ಚತುಷ್ಪಥ ಕೆಲಸ ಅವೈಜ್ಞಾನಿಕ: ಐಆರ್ಬಿ ವಿರುದ್ಧ ಆಕ್ರೋಶ
Team Udayavani, Aug 2, 2019, 2:31 PM IST
ಅಂಕೋಲಾ: ಬೆಳಸೆ ಗ್ರಾಮಸ್ಥರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಅಂಕೋಲಾ: ಚತುಷ್ಪಥ ಹೆದ್ದಾರಿ ಕಾಮಗಾರಿ ಕೈಗೊಂಡ ಐಆರ್ಬಿ ಕಂಪನಿ ಅವೈಜ್ಞಾನಿಕ ಕಾಮಗಾರಿಯಿಂದ ಬೆಳಸೆಯ 40 ಎಕರೆ ಕೃಷಿ ಭೂಮಿ ಜಲಾವೃತಗೊಂಡು ಕೃಷಿ ಕಾರ್ಯ ಮಾಡಲು ಸಾಧ್ಯವಾಗುತ್ತಿಲ್ಲ. ಸ್ಥಳಕ್ಕೆ ಅಧಿಕಾರಿಗಳು ಬಂದು ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುರುವಾರ ಬೆಳಸೆ ಗ್ರಾಮಸ್ಥರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಐಆರ್ಬಿ ಕಂಪನಿಯವರು ಬೆಳಸೆ ರೈಲ್ವೆ ಸೇತುವೆ ಅಡಿಯಿಂದ ರಸ್ತೆ ಹಾಗೂ ಹಳ್ಳಕ್ಕೆ ಸೇತುವೆ ನಿರ್ಮಿಸುವ ಸಲುವಾಗಿ ರೈತರ ಕೃಷಿ ಜಮೀನು ಸ್ವಾಧೀನಪಡಿಸಿಕೊಂಡು ಕೃಷಿ ಭೂಮಿಯನ್ನು ಸಮತಟ್ಟುಗೊಳಿಸಿ ರಸ್ತೆ ಹಾಗೂ ಸೇತುವೆ ನಿರ್ಮಿಸಲು ಮಣ್ಣು ಹಾಕಲಾಗಿದೆ. ಸ್ವಾಧೀನಪಡಿಸಿಕೊಂಡ ಜಮೀನಿನ ಮಧ್ಯ ಭಾಗದಲ್ಲಿ ಹಳ್ಳ ಹರಿಯುತ್ತಿದ್ದು, ಈ ಹಳ್ಳಕ್ಕೆ ಸೇತುವೆ ನಿರ್ಮಿಸುವ ಸಂದರ್ಭದಲ್ಲಿ ಹೂಳು ತುಂಬಿಕೊಂಡಿದೆ. ಮಳೆಗಾಲದಲ್ಲಿ ನೀರಿನ ಹರಿವು ಹೆಚ್ಚಿರುವುದರಿಂದ ನೀರು ಸರಿಯಾಗಿ ಹರಿದು ಹೋಗಲಾರದೆ 40 ಎಕರೆ ಅಕ್ಕ ಪಕ್ಕದ ಕೃಷಿ ಭೂಮಿ ಮುಳುಗಡೆಯಾಗಿ ತೊಂದರೆಯಾಗಿದೆ. ಕಂಪನಿಯವರನ್ನು ಸ್ಥಳಕ್ಕೆ ಕರೆಸಿ ಸಮಸ್ಯೆ ಬಗೆಹರಿಸದಿದ್ದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ತಹಶೀಲ್ದಾರ್ ಅಶೋಕ ಗುರಾಣಿ ಮನವಿ ಸ್ವೀಕರಿಸಿ ಕಂಪನಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಪರಿಹಾರದ ಕುರಿತು ಚರ್ಚಿಸುವ ಭರವಸೆ ನೀಡಿದರು. ಜಿಪಂ ಸದಸ್ಯ ಜಗದೀಶ ನಾಯಕ ಮೊಗಟಾ, ಬೆಳಸೆ ಗ್ರಾಪಂ ಅಧ್ಯಕ್ಷ ಶಂಕರ ಗೌಡ, ತಾಪಂ ಸದಸ್ಯ ಬೀರಾ ಗೌಡ, ಗ್ರಾಪಂ ಸದಸ್ಯರಾದ ಸೋಮು ಗೌಡ, ರಮೇಶ ಗೌಡ, ತಿಮ್ಮಾ ಗೌಡ, ಪ್ರಮುಖರಾದ ಬೊಮ್ಮಯ್ಯ ಗೌಡ, ಮಾರುತಿ ಗೌಡ, ಲಕ್ಷ್ಮಣ ಗೌಡ, ನಾಗಪ್ಪ ಗೌಡ, ಮಂಜುನಾಥ ಗೌಡ, ನಾಗರಾಜ ಗೌಡ, ಮಣಿಕಂಠ ಗೌಡ ಸೇರಿದಂತೆ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ
UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ
B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು
ಬಿಜೆಪಿ ಶಾಸಕ ಯತ್ನಾಳ ಶುಗರ್ ಫ್ಯಾಕ್ಟ್ರಿ ಹೆಂಗ್ ಕಟ್ಟಿದ್ರು: ಶಿವಾನಂದ ಪಾಟೀಲ