ತರಕಾರಿ ಬೆಳೆದ ರೈತನಿಗಿಲ್ಲ ಮಾರುಕಟ್ಟೆ ಮೌಲ್ಯ

ನೆರೆ ರಾಜ್ಯದ ಮಾರುಕಟ್ಟೆಗೆ ಸಾಗಾಟ ಅನಿವಾರ್ಯ • ವ್ಯಾಪಾರಿಗಳಿಂದ ನಡೆಯುತ್ತಿದೆ ರೈತರ ಶೋಷಣೆ

Team Udayavani, Aug 3, 2019, 10:16 AM IST

3-Agust-6

ಔರಾದ: ತಾಲೂಕಿನಲ್ಲಿ ಬೆಳೆದ ತರಕಾರಿ ಬೆಳೆಯನ್ನು ನೆರೆ ರಾಜ್ಯಕ್ಕೆ ಮಾರಾಟ ಮಾಡಲು ಖಾಸಗಿ ವಾಹನದಲ್ಲಿ ಸಾಗಿಸುತ್ತಿರುವುದು.

ರವೀಂದ್ರ ಮುಕ್ತೇದಾರ
ಔರಾದ:
ಗಡಿ ತಾಲೂಕಿನಲ್ಲಿ ರೈತರು ಬೆಳೆಯುವ ತರಕಾರಿಗೆ ಸರಿಯಾದ ಬೆಲೆ ಸಿಗದಿರುವ ಕಾರಣದಿಂದ ನೆರೆ ರಾಜ್ಯದ ತರಕಾರಿ ಮಾರುಕಟ್ಟೆಗೆ ಹೋಗಿ ಮಾರಾಟ ಮಾಡಬೇಕಾದ ಅನಿವಾರ್ಯತೆ ಇದೆ. ಇದು ತಾಲೂಕಿನ ಪ್ರತಿಯೊಂದು ಗ್ರಾಮಗಳಲ್ಲಿ ತರಕಾರಿ ಬೆಳೆಯುವ ರೈತರ ಪ್ರತಿ ವರ್ಷದ ಅಸಹಾಯಕತೆಯಾಗಿದೆ.

ಔರಾದ ತಾಲೂಕು ಕೇಂದ್ರದಲ್ಲಿ ಸರ್ಕಾರದಿಂದ ತರಕಾರಿ ಮಾರುಕಟ್ಟೆಯ ಉತ್ತಮ ಕಟ್ಟಡ ನಿರ್ಮಿಸಲಾಗಿದೆ. ಆದರೆ ರೈತರು ಬೆಳೆಯುವ ತರಕಾರಿಗೆ ಮಾತ್ರ ಉತ್ತಮ ಬೆಲೆ ಸಿಗುತ್ತಿಲ್ಲ. ಹಾಗೂ ರೈತರ ಬೆಳೆಗೆ ವ್ಯಾಪಾರಿಗಳಿಂದ ನಗದು ಹಣ ತಕ್ಷಣ ಸಿಗದ ಹಿನ್ನೆಲೆಯಲ್ಲಿ ನೆರೆ ರಾಜ್ಯಕ್ಕೆ ಹೋಗಿ ತರಕಾರಿ ಮಾರುವ ಪರಿಸ್ಥಿತಿ ಇದೆ.

ಬೆಲೆಯಲ್ಲಿ ಭಾರಿ ವ್ಯತ್ಯಾಸ: ಔರಾದ ತರಕಾರಿ ಮಾರುಕಟ್ಟೆಯಲ್ಲಿ ಹಸಿ ಮೆಣಸಿನಕಾಯಿಯನ್ನು ಮಾರಾಟಕ್ಕೆ ತಂದರೆ ಪ್ರತಿ ಕೆಜಿಗೆ 30 ರೂಪಾಯಿ ಬೆಲೆ ಸಿಗುತ್ತಿದೆ. ಆದರೆ ಅದೇ ಮಹಾರಾಷ್ಟ್ರದ ದೇಗಲೂರ ಮಾರುಕಟ್ಟೆಯಲ್ಲಿ 80 ರೂ. ಪ್ರತಿ ಕೆಜಿ ದರದಲ್ಲಿ ಮಾರಾಟವಾಗುತ್ತಿದೆ. ಹೀಗಾಗಿ ರೈತರು ದೇಗಲೂರ, ಉದಗೀರ ಮತ್ತು ತೆಲಂಗಾಣದ ಜಹಿರಾಬಾದ ಮಾರುಕಟ್ಟೆಗೆ ಹೋಗಿ ಮಾರಾಟ ಮಾಡುತ್ತಿದ್ದಾರೆ.

ಅಲ್ಲದೇ ಪಟ್ಟಣದ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟ ಮಾಡಿದ ರೈತರಿಗೆ ವ್ಯಪಾರಿಗಳಿಂದ ಒಂದು ವಾರದ ಬಳಿಕವೇ ಹಣ ಸಿಗುತ್ತದೆ. ರೈತರಿಂದ ತೆರಿಗೆ ಹಾಗೂ ಹಮಾಲಿ ಚಾರ್ಜ್‌ ಎಂದು ಬಿಳಿ ಹಾಳೆಯಲ್ಲಿ ಮೋಡಿ ಭಾಷೆಯಲ್ಲಿ ಬರೆದು ರೈತರಿಗೆ ವ್ಯಾಪಾರಿಗಳು ರಶೀದಿ ನೀಡುತ್ತಾರೆ. ಆದರೆ ನೆರೆ ರಾಜ್ಯದ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟವಾದ ಗಂಟೆಯಲ್ಲಿ ರೈತರ ಕೈಗೆ ಹಣ ಸಿಗುತ್ತದೆ. ಇದರಿಂದ ರೈತರು ತಾಲೂಕಿನಲ್ಲಿ ತರಕಾರಿ ಬೆಳೆದು ನೆರೆ ರಾಜ್ಯಕ್ಕೆ ಹೋಗಿ ಮಾರಾಟ ಮಾಡುವ ಸ್ಥಿತಿ ಬಂದಿದೆ. ನೆರೆ ರಾಜ್ಯದ ವ್ಯಾಪಾರಿಗಳಂತೆ ನಮ್ಮ ತಾಲೂಕಿನ ವ್ಯಾಪಾರಿಗಳು ಕೂಡ ರೈತರಿಗ ಗಂಟೆಯಲ್ಲಿ ಹಣ ನೀಡಲು ಮುಂದಾಗಬೇಕು. ಆಗ ಮಾತ್ರ ಇನ್ನಷ್ಟು ರೈತರು ತೋಟಗಾರಿಕೆ ಬೆಳೆಯ ಮೊರೆ ಹೋಗಲು ಸಾಧ್ಯವಾಗುತ್ತದೆ.

ರೈತರು ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ತಾಲೂಕಿನಲ್ಲಿ ಉತ್ತಮ ಬೆಲೆ ಸಿಗುತ್ತಿಲ್ಲವೆಂದು ನಿರಾಶೆಯಾಗಿ ಕೆಲವರು ತರಕಾರಿ ಬೆಳೆಯುವುದನ್ನೇ ಬಿಟ್ಟರೆ ಇನ್ನುಳಿದ ಕೆಲವರು ನೆರೆ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೊಲದಲ್ಲಿ ಬೆಳೆ ಬೆಳೆಯುವಾಗ ಕಷ್ಟ ಪಡಬೇಕು. ಅದನ್ನು ನೆರೆ ರಾಜ್ಯಕ್ಕೆ ಹೋಗಿ ಮಾರಾಟ ಮಾಡಿ ಬರುವ ತನಕವೂ ಕಷ್ಟ ಪಡಬೇಕು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಹಾಗೂ ಅಧ್ಯಕ್ಷರಿಗೆ ನಮ್ಮ ರೈತರ ಸಮಸ್ಯಗೆ ಸ್ಪಂದಿಸುವ ಮನಸ್ಸು ಯಾಕಿಲ್ಲ ಎಂಬುದು ರೈತರ ಪ್ರಶ್ನೆ.

ತಾಲೂಕು ಕೇಂದ್ರದಲ್ಲಿರುವ ತರಕಾರಿ ಮಾರುಕಟ್ಟೆ ಸುಧಾರಣೆಗಾಗಿ ಸರ್ಕಾರ ಪ್ರತಿವರ್ಷ ಲಕ್ಷಾಂತರ ರೂ. ಖರ್ಚು ಮಾಡುತ್ತಿದೆ. ಆದರೆ ಅದರಿಂದ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಒಳ್ಳೆಯದಾಗುತ್ತಿದೆ. ನಮ್ಮ ರೈತರಿಗೆ ಮಾತ್ರ ಯಾವುದೇ ಲಾಭವಾಗುತ್ತಿಲ್ಲ. ಸರ್ಕಾರ ಹಾಗೂ ಸಬಂಧ ಪಟ್ಟ ಇಲಾಖೆ ಅಧಿಕಾರಿಗಳು ಕಚೇರಿಯಿಂದ ಹೊರಗೆ ಬಂದು ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ನಗದು ರೂಪದ ವ್ಯವಹಾರ ಮಾಡುವ ವ್ಯವಸ್ಥೆ ಮಾಡಬೇಕಾಗಿದೆ.

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.