ಹಳೆಯಂಗಡಿ ಗ್ರಾಮ ಪಂಚಾಯತ್ ನ ಆಡಳಿತದ ವಿರುದ್ಧ ಪ್ರತಿಭಟನೆ
Team Udayavani, Aug 2, 2019, 1:15 PM IST
ಹಳೆಯಂಗಡಿ: ಗ್ರಾಮ ಪಂಚಾಯತ್ ನ ಆಡಳಿತದ ವಿರುದ್ಧ ಸಾರ್ವಜನಿಕರು ಹಾಗೂ ಬಿಜೆಪಿಯ ಸ್ಥಾನೀಯ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಗ್ರಾಮ ಪಂಚಾಯತ್ ಭಾಗದಲ್ಲಿ ಪ್ರತಿಭಟನೆ ನಡೆಯಿತು.
ಗ್ರಾಮ ಪಂಚಾಯತ್ ನ ಆಡಳಿತದಲ್ಲಿ ಗ್ರಾಮ ಸಭೆ ವಾರ್ಡ್ ಸಭೆ ಸಾಮಾನ್ಯ ಸಭೆ ಕಳೆದ 10 ತಿಂಗಳಿಂದ ನಡೆಯುತ್ತಿಲ್ಲ. ಗ್ರಾಮಸ್ಥರಿಗೆ ಯಾವೊಂದು ಸೌಲಭ್ಯ ಸಿಗುತ್ತಿಲ್ಲ. ತ್ಯಾಜ್ಯ ವಿಲೇವಾರಿ ಸರಿಯಾಗಿ ನಡೆಯುತ್ತಿಲ್ಲ. ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆದಿದೆ.
ಮಂಗಳೂರು ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಣ ಅಧಿಕಾರಿ ಸದಾನಂದ ಅವರು ಸ್ಥಳಕ್ಕೆ ಬಂದು ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ತಾಲೂಕು ಪಂಚಾಯತ್ ಸದಸ್ಯ ಜೀವನ್ ಪ್ರಕಾಶ್, ಹಳೆಯಂಗಡಿ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯರು., ನ್ಯಾಯವಾದಿ ಡೇನಿಯಲ್ ಡಿಸೋಜ, ಬಿಜೆಪಿಯ ಈಶ್ವರ್ ಕಟೀಲು, ನರೇಂದ್ರ ಪ್ರಭು, ಮನೋಜ್ ಕುಮಾರ್, ಶೂಗೇಂದ್ರ ಸಸಿಹಿತ್ಲು, ಸತೀಶ್ ಭಟ್, ರಾಮಚಂದ್ರ ಮತ್ತಿತರರು ಭಾಗವಹಿಸಿದ್ದರು
ಪಣಂಬೂರು ಎಸಿಪಿ ಶ್ರೀನಿವಾಸಗೌಡ ಹಾಗೂ ಮುಲ್ಕಿ ಇನ್ಸ್ಪೆಕ್ಟರ್ ಅನಂತಪದ್ಮನಾಭ ಇವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು