ಕಲ್ಲು ಬಂಡೆ ಮೇಲೆ ಭತ್ತದ ಕೃಷಿ ಮಾಡಿದ ನಕ್ರೆಯ ಕೃಷಿಕ

ವರ್ಷಕ್ಕೆ ನಾಲ್ಕು ಕ್ವಿಂಟಾಲ್‌ ಅಕ್ಕಿ ಉತ್ಪಾದನೆ ; ಇತರರಿಗೆ ಮಾದರಿಯಾದ ಸಾಧು ನಕ್ರೆ

Team Udayavani, Aug 3, 2019, 5:23 AM IST

0208KKRAM11

ವಿಶೇಷ ವರದಿ-ಕಾರ್ಕಳ: ಕೃಷಿ ಕಾರ್ಯ ಎನ್ನುವಾಗಲೇ ಮೂಗು ಮುರಿಯುವ ಮಂದಿ ಒಂದು ಕಡೆ. ಫ‌ಲವತ್ತಾದ ಕೃಷಿ ಭೂಮಿಯಿದ್ದರೂ ಕೃಷಿ ಮಾಡದೇ ಹಡೀಲು ಬಿಟ್ಟ ಬಳಗ ಇನ್ನೊಂದು ಕಡೆ. ಇಂಥವರ ಮಧ್ಯೆ ಇಲ್ಲೊಬ್ಬ ರೈತ ಬಂಡೆಯ ಮೇಲೆ ಭತ್ತದ ಕೃಷಿ ಮಾಡಿ ಗಮನ ಸೆಳೆದಿದ್ದಾರೆ.

ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ನಕ್ರೆ ನಿವಾಸಿ ಸಾಧು (55) ಇಂತಹ ಅಪರೂಪದ ಕೃಷಿಕ, ಸಾಧಕ. ತನ್ನಲ್ಲಿರುವ 1.80 ಎಕ್ರೆ ಭೂಮಿಯಲ್ಲಿ ಮಿಶ್ರ ಬೆಳೆಯನ್ನು ಬೆಳೆಯುತ್ತಿರುವ ಇವರು ಬಂಡೆಕಲ್ಲು ಮೇಲೆಯೂ ಭತ್ತ ಬೇಸಾಯ ಮಾಡುತ್ತಿರುವುದೇ ವಿಶೇಷ. ಕಾರ್ಕಳದಲ್ಲಿ ಎತ್ತ ನೋಡಿದರತ್ತ ಕಾಣಸಿಗುವುದೇ ಹಾಸು ಬಂಡೆಕಲ್ಲುಗಳು. ಹಲವು ಪ್ರದೇಶಗಳು ಬಂಡೆಕಲ್ಲುಗಳಿಂದಲೇ ಆವೃತವಾಗಿದೆ. ಇಂತಹ ಬಂಡೆಕಲ್ಲು ಮೇಲೂ ಬೇಸಾಯ ಮಾಡಬಹುದೆಂದು ಸಾಧಿಸಿ ಸಾಧಿಸಿ ಕೃಷಿ ಕುರಿತು ನಿರಾಸಕ್ತಿ ಹೊಂದುವವರಿಗೆ ಇವರು ಪ್ರೇರಣೆಯಾಗಿದ್ದಾರೆ.

ಇತಿಹಾಸ ಪ್ರಸಿದ್ಧ ನಕ್ರೆಕಲ್ಲು ಬುಡಭಾಗದಲ್ಲಿರುವ ಒಂಟೆಚಾರು ಎಂಬಲ್ಲಿ ವಾಸವಾಗಿರುವ ಸಾಧು ಕೃಷಿ ಕಾರ್ಯದಲ್ಲಿ ನೆಮ್ಮದಿ ಕಂಡವರು. ಹತ್ತು ಅಡಿ ಆಳದ ಬಾವಿಯಲ್ಲಿ ವರ್ಷವಿಡೀ ಸಾಕಾಗುವಷ್ಟು ಜಲಧಾರೆಯಿರುವುದು ಅವರ ಪಾಲಿಗೆ ವರವಾಗಿ ಪರಿಣಮಿಸಿದೆ.

ಮಿಶ್ರ ಬೆಳೆಗಾರ
ಸಾಧು ಅವರು ಮಿಶ್ರಬೆಳೆ ಬೆಳೆಯು ತ್ತಾರೆ. ಅಡಿಕೆ, ತೆಂಗು ಮಧ್ಯೆ ಬಾಳೆ ಗಿಡ, ಕರಿಮೆಣಸು ಮಾಡಿದ್ದಾರೆ. ಗೇರು ಗಿಡವೂ ಇದೆ. ಬಾಳೆಕಾಯಿ ಮತ್ತು ಬಾಳೆ ಎಲೆಯನ್ನೂ ಮಾರಾಟ ಮಾಡುತ್ತಾರೆ. ಮಳೆಗಾಲ ಮತ್ತು ಬೇಸಗೆಯಲ್ಲಿ ವಿವಿಧ ಬಗೆಯ ತರಕಾರಿಗಳನ್ನು ಬೆಳೆದು ಸೈ ಎಣಿಸಿಕೊಂಡಿದ್ದಾರೆ. ಹೀಗೆ ಕೃಷಿಯಲ್ಲೇ ಖುಷಿ ಕಾಣುತ್ತಿದೆ ಸಾಧು ಕುಟುಂಬ.

