆಫ್ ಮ್ಯಾಥ್ಯು ಉದ್ಘಾಟಿಸಲಿದ್ದಾರೆ. ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಎಂ.ಆರ್‌. ದಿನೇಶ್‌, ಎ.ಪಿ. ಚಂದ್ರಶೇಖರ್‌ ರಚಿಸಿರುವ ‘ಹಲಸು ಬಿಡಿಸಿದಾಗ’ ಪುಸ್ತಕ ಬಿಡುಗಡೆ ಮಾಡಲಿ ದ್ದಾರೆ. ‘ಸಿದ್ದು’ ಕೆಂಪು ಹಲಸಿನ ಖ್ಯಾತಿಯ ತುಮಕೂರಿನ ಪರಮೇಶ್‌, ದೊಡ್ಡಬಳ್ಳಾಪುರದ ಹಲಸು ಬೆಳೆಗಾರರ ಸಂಘದ ಅಧ್ಯಕ್ಷ ರವಿಕುಮಾರ್‌ ಮತ್ತು ಹಿರೇಹಳ್ಳಿ ಫಾರಂನ ವಿಜ್ಞಾನಿ ಡಾ. ಕರುಣಾಕರನ್‌ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ

ಭಾನುವಾರ ಮಧ್ಯಾಹ್ನ 12ಗಂಟೆಗೆ ಹಲಸಿನ ಅಡುಗೆ ಸ್ಪರ್ಧೆ, 2 ಗಂಟೆಗೆ ಹಲಸಿನ ಹಣ್ಣು ತಿನ್ನುವ ಸ್ಪರ್ಧೆ ಏರ್ಪಡಿಸಲಾಗಿದೆ.

ತರಬೇತಿ: ಆ.3ರಂದು ಬೆಳಗ್ಗೆ 11ಗಂಟೆಗೆ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ರೈತರಿಗಾಗಿ ಹಲಸು ನೆಟ್ಟು-ಬರ ಅಟ್ಟು ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಹಲಸಿನ ವಿವಿಧ ತಳಿಗಳ ಬಗ್ಗೆ ಭಾರತೀಯ ತೋಟಗಾರಿಕಾ ಸಂಶೋಧನಾ ಕೇಂದ್ರದ ವಿಜ್ಞಾನಿ ಡಾ.ಕರುಣಾಕರ್‌, ಸಿದ್ದು ಕೆಂಪು ಹಲಸಿನ ತಳಿಯ ವಿಶೇಷತೆಗಳ ಬಗ್ಗೆ ತುಮಕೂರು ಜಿಲ್ಲೆಯ ಚೇಳೂರಿನ ಎಸ್‌.ಎಸ್‌. ಪರಮೇಶ್‌, ಒಣಭೂಮಿ ತೋಟಗಾರಿಕೆಯಲ್ಲಿ ಹಲಸಿನ ಕೃಷಿ ಮಾಡುವ ಬಗ್ಗೆ ಮೈಸೂರಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜಿ.ಡಿ.ದಿನೇಶ್‌ಕುಮಾರ್‌, ಅತಿ ಸಾಂದ್ರ ಪದ್ಧತಿ ಯಲ್ಲಿ ಹಲಸು ಬೆಳೆವ ಬಗ್ಗೆ ದೇವನಹಳ್ಳಿಯ ಶಿವನಾಪುರದ ರಮೇಶ್‌ ಮತ್ತು ಹಲಸು ಬೆಳೆಗಾರರ ಸಂಘಟನೆಯ ಯಶಸ್ಸಿನ ಬಗ್ಗೆ ದೊಡ್ಡಬಳ್ಳಾಪುರದ ತೂಬನ ಗೆರೆಯ ರವಿಕುಮಾರ್‌ ಮಾಹಿತಿ ನೀಡಲಿದ್ದಾರೆ. ಆಸಕ್ತರು ಹೆಸರು ನೋಂದಾಯಿಸಿಕೊಳ್ಳಲು ಮೊ. 8867252979 ಸಂಪರ್ಕಿಸಬಹುದು.

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.