ಹೇಳ್ಳೋರಿದ್ರೂ ಕೇಳ್ಳೋರಿಲ್ಲ!

ವೈದ್ಯರ ಸಮಸ್ಯೆ-ಸೌಲಭ್ಯವಿದ್ದರೂ ಕಲ್ಪಿಸುವವರಿಲ್ಲ• ಹರಿದ ಹಾಸಿಗೆ-ಹೊದಿಕೆ ವ್ಯವಸ್ಥೆ ಇಲ್ಲ

Team Udayavani, Aug 3, 2019, 9:51 AM IST

3-Agust-1

ಅಫಜಲಪುರ: ಅತನೂರ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ತಾ.ಪಂ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ ಭೇಟಿ ನೀಡಿ ಪರಿಶೀಲಿಸಿದರು.

ಮಲ್ಲಿಕಾರ್ಜುನ ಹಿರೇಮಠ
ಅಫಜಲಪುರ:
ಸರ್ಕಾರ ಗ್ರಾಮೀಣ ಭಾಗದ ಜನರಿಗೆ ಸುಲಭವಾಗಿ ಆರೋಗ್ಯ ಸೇವೆಗಳು ಸಿಗಲಿ ಎನ್ನುವ ಉದ್ದೇಶದಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕಟ್ಟಿಸಿದೆ. ಆದರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಜನರ ರೋಗ ಕಳೆಯುವ ಬದಲಿಗೆ ಅವುಗಳೇ ರೋಗಗ್ರಸ್ಥವಾಗಿರುವಾಗ ಜನಸಾಮಾನ್ಯರು ಆರೋಗ್ಯ ಸೇವೆಗಳನ್ನು ಅರಸಿ ನಗರ, ಪಟ್ಟಣಗಳಿಗೆ ಹೋಗಬೇಕಾದ ಸನ್ನಿವೇಶ ಬಂದಿದೆ.

ತಾಲೂಕಿನಾದ್ಯಂತ ಆರು ಹಾಸಿಗೆಗಳ ಒಟ್ಟು ಒಂಭತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಈ ಪೈಕಿ ಬಡದಾಳ ಮತ್ತು ದೇಸಾಯಿ ಕಲ್ಲೂರ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲ. ಇರುವ ಸಿಬ್ಬಂದಿಗಳ ಮೇಲೆ ಆಸ್ಪತ್ರೆ ನಡೆಸಲಾಗುತ್ತಿದೆ. ಉಳಿದಂತೆ ಏಳು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾಮಾನ್ಯ ವೈದ್ಯರು, ಐದು ಕಡೆ ಆಯುಷ್‌ ವೈದ್ಯರು ಆಸ್ಪತ್ರೆ ನಡೆಸುಕೊಂಡು ಹೋಗುತ್ತಿದ್ದಾರೆ. ಹಳ್ಳಿಗಳಲ್ಲಿ ಸರ್ಕಾರಿ ಸುಸಜ್ಜಿತ ಆಸ್ಪತ್ರೆಗಳು ನಿರ್ಮಾಣವಾಗುತ್ತಿವೆ. ಇನ್ನೇನು ಉಚಿತವಾಗಿ, ತ್ವರಿತವಾಗಿ ಆರೋಗ್ಯ ಸೇವೆಗಳು ಸಿಗಲಿವೆ ಎಂದು ಜನಸಾಮಾನ್ಯರು ಆಶಾಭಾವನೆ ಇಟ್ಟುಕೊಂಡಿದ್ದರು. ಆದರೆ ಎಲ್ಲ ಕಡೆ ಕಟ್ಟಡಗಳಾಗುತ್ತಿವೆ, ಆದರೆ ವೈದ್ಯರಿಲ್ಲ, ಸಿಬ್ಬಂದಿಗಳಿಲ್ಲ, ಔಷಧಿ ಇಲ್ಲ ಎನ್ನುವ ಅನೇಕ ಕೊರತೆಗಳನ್ನು ಕಂಡು ಜನಸಾಮಾನ್ಯರು ಸರ್ಕಾರಿ ಆಸ್ಪತ್ರೆಗಳಿಂದ ದೂರ ಸರಿಯುತ್ತಿದ್ದಾರೆ.

ಸೌಲಭ್ಯ ಇದ್ದರೂ ಕಲ್ಪಿಸುವವರಿಲ್ಲ: ತಾಲೂಕಿನ ಒಂಭತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಡದಾಳ ಮತ್ತು ದೇಸಾಯಿ ಕಲ್ಲೂರ ಗ್ರಾಮಗಳಲ್ಲಿ ಆಯುಷ್‌ ಮತ್ತು ಸಾಮಾನ್ಯ ವೈದ್ಯರಿಲ್ಲ. ಇರುವ ಸಿಬ್ಬಂದಿಗಳ ಮೇಲೆ ಆಸ್ಪತ್ರೆ ನಡೆಸಿಕೊಂಡು ಹೋಗಲಾಗುತ್ತಿದೆ. ಉಳಿದ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರಿದ್ದರೂ ಇಲ್ಲದಂತಾಗುತ್ತಿದೆ. ಬಡ ಜನರಿಗೆ ಸರಿಯಾದ ಚಿಕಿತ್ಸೆಗಳು ಸಿಗುತ್ತಿಲ್ಲ. ಸರ್ಕಾರ ಆರೋಗ್ಯ ಸೇವೆಗಳ ಹೆಸರಿನಲ್ಲಿ ಬಿಡುಗಡೆ ಮಾಡುವ ಯೋಜನೆಗಳು, ಸೌಲಭ್ಯಗಳು ಜನರಿಗೆ ತಲುಪಿಸುವವರು ಇಲ್ಲದಂತಾಗಿದೆ. ಆದರೆ ಎಲ್ಲ ಸೇವೆಗಳು, ಸೌಲಭ್ಯಗಳು ಜನರಿಗೆ ತಲುಪಿದಂತೆ ಬಿಂಬಿಸಲಾಗುತ್ತಿದೆ. ಇದು ನಿಜಕ್ಕೂ ದುರಂತದ ಸಂಗತಿಯಾಗಿದೆ.

ಹರಿದ ಬೆಡ್‌: ಆರೋಗ್ಯ ಕೇಂದ್ರಗಳಲ್ಲಿ ಅವಳಡಿಸಲಾಗಿರುವ ಬೆಡ್‌ಗಳು ಹರಿದು ಹೋಗಿದ್ದು, ರೋಗಿಗಳು ಅದರ ಮೇಲೆ ಮಲಗಿ ಚಿಕಿತ್ಸೆ ಪಡೆಯುವ ಸನ್ನಿವೇಶ ಬಂದಿದೆ. ಹರಿದ ಬೆಡ್‌ಗಳ ಮೇಲೆ ಬೆಡ್‌ಶಿಟ್ ಸಹ ಇಲ್ಲ. ಹೀಗಾಗಿ ರೋಗ ವಾಸಿಗೆಂದು ಆಸ್ಪತ್ರೆಗೆ ಬಂದು ರೋಗ ಹಚ್ಚಿಕೊಂಡು ಹೋಗುವ ಪರಿಸ್ಥಿತಿ ರೋಗಿಗಳದ್ದಾಗಿದೆ.

ಬೀದಿ ದೀಪಗಳಿಲ್ಲ: ಆಸ್ಪತ್ರೆ ಮತ್ತು ಸಿಬ್ಬಂದಿಗಳ ವಸತಿ ಗೃಹಗಳ ರಸ್ತೆಗಳಿಗೆ ವಿದ್ಯುತ್‌ ದೀಪದ ವ್ಯವಸ್ಥೆ ಇಲ್ಲದಂತಾಗಿದ್ದು ಸಿಬ್ಬಂದಿ ಭಯದಲ್ಲಿ ಕಾಲ ಕಳೆಯುವಂತಾಗಿದೆ. ಅದರಲ್ಲೂ ಅತನೂರ ಗ್ರಾಮದ ಆರೋಗ್ಯ ಕೇಂದ್ರಕ್ಕೆ ಹೋಗಲು ಇರುವ ದಾರಿಗೆ ವಿದ್ಯುತ್‌ ದೀಪದ ವ್ಯವಸ್ಥೆ ಇಲ್ಲ. ಸಿಬ್ಬಂದಿಗಳಿರುವ ವಸತಿ ಗೃಹದ ಬಳಿ ವಿದ್ಯುತ್‌ ದೀಪಗಳಿಲ್ಲ. ರಾತ್ರಿಯಾದರೆ ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ರಾತ್ರಿಯಾಗುತ್ತಿದ್ದಂತೆ ಕುಡುಕರ ಕಾಟ ಹೆಚ್ಚಾಗುತ್ತಿದೆ. ಅತನೂರ ಗ್ರಾಮದ ರೀತಿಯಲ್ಲಿ ಅನೇಕ ಗ್ರಾಮಗಳಲ್ಲಿ ವಿದ್ಯುತ್‌ ದೀಪದ ವ್ಯವಸ್ಥೆ ಇಲ್ಲ. ಹೀಗಾಗಿ ಸಾಕಷ್ಟು ಸಮಸ್ಯೆಯಾಗುತ್ತಿವೆ.

ಸಿಸಿ ಕ್ಯಾಮೆರಾ ಸಮಸ್ಯೆ: ಆರೋಗ್ಯ ಕೇಂದ್ರದಲ್ಲಿ ನಡೆಯುವ ಘಟನೆಗಳ ಬಗ್ಗೆ ನೀಗಾ ಇಡಲು ಸಿಸಿ ಕ್ಯಾಮೆರಾ ಅಳವಡಿಕೆ ಅವಶ್ಯಕವಾಗಿದೆ. ಆದರೆ ತಾಲೂಕಿನ ಗೊಬ್ಬೂರ (ಬಿ) ಮತ್ತು ರೇವೂರ (ಬಿ) ಆಸ್ಪತ್ರೆಗಳಲ್ಲಿ ಮಾತ್ರ ಸಿಸಿ ಅಳವಡಿಸಲಾಗಿದ್ದು, ಉಳಿದ ಆರೋಗ್ಯ ಕೇಂದ್ರಗಳಲ್ಲಿ ಅಳವಡಿಸಿಲ್ಲ. ಹೀಗಾಗಿ ಇಲ್ಲಿ ನಡೆಯುವ ಘಟನೆಗಳು ಯಾರಿಗೂ ತಿಳಿಯದಂತಾಗಿದೆ. ಇನ್ನಾದರೂ ಸಂಬಂಧಿಸಿದವರು ಕ್ರಮ ಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.