ಹಲಸಿನ ಘಮಲಿಗೆ ಮನಸೋತ ಮೈಸೂರಿಗರು


Team Udayavani, Aug 4, 2019, 3:00 AM IST

halasina

ಮೈಸೂರು: ಬಗೆ ಬಗೆ ತಳಿಯ ಹಲಸಿನ ಸವಿ ಒಂದೆಡೆಯಾದರೆ, ಹಲಸಿನಿಂದ ಮಾಡಿದ ರುಚಿಯಾದ ಖಾದ್ಯಗಳು ಹಲಸಿನ ವೈಶಿಷ್ಯತೆಯನ್ನು ಅನಾವರಣ ಮಾಡಿದವು. ಸಹಜ ಸಮೃದ್ಧಿ, ರೋಟರಿ ಕ್ಲಬ್‌ ಮೈಸೂರು ಪಶ್ಚಿಮ ಸಹಯೋಗದಲ್ಲಿ ನಗರದ ನಂಜರಾಜ ಬಹದ್ದೂರ್‌ ಛತ್ರದಲ್ಲಿ ಆಯೋಜಿಸಿರುವ ಎರಡು ದಿನಗಳ ಹಲಸಿನ ಹಬ್ಬದಲ್ಲಿ ಮೈಸೂರಿಗರು ಕೆಂಪು, ಹಳದಿ, ಸಂಪಿಗೆ ಹಾಗೂ ಬಿಳಿ ಬಣ್ಣದ ಹಲಸಿನ ರುಚಿ ಸವಿದು ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಹಲಸಿನಿಂದ ತಯಾರಿಸಿದ ಖಾದ್ಯಗಳನ್ನು ಮಾರಾಟ ಮಾಡುವ 13ಕ್ಕೂ ಹೆಚ್ಚು ಮಳಿಗೆಗಳನ್ನು ಹಾಕಲಾಗಿತ್ತು. ಕಾರ್ಕಳದಿಂದ ಬಂದಿದ್ದ ಸಂತೋಷ್‌ ಅವರು, ಹಲಸಿನ ಬೀಜದಿಂದ ತಯಾರಿಸಿದ ಹಪ್ಪಳ, ವೊಡೆ, ಕೇಕ್‌ ಹಾಗೂ ಹಣ್ಣಿನಿಂದ ಮಾಡಿದ ಚಿಪ್ಸ್‌, ಪತ್ರೊಡೆ, ಗಾರಿಗೆ, ಕಡುಬು, ಕಬಾಬ್‌, ಬೋಂಡಾ, ವೊಡಪಾವು ಗಮನ ಸೆಳೆದವು.

ಜೊತೆಗೆ ಬೆಳ್ತಂಗಡಿ ತಾಲೂಕಿನ ಇಳಂತೆಲ ಗ್ರಾಮದ ಆದರ್ಸ ಸುಬ್ಬರಾಯ ಅವರು ಹಲಸು, ಗಾಧಾರಿ ಮೆಣಸು, ವೀಳ್ಯದೆಲೆ, ಕಾಟು ಮಾವಿನಿಂದ ತಯಾರಿಸಿದ ಕೆಮಿಕಲ್‌ ರಹಿತ ಐಸ್‌ಕ್ರೀಂಗೆ ಮೈಸೂರಿಗರು ಮನಸೋತರು. ಕೇರಳದಿಂದ ಬಂದಿದ್ದ ಜಾಕ್‌ವೆಲ್‌ ಅವರು ಹಲಸಿನ ಕೇಕ್‌, ಚಿಪ್ಸ್‌, ಚಾಕ್ಲೇಟ್‌, ಹಪ್ಪಳ, ಹಲ್ವ, ಬನ್‌ ಎಲ್ಲರನ್ನು ಆಕರ್ಷಿಸಿದವು.

ಜೊತೆಗೆ ಕಾರ್ಯಕ್ರಮದಲ್ಲಿ 26ಕ್ಕೂ ಹೆಚ್ಚು ಬಗೆಯ ಹಲಸಿನ ತಳಿಯ ಹಣ್ಣುಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ತುಮಕೂರು ಜಿಲ್ಲೆಯ ಸಿದ್ದು ಹಲಸು, ಶಂಕರ ಹಲಸು, ಕರಿಗೌಡರು ಹಲಸು ಎಂಬ ಕೆಂಪು ತಳಿಯ ಹಲಸು ಪ್ರಧಾನ ಆಕರ್ಷಣೆಯಾಗಿದ್ದವು.

ಹಲಸಿಗೆ ಮುಗಿಬಿದ್ದ ಜನರು: ಬೆಳಗ್ಗೆ ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಆಗಮಿಸಿದ್ದ ನೂರಾರು ಸಂಖ್ಯೆಯ ಜನರು ತಮಗಿಷ್ಟ ಬಂದ ಹಲಸು ಮತ್ತು ಖಾದ್ಯ ಖರೀದಿಸಿದರು. ನಂತರ ಸಾವಿರಾರು ಮಂದಿ ಹಬ್ಬದಲ್ಲಿ ಭಾಗವಹಿಸಿ ನಾನಾ ತಳಿಗಳ ಬಗ್ಗೆ ಮಾಹಿತಿ ಪಡೆದು, ಹಲಸಿನ ಹಣ್ಣಿನ ರುಚಿ ಸವಿದರು.

ಚಾಲನೆ: ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ರೋಟರಿ ಗವರ್ನರ್‌ ರೋಟೇರಿಯನ್‌ ಜೋಸೆಪ್‌ ಮ್ಯಾಥು, ಬಡವರ ಹಣ್ಣು ಎಂದೇ ಖ್ಯಾತಿಗೊಂಡಿರುವ ಹಲಸು ಔಷಧ ಗುಣಗಳಿಂದ ಮುನ್ನೆಲೆಗೆ ಬರುತ್ತಿದೆ. ಬರಗಾಲ ಎದುರಿಸಿ ನಿಲ್ಲುವ ಹಲಸು ರಾಸಾಯನಿಕ ಔಷಧ, ಗೊಬ್ಬರ ಯಾವುದನ್ನು ಬೇಡುವುದಿಲ್ಲ. ಹಾಗಾಗಿ ನಗರದ ಗ್ರಾಹಕರು ಹಲಸು ಮತ್ತು ಅದರಿಂದ ತಯಾರಿಸಿದ ಉತ್ಪನ್ನಗಳನ್ನು ಹೆಚ್ಚು ಹೆಚ್ಚು ಬಳಸುವ ಮೂಲಕ ರೈತರ ಅಭಿವೃದ್ಧಿಗೆ ನೆರವಾಗುವಂತೆ ಸಲಹೆ ನೀಡಿದರು.

ಪುಸ್ತಕ ಬಿಡುಗಡೆ: ಸಾವಯವ