ಮುಕ್ತ ರಾಜತಾಂತ್ರಿಕ ನೆರವಿಗೆ ಕೋರಿಕೆ
ಜಾಧವ್ಗೆ ರಾಜತಾಂತ್ರಿಕ ನೆರವಿಗೆ ಪಾಕ್ ಷರತ್ತು
Team Udayavani, Aug 3, 2019, 5:43 AM IST
ಹೊಸದಿಲ್ಲಿ: ಪಾಕಿಸ್ಥಾನ ಜೈಲಿನಲ್ಲಿ ರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ಗೆ ರಾಜತಾಂತ್ರಿಕ ನೆರವು ಒದಗಿಸ ಬೇಕು ಎಂದು ಅಂತಾ ರಾಷ್ಟ್ರೀಯ ನ್ಯಾಯಾಲಯ ಆದೇಶ ನೀಡಿದ್ದರೂ ಪಾಕಿಸ್ಥಾನ ಕ್ಯಾತೆ ತೆಗೆಯುತ್ತಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಪಾಕಿಸ್ಥಾನವು, ಜಾಧವ್ರನ್ನು ರಾಜತಾಂತ್ರಿಕರು ಭೇಟಿ ಮಾಡುವಾಗ ಪಾಕಿಸ್ಥಾನ ಅಧಿಕಾರಿಯೂ ಇರಬೇಕು ಎಂಬ ಷರತ್ತನ್ನು ವಿಧಿಸಿದೆ ಎನ್ನಲಾಗಿದೆ. ಅಲ್ಲದೆ, ಈ ಹಿಂದೆ ಜಾಧವ್ ತಾಯಿ ಮತ್ತು ಕುಟುಂಬ ಸದಸ್ಯರು ಭೇಟಿ ನೀಡಿದಾಗ ಅಳವಡಿಸಿದ್ದಂತೆ ಸಿಸಿಟಿವಿ ಅಳವಡಿಸಬೇಕು ಎಂದೂ ಬೇಡಿಕೆ ಸಲ್ಲಿಸಿದೆ. ಅದರೆ ಇದಕ್ಕೆ ಒಪ್ಪದ ಭಾರತ ವಿಚಕ್ಷಣೆಯಿಂದ ಮುಕ್ತವಾಗಿ ರಾಜತಾಂತ್ರಿಕ ಸಂಪರ್ಕಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸೂಚಿಸಿದೆ.
ದೌರ್ಜನ್ಯ ಮತ್ತು ಪ್ರತೀಕಾರದ ಭೀತಿ ಇಲ್ಲದ ಮುಕ್ತವಾದ ಪರಿಸರದಲ್ಲಿ ಜಾಧವ್ ಜತೆ ಸಂಪರ್ಕ ಅವಕಾಶ ಕಲ್ಪಿಸಬೇಕು ಎಂದು ಭಾರತ ಆಗ್ರಹಿಸಿದೆ. ಕೆಲವೇ ದಿನಗಳ ಹಿಂದಷ್ಟೇ ಐಸಿಜೆ ತೀರ್ಪಿನ ಹಿನ್ನೆಲೆ ಯಲ್ಲಿ ಪಾಕಿಸ್ಥಾನ ಈ ನಿರ್ಧಾರ ಕೈಗೊಂಡಿದೆ. ಆದರೆ ಭಾರತದ ಬೇಡಿಕೆಗೆ ಪಾಕಿಸ್ಥಾನ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
MUST WATCH
ಹೊಸ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?