ಕಠಿನ ಪರಿಶ್ರಮಿ
ಸ್ವಂತ ಶ್ರಮದಿಂದಲೇ ಬಂಡೆ ಕಲ್ಲುಗಳಿಂದ ಕೂಡಿದ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತಿಸಿದ್ದಾರೆ. ದಿನಂಪ್ರತಿ ಕೂಲಿ ಕೆಲಸಕ್ಕೆ ತೆರಳುವ ಅವರದ್ದು ಕಠಿನ ದುಡಿಮೆ. ಬೆಳಗ್ಗೆ ಮತ್ತು ಸಂಜೆ ಮಾತ್ರ ತನ್ನ ಜಮೀನಿನಲ್ಲಿ ಕೃಷಿ ಕಾಯಕ ಮಾಡುತ್ತಾರೆ. ಪತ್ನಿ ಶಾಂತಾರೊಂದಿಗೆ ಜೀವನ ನಡೆಸುತ್ತಿರುವ ಅವರಿಗೆ ಮೂವರು ಹೆಣ್ಣು ಮಕ್ಕಳು.‌ ಇವರು ಕೃಷಿಯಲ್ಲೇ ಸಂತೃಪ್ತಿಯ ಬದುಕು ಕಾಣುತ್ತಿದ್ದಾರೆ.

ಬಂಡೆ ಮೇಲೆ ಕೃಷಿ ವಿಧಾನ
ಮನೆ ಪಕ್ಕದಲ್ಲಿರುವ ಸುಮಾರು 55 ಸೆಂಟ್ಸ್‌ ಭೂಮಿ ಅಕ್ಷರಶಃ ಬಂಡೆಯಿಂದ ಆವೃತವಾಗಿದೆ. ಬಂಡೆಯಲ್ಲಿನ ಏರುತಗ್ಗುಗಳನ್ನು ಸರಿಪಡಿಸಿ, ನಾಲ್ಕು ಅಡಿಯಷ್ಟು ಮಣ್ಣನ್ನು ಹೊರಗಿನಿಂದ ತಂದು ತುಂಬಿಸಲಾಗಿದೆ. ಮಳೆಗಾಲ ಆರಂಭವಾಗುತ್ತಲೇ ಯಂತ್ರದ ಮೂಲಕ ಗದ್ದೆಯನ್ನು ಉಳುಮೆ ಮಾಡಿ ಇವರು ಭತ್ತ ಬೇಸಾಯ ಮಾಡುತ್ತಾರೆ. ವರ್ಷಕ್ಕೆ ನಾಲ್ಕು ಕ್ವಿಂಟಾಲ್‌ ಅಕ್ಕಿ ದೊರೆಯುತ್ತಿದೆ. ಮನೆಗೆ ಬೇಕಾಗುವಷ್ಟು ಆಹಾರ, ಹಸುಗಳಿಗೆ ಬೇಕಾಗುವಷ್ಟು ಬೆ„-ಹುಲ್ಲು ಪಡೆಯುತ್ತಿದ್ದಾರೆ.

ಮನಸ್ಸಿದ್ದರೆ ಕೃಷಿಯಲ್ಲೂ ಲಾಭ ಗಳಿಸಬಹುದು
ದುಡಿಯುವ ಮನಸ್ಸಿದ್ದರೆ ಕೃಷಿಯಲ್ಲೂ ಲಾಭ ಗಳಿಸಬಹುದು. ಕಲ್ಲುಗಳಿಂದ ಕೂಡಿದ ಬರಡಾದ ಭೂಮಿಯನ್ನು ಕೃಷಿ ಯೋಗ್ಯ ಭೂಮಿಯನ್ನಾಗಿ ಪರಿವರ್ತಿಸಿದೆ ಎನ್ನುವ ಹೆಮ್ಮೆಯಿದೆ. ನಮಗೆ ಬೇಕಾದ ಆಹಾರವನ್ನು ನಾವೇ ಉತ್ಪಾದಿಸುತ್ತಿರುವುದು ಸಂತಸವನ್ನುಂಟು ಮಾಡಿದೆ.
-ಸಾಧು ನಕ್ರೆ,ಕೃಷಿಕ

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.