“ಕುರುಕ್ಷೇತ್ರ’ ಕನ್ನಡದ ಹೆಮ್ಮೆ

ಇನ್ಮುಂದೆ ಇದೇ ರೀತಿ ಚಿತ್ರ ಮಾಡಲು ಮುನಿರತ್ನ ನಿರ್ಧಾರ

Team Udayavani, Aug 4, 2019, 3:02 AM IST

kurukshetra

ಬಹುತಾರಾಗಣದ “ಕುರುಕ್ಷೇತ್ರ’ ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಆಗಸ್ಟ್‌ 9, ವರಮಹಾಲಕ್ಷ್ಮೀ ಹಬ್ಬದಂದು ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರ ನೋಡಲು ದರ್ಶನ್‌ ಅಭಿಮಾನಿಗಳ ಒತ್ತಡ ಹೆಚ್ಚಾಗಿರುವುದರಿಂದ ಆ.8 ರ ಗುರುವಾರ ಸಂಜೆಗೆ ಶುರುವಾದರೂ ಅಚ್ಚರಿ ಇಲ್ಲ ಎಂಬುದು ಚಿತ್ರ ತಂಡದ ಮಾತು. “ಕುರುಕ್ಷೇತ್ರ’ ಕನ್ನಡದ ಹೆಮ್ಮೆ ಎಂದು ಹೇಳುವ ಮುನಿರತ್ನ, ಚಿತ್ರದ ಕುರಿತು ಒಂದಷ್ಟು ಮಾತನಾಡಿದ್ದಾರೆ.

ಏಕಕಾಲಕ್ಕೆ ರಿಲೀಸ್‌ ಇಲ್ಲ, ಮೊದಲು ಕನ್ನಡ-ತೆಲುಗು: ಎಲ್ಲರಿಗೂ ಗೊತ್ತಿರುವಂತೆ “ಕುರುಕ್ಷೇತ್ರ’ ಐದು ಭಾಷೆಯಲ್ಲಿ ತಯಾರಾಗಿದೆ. ಈ ಹಿಂದೆ ಏಕಕಾಲದಲ್ಲೇ ಐದು ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಚಿತ್ರ ತಂಡ ಇದೀಗ ಸ್ವಲ್ಪ ಬದಲಾವಣೆ ಮಾಡಿಕೊಂಡಿದೆ. ಆ ಬಗ್ಗೆ ನಿರ್ಮಾಪಕ ಮುನಿರತ್ನ ಕೊಡುವ ವಿವರ ಇದು. “ಆಗಸ್ಟ್‌ 9, ವರಮಹಾಲಕ್ಷ್ಮೀ ಹಬ್ಬಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ. ಆದರೆ, ಅಂದು ಕನ್ನಡ ಹಾಗು ತೆಲುಗು ಭಾಷೆಯಲ್ಲಿ ಮಾತ್ರ “ಕುರುಕ್ಷೇತ್ರ’ ಬಿಡುಗಡೆಯಾಗುತ್ತಿದೆ. ಎರಡು ವಾರಗಳ ಬಳಿಕ ತಮಿಳು ಹಾಗು ಮಲಯಾಳಂ ಭಾಷೆಯಲ್ಲಿ ತೆರೆಗೆ ಬರಲಿದೆ. ನಂತರದ ಎರಡು ವಾರಗಳ ಬಳಿಕ ಹಿಂದಿಯಲ್ಲಿ “ಕುರುಕ್ಷೇತ್ರ’ ತೆರೆಕಾಣಲಿದೆ.

ಚಾಣಾಕ್ಯ ಚಂದ್ರಗುಪ್ತ ಮಾಡುವ ಆಸೆ: ಇನ್ನು ಮುಂದಿನ ದಿನಗಳಲ್ಲಿ ನಾನು ಇದೇ ರೀತಿಯ ಚಿತ್ರಗಳನ್ನು ಮಾಡುವ ನಿರ್ಧಾರ ಮಾಡಿದ್ದೇನೆ. ಕಮರ್ಷಿಯಲ್‌ ಸಿನಿಮಾಗಳನ್ನು ಮಾಡಿ, ನೋಡುಗರನ್ನು ಸುಸ್ತು ಮಾಡಿಸುವುದಕ್ಕಿಂತ ಈ ತರಹದ ಪೌರಾಣಿಕ ಚಿತ್ರಗಳನ್ನು ಕೊಡಬೇಕೆಂಬ ಉದ್ದೇ ಹೊಂದಿದ್ದೇನೆ. ಆ ನಿಟ್ಟಿನಲ್ಲಿ ನಾನು “ಕುರುಕ್ಷೇತ್ರ’ ಚಿತ್ರದ ಬಳಿಕ ಮತ್ತೂಂದು ಬಿಗ್‌ ಬಜೆಟ್‌ ಚಿತ್ರ ಕೊಡಲು ಸಜ್ಜಾಗಲು ಯೋಚಿಸಿದ್ದೇನೆ. ನನಗೆ “ಚಾಣಾಕ್ಯ ಚಂದ್ರಗುಪ್ತ’ ಸಿನಿಮಾ ಮಾಡುವ ಆಸೆ ಇದೆ. ಆ ಚಿತ್ರದ ಮೂಲಕ ಉಪೇಂದ್ರ, ಪುನೀತ್‌ರಾಜಕುಮಾರ್‌, ಸುದೀಪ್‌ ಅವರನ್ನು ಸೇರಿಸಿ ಮಾಡುವ ಆಸೆ ಇದೆ.

