ಘನತ್ಯಾಜ್ಯ ವಿಲೇವಾರಿಯದ್ದೇ ಚಿಂತೆ

ಘಟಕದಲ್ಲಿ ನಿರ್ಮಿಸಲಾದ ಕಾವಲುಗಾರ ಕೋಣೆ ಸಿಬ್ಬಂದಿ ನೇಮಕವಿಲ್ಲದೇ ನಿರುಪಯುಕ್ತ

Team Udayavani, Aug 3, 2019, 10:47 AM IST

3-Agust-10

ದೇವದುರ್ಗ: ಪೊಲೀಸ್‌ ಠಾಣೆ ಹತ್ತಿರ ಬೆಟ್ಟದಲ್ಲಿ ಹಾಕಲಾಗಿರುವ ಕಸ

ನಾಗರಾಜ ತೇಲ್ಕರ್‌
ದೇವದುರ್ಗ:
ಪಟ್ಟಣದ 23 ವಾರ್ಡ್‌ಗಳಿಂದ ಸಂಗ್ರಹವಾಗುವ ಒಣ, ಹಸಿ ಕಸ ವಿಲೇವಾರಿಯದ್ದೇ ಚಿಂತೆಯಾಗಿದೆ. ಘಟಕದಲ್ಲಿ ಜಾಲಿಗಿಡ ಬೆಳೆದ ಹಿನ್ನೆಲೆಯಲ್ಲಿ ಅಸ್ವಚ್ಛತೆ ವಾತಾವರಣ ನಿರ್ಮಾಣವಾಗಿದೆ. ಎಲ್ಲೆಂದರಲ್ಲಿ ಘನತ್ಯಾಜ್ಯ ಕಸ ಎಸೆಯುವುದರಿಂದ ರೋಗರುಜಿನಿಗಳ ಭೀತಿ ಕಾಡುತ್ತಿದೆ. ಸಮಸ್ಯೆಗೆ ಪುರಸಭೆ ಅಧಿಕಾರಿಗಳೇ ಕಾರಣ ಎನ್ನಲಾಗುತ್ತಿದೆ.

ಪಟ್ಟಣದ ಹೊರವಲಯದ ಕೊಪ್ಪರ ಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯೆ ಘನತ್ಯಾಜ್ಯ ವಸ್ತು ವಿಲೇವಾರಿ ಘಟಕ ನಿರ್ಮಿಸಲಾಗಿದೆ. ಪುರಸಭೆ ಎಸ್‌ಎಫ್‌ಸಿ ಯೋಜನೆ ಅಡಿ 10 ಲಕ್ಷ ರೂ. ವೆಚ್ಚದಲ್ಲಿ ಕಾಂಪೌಡ್‌ ನಿರ್ಮಿಸಿದೆ. ಘಟಕ ಒಳಗೆ ಜಾಲಿಗಿಡಗಳು ಬೆಳೆದು ಅಸ್ವಚ್ಛತೆ ನಿರ್ಮಾಣವಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ವಚ್ಛತೆಗೆ ಗಮನಹರಿಸಲು ಹಿಂದೇಟು ಹಾಕಿದ ಪರಿಣಾಮ ಇದೀಗ ಕಸ ವಿಲೇವಾರಿ ಸಮಸ್ಯೆಯಾಗಿ ಕಾಡುತ್ತಿದೆ.

ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ 2 ಲಕ್ಷ ರೂ. ವೆಚ್ಚದಲ್ಲಿ ಕಾವಲುಗಾರ ಕೋಣೆ ನಿರ್ಮಿಸಲಾಗಿದೆ. ಸಿಬ್ಬಂದಿ ನೇಮಕವಿಲ್ಲದೇ ಕಾವಲುಗಾರ ಕೋಣೆ ನಿರುಪಯುಕ್ತವಾಗಿದೆ. ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಳಸಿದ ಔಷಧಿ ಬಾಟಲ್ ಸೇರಿ ಇತರೆ ವಸ್ತುಗಳನ್ನು ವಾಹನದಲ್ಲಿ ತಂದು ಘಟಕದಲ್ಲಿ ಹಾಕಲಾಗುತ್ತಿದೆ.

