ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ

•ಅಂಗನವಾಡಿಯಲ್ಲಿ ಲಸಿಕೆ ವೇಳಾಪಟ್ಟಿ ಹಾಕಿ•ಜನರಿಗೆ ರೋಟಾ ವೈರಸ್‌ ಲಸಿಕೆ ಮಾಹಿತಿ ನೀಡಿ

Team Udayavani, Aug 3, 2019, 12:14 PM IST

kopala-tdy-2

ಕೊಪ್ಪಳ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ರೋಟಾ ವೈರಸ್‌ ಲಸಿಕೆಯ ಪರಿಚಯ ಕುರಿತು ಜಿಲ್ಲಾಮಟ್ಟದ ಕಾರ್ಯಪಡೆ ಸಭೆಯಲ್ಲಿ ಎಡಿಸಿ ಸೈಯಿದಾ ಅಯಿಷಾ ಮಾತನಾಡಿದರು.

ಕೊಪ್ಪಳ: ರೋಟಾ ವೈರಸ್‌ ಲಸಿಕೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಸ್ವಚ್ಛತೆ ಹಾಗೂ ರೋಟಾ ವೈರಸ್‌ ಲಸಿಕೆಯಿಂದಾಗುವ ಅನುಕೂಲತೆ ಮತ್ತು ಮರಣ ಪ್ರಮಾಣವನ್ನು ತಡೆಗಟ್ಟುವಲ್ಲಿ ಈ ಲಸಿಕೆ ವಹಿಸುವ ಪಾತ್ರದ ಕುರಿತು ಜನಸಾಮಾನ್ಯರಲ್ಲಿ ತಿಳಿವಳಿಕೆ ಮೂಡಿಸುವ ಕಾರ್ಯದಲ್ಲಿ ಸಂಬಂಧಿಸಿದ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಎಡಿಸಿ ಸೈಯದಾ ಅಯಿಷಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಅಧಿಕಾರಿಗಳಿಗೆ ರೋಟಾ ವೈರಸ್‌ ಲಸಿಕೆಯ ಪರಿಚಯ ಕುರಿತು ನಡೆದ ಜಿಲ್ಲಾಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೋಟಾ ವೈರಸ್‌ನಿಂದಾಗುವ ಅತಿಸಾರ ಭೇದಿ ವಿರುದ್ಧ ಮಕ್ಕಳ ರಕ್ಷಣೆ ಮಾಡುವ ಸಲುವಾಗಿ ಭಾರತ ಸರ್ಕಾರವು ರೋಟಾ ವೈರಸ್‌ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಲಸಿಕೆಗಳ ಬಗ್ಗೆ ಜನಸಾಮಾನ್ಯರಿಗೆ ತಿಳಿವಳಿಕೆ ನೀಡಲು ವೈದ್ಯರು ಹಾಗೂ ಆರೋಗ್ಯ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರಿಗೆ ರೋಟಾ ವೈರಸ್‌ ಲಸಿಕೆ ತರಬೇತಿ ನೀಡಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಮ್ಮ ವ್ಯಾಪ್ತಿಯ ಅಂಗನವಾಡಿಗಳ ಕಾರ್ಯಕರ್ತೆಯರಿಗೆ ಸೂಚನೆ ನೀಡಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ನೀಡುವ ಲಸಿಕಾ ವೇಳಾಪಟ್ಟಿಯನ್ನು ತಮ್ಮ ಅಂಗನವಾಡಿಗಳಲ್ಲಿ ಪ್ರದರ್ಶಿಸಬೇಕು. ಮಕ್ಕಳಿಗೆ 6ನೇ, 10ನೇ ಮತ್ತು 14ನೇ ವಾರದ ವಯಸ್ಸಿನಲ್ಲಿ ರೋಟಾ ವೈರಸ್‌ ಲಸಿಕೆ ಹಾಕಿಸುವಂತೆ ಪಾಲಕರಿಗೆ ತಿಳಿವಳಿಕೆ ನೀಡಿ ಅವರ ಮನವೊಲಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಿಜಿಸ್ಟರ್‌ 5 ಮತ್ತು 6ರಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪರಿಷ್ಕೃತ ವೇಳಾಪಟ್ಟಿಯನ್ನು ಅಳವಡಿಸಿ, ಮುದ್ರಣ ಮಾಡಿಸಬೇಕು ಎಂದರು.

ಶಾಲೆಯಲ್ಲಿ ಮುಖ್ಯೋಪಾಧ್ಯಾ ಯರು ಮತ್ತು ಒಬ್ಬರು ನೋಡಲ್ ಅಧ್ಯಾಪಕರನ್ನು ಗುರುತಿಸಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಲಸಿಕಾ ಕಾರ್ಯಕ್ರಮ ಜಾರಿ ಮಾಡಬೇಕು. ಮಕ್ಕಳ ವಿವರವನ್ನು ಸಿದ್ಧಪಡಿಸಿ 5ರಿಂದ 6 ವರ್ಷದೊಳಗಿನ ಮಕ್ಕಳಿಗೆ ಡಿಪಿಟಿ ವರ್ಧಕ ಲಸಿಕೆ ಹಾಗೂ 10 ವರ್ಷ ಮತ್ತು 16 ವರ್ಷದವರಿಗೆ ಟಿಡಿ ಲಸಿಕೆ ಪಡೆಯುವಂತೆ ಕ್ರಮವಹಿಸಿ, ಲಸಿಕೆ ನೀಡಿರುವ ಬಗ್ಗೆ ದಾಖಲಾತಿ ನಿರ್ವಹಿಸಬೇಕು. ಪ್ರತಿ ವರ್ಷ ಶಾಲಾ ದಾಖಲಾತಿ ವೇಳೆ ಮಗುವಿನ ಲಸಿಕಾ ವೇಳಾ ಪಟ್ಟಿಯನ್ನು ಕಡ್ಡಾಯವಾಗಿ ಪರಿಶೀಲಿಸುವಂತೆ ಎಲ್ಲಾ ಶಾಲೆಗಳಿಗೆ ಆದೇಶ ಹೊರಡಿಸಬೇಕು. ತಾಲೂಕು ಮತ್ತು ಜಿಲ್ಲಾಮಟ್ಟದ ಶಿಕ್ಷಣಾಧಿಕಾರಿಗಳು ಮೇಲ್ವಿಚಾರಣೆ ನಡೆಸಿ ಜಿಲ್ಲೆಯ ಗುರಿ ಸಾಧನೆಯ ಬಗ್ಗೆ ವರದಿ ಸಲ್ಲಿಸಬೇಕು ಎಂದರು.

ಜಿಲ್ಲಾ ಆರ್‌.ಸಿ.ಎಚ್. ಅಧಿಕಾರಿ ಡಾ| ಲಿಂಗರಾಜ್‌ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ|ಪ್ರಕಾಶ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲೂಕುಮಟ್ಟದ ಆರೋಗ್ಯಾಧಿಕಾರಿಗಳು ಹಾಗೂ ಇತರರಿದ್ದರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ

ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ

6-gangavathi-1

ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.