ಅನಿಲ್‌-ಉದಯ್‌ ಇದ್ದಿದ್ದರೆ ಹಿಂದಿ ನಟರು ಇರುತ್ತಿರಲಿಲ್ಲ: ನನ್ನ ಪ್ರಕಾರ “ಕುರುಕ್ಷೇತ್ರ’ ಕನ್ನಡದ ಹೆಮ್ಮೆ ಎಂದು ಹೇಳಲು ಸಂತಸವಾಗುತ್ತದೆ. ಇದೊಂದು ದಾಖಲೆಯ ಚಿತ್ರವಾಗಲಿದೆ. ವಿಶೇಷವೆಂದರೆ, ಈ ಚಿತ್ರದಲ್ಲಿ ಇಬ್ಬರು ಬಾಲಿವುಡ್‌ ನಟರನ್ನು ಹೊರತುಪಡಿಸಿದರೆ, ನಮ್ಮ ಕನ್ನಡದ ನಟರೇ ತುಂಬಿದ್ದಾರೆ. ಭೀಷ್ಮನ ಪಾತ್ರ ನೆನಪಿಸಿ ಕೊಂಡರೆ ಅದು ಅಂಬರೀಶ್‌ ಅವರನ್ನು ಹೊರತುಪಡಿಸಿ ಬೇರಾರೂ ಮಾಡಲು ಸಾಧ್ಯವೇ ಇಲ್ಲ. ದುರ್ಯೋಧನ ಪಾತ್ರ ಅಂದಾಗ ಅಲ್ಲಿ ದರ್ಶನ್‌ ನೆನಪಾಗುತ್ತಾರೆ. ಉಳಿದಂತೆ “ಕುರುಕ್ಷೇತ್ರ’ದಲ್ಲಿ ಬರುವ ಧರ್ಮರಾಯ, ಕರ್ಣ, ಅಭಿಮನ್ಯು, ನಕುಲ, ಸಹದೇವ ಪಾತ್ರ ನಿರ್ವಹಿಸಿರುವರೆಲ್ಲರೂ ಕನ್ನಡದವರೇ. ಅನಿಲ್‌ ಮತ್ತು ಉದಯ್‌ ನಟರು ಇದ್ದಿದ್ದರೆ, ಹಿಂದಿಯ ಕಲಾವಿದರನ್ನು ಕರೆಸುತ್ತಿರಲಿಲ್ಲ.

ಇದು ನನ್ನ ದೃಷ್ಟಿಕೋನದ ಕುರುಕ್ಷೇತ್ರ: ಎಲ್ಲರಿಗೂ ಒಂದು ಪ್ರಶ್ನೆ ಕಾಡುತ್ತಲೇ ಇದೆ. ಇದು “ಮುನಿರತ್ನ’ ಕುರುಕ್ಷೇತ್ರ ಹೇಗಾಗುತ್ತೆ ಎಂಬುದೇ ಆ ಪ್ರಶ್ನೆ. ಮಹಾಭಾರತವನ್ನು ಓದಿದವರು ಯಾರು ಯಾವ ಭಾಗವನ್ನಾದರೂ ಇಟ್ಟುಕೊಂಡು ಕಥೆ ಬರೆಯಬಹುದು. ಮಹಾಭಾರತ ಓದಿದರೆ, ಒಬ್ಬೊಬ್ಬರಿಗೆ ಒಂದೊಂದು ರೀತಿಯ ಕಥೆ ಹುಟ್ಟುಕೊಳ್ಳುತ್ತದೆ. ಒಂದೊಂದು ದೃಷ್ಟಿಕೊನದಲ್ಲಿ ಕಥೆ ಬರೆದುಕೊಳ್ಳಬಹುದು. ನನಗೆ ದುರ್ಯೋಧನ ಭಾಗ ಇಷ್ಟವಾಯ್ತು. ಅದನ್ನೇ ಇಲ್ಲಿ ಬರೆದು, “ಕುರುಕ್ಷೇತ್ರ’ ಎಂದು ನಾಮಕರಣ ಮಾಡಿ ಸಿನಿಮಾ ಮಾಡಲಾಗಿದೆ. ಸಿನಿಮಾ ನೋಡಿದವರಿಗೆ ಎಲ್ಲವೂ ಅರ್ಥವಾಗುತ್ತೆ. ನನಗೆ ಮೊದಲಿನಿಂದಲೂ ದುರ್ಯೋಧನ ಭಾಗ ವನ್ನು ಸಿನಿಮಾ ಮಾಡುವ ಆಸೆ ಇತ್ತು. ಅದು “ಕುರುಕ್ಷೇತ್ರ’ ಮೂಲಕ ಈಡೇರಿದೆ. ರಾಜಮೌಳಿ “ಬಾಹುಬಲಿ’ ಅಂತ ಹಾಕಬಹುದು. ನಾವೇಕೆ ನಮ್ಮ ದೃಷ್ಟಿಕೋನದಲ್ಲಿ ಕಥೆ ಮಾಡಿ ಕ್ರೆಡಿಟ್‌ ತಗೋಬಾರದು?