ಪಟ್ಟಣದ 23 ವಾರ್ಡ್‌ಗಳಲ್ಲಿ ಸಂಗ್ರಹವಾಗುವ ಒಣ, ಹಸಿ ಕಸ ವಿಲೇವಾರಿ ಘನತ್ಯಾಜ್ಯ ವಸ್ತು ಘಟಕಕ್ಕೆ ಕಸ ಒಯ್ಯದೇ ಎಲ್ಲೆಂದರಲ್ಲಿ ಎಸೆಯಲಾಗುತ್ತಿದೆ. ಡಾನ್‌ ಬಾಸ್ಕೋ ವಿದ್ಯಾ ಸಂಸ್ಥೆ ಹತ್ತಿರ, ವೆಂಗಳಾಪುರಕ್ಕೆ ಹೋಗುವ ಮಾರ್ಗದ ಪೊಲೀಸ್‌ ಠಾಣೆ ಹತ್ತಿರ ಬೆಟ್ಟದಲ್ಲಿ ಕಸ ಎಸೆಯಲಾಗುತ್ತಿದೆ. ಪ್ಲಾಸ್ಟಿಕ್‌ ಸೇರಿ ಇತರೆ ವಸ್ತುಗಳನ್ನುವಾರಕ್ಕೊಂದು ಬಾರಿ ಬೆಂಕಿ ಹಚ್ಚಿ ಸುಟ್ಟು ಹಾಕಬೇಕು. ಪುರಸಭೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆ ಇದೀಗ ಸಾಂಕ್ರಮಿಕ ರೋಗರುಜಿನಿಗಳ ಭೀತಿಯಲ್ಲಿ ನಿವಾಸಿಗಳು ತತ್ತರಿಸಿದ್ದಾರೆ.

ಒಣ, ಹಸಿ ಕಸ ವಿಲೇವಾರಿ ಮಾಡುವ ಉದ್ದೇಶದಿಂದ ಲಕ್ಷಾಂತರ ರೂ. ವೆಚ್ಚದಲ್ಲಿ ಆರು ಟಂಟಂ ವಾಹನಗಳನ್ನು ಖರೀದಿಸಲಾಗಿದೆ. ವಾಹನಕ್ಕೆ ವಿಮೆ ಮಾಡಿಸಲು ಹಣವಿಲ್ಲದೇ ಕಾರಣ ಕಳೆದ ಆರೇಳು ತಿಂಗಳಿಂದ ನೈರ್ಮಲ್ಯ ಕಚೇರಿ ಆವರಣದಲ್ಲಿ ವಾಹನಗಳನ್ನು ನಿಲ್ಲಿಸಲಾಗಿದೆ. ಪಟ್ಟಣದಲ್ಲಿ ದಿನೇ ದಿನೇ ಘನತ್ಯಾಜ್ಯ ಅತಿ ಪ್ರಮಾಣದಲ್ಲಿ ಸಂಗ್ರಹವಾಗುತ್ತಿದೆ. ಆದರೆ ವಿಲೇವಾರಿ ಮಾಡಲು ಸಿಬ್ಬಂದಿ ಹೈರಾಣಾಗಿದ್ದಾರೆ.

ಪುರಸಭೆಯಲ್ಲಿ ದಿನಗೂಲಿ ಕೆಲಸ ಮಾಡುವ 45 ಸಿಬ್ಬಂದಿಗೆ ಕಳೆದ 15 ತಿಂಗಳಿಂದ ವೇತನ ಪಾವತಿ ಮಾಡಿಲ್ಲ. ಇದರಿಂದ ಕುಟುಂಬ ನಿರ್ವಹಣೆ ತೀರ ಸಂಕಷ್ಟವಾಗಿದೆ. ಇಂದೋ ನಾಳೆ ಪಾವತಿಸುವುದಾಗಿ ಅಧಿಕಾರಿಗಳ ಹುಸಿ ಭರವಸೆ ಸಿಬ್ಬಂದಿ ಪರದಾಡುವಂತಾಗಿದೆ. ಹಲವು ಬಾರಿ ಹೋರಾಟ ಮಾಡಿದರೂ ಸಿಬ್ಬಂದಿ ಸಮಸ್ಯೆ ಕೇಳುವವರು ಯಾರು ಇಲ್ಲದಂತಾಗಿದೆ ಎಂದು ಹೆಸರು ಹೇಳಲು ಇಚ್ಛಿಸದ ಸಿಬ್ಬಂದಿ ಅಳಲು ತೊಡಿಕೊಂಡರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.