ದುಬಾರಿ ಮೊತ್ತಕ್ಕೆ ಟಿವಿ ರೈಟ್ಸ್‌: ಕನ್ನಡದಲ್ಲಿ ಈ ರೀತಿಯ ಚಿತ್ರ ಮಾಡಬೇಕೆಂಬ ಕನಸು ಇತ್ತು. ಅದು ಈಗ ಈಡೇರಿದೆ. ಈಗಾಗಲೇ “ಕುರುಕ್ಷೇತ್ರ’ಕ್ಕೆ ಎಲ್ಲೆಡೆಯಿಂದಲೂ ಬೇಡಿಕೆ ಬಂದಿದೆ. ಹಿಂದಿ ಟಿವಿ ರೈಟ್ಸ್‌ 8 ಕೋಟಿಗೆ ಹೋಗಿದ್ದರೆ, ಕನ್ನಡದಲ್ಲೂ ಸಹ 8 ಕೋಟಿ ರುಪಾಯಿಗೆ ಮಾರಾಟವಾಗಿದೆ. ಈಗಾಗಲೇ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದ್ದು, ಬೇಡಿಕೆ ಬರುತ್ತಿದೆ. ಅಭಿಮಾನಿಗಳಿಂದ ಸಾಕಷ್ಟು ಡಿಮ್ಯಾಂಡ್‌ ಇರುವುದರಿಂದ ಆ.8 ರ ಗುರುವಾರ ಸಂಜೆಯೇ, ಬಿಡುಗಡೆಯಾಗುವ ಸಾಧ್ಯತೆಯೂ ಇದೆ. ಇನ್ನೊಂದು ವಿಷಯ ಸ್ಪಷ್ಟಪಡಿಸುತ್ತೇನೆ. ಇಲ್ಲಿ ಯಾರಿಗೂ ಹೆಚ್ಚು ಸ್ಕೋಪ್‌ ಕೊಟ್ಟಿಲ್ಲ. ಎಲ್ಲ ರಿಗೂ ಪಾತ್ರ ಏನು ಕೇಳುತ್ತಿದೆಯೋ ಅಷ್ಟನ್ನೇ ಕೊಡಲಾಗಿದೆ. ಇಲ್ಲಿ ಯಾರೂ ಹೆಚ್ಚು, ಕಮ್ಮಿ ಎಂಬುದಿಲ್ಲ. ಎಂಬುದು ಮುನಿರತ್ನ ಅವರ ಮಾತು.

ಅದೇನೆ ಇರಲಿ, ಈಗಾಗಲೇ ಚಿತ್ರಮಂದಿರಗಳ ಮುಂದೆಯೂ ಚಿತ್ರದ ಕಟೌಟ್‌ಗಳು ತಲೆ ಎತ್ತಿವೆ. ಅಂಬರೀಶ್‌ ಹಾಗೂ ದರ್ಶನ್‌ ಕಟೌಟ್‌ಗಳು ಚಿತ್ರಮಂದಿರದ ಮುಂದೆ ರಾರಾಜಿಸಿವೆ. ಪ್ರಸನ್ನ ಚಿತ್ರಮಂದಿರದ ಮುಂದೆ “ಕುರುಕ್ಷೇತ್ರ’ ಚಿತ್ರದ ಕಟೌಟ್‌ ತಲೆ ಎತ್ತಿರುವುದು ಅಭಿಮಾನಿಗಳು ಹಾಗು ಪ್ರೇಕ್ಷಕರಲ್ಲಿ ಹೊಸ ಥ್ರಿಲ್‌ ಹುಟ್ಟುಹಾಕಿರುವುದಂತೂ ಸುಳ್ಳಲ್ಲ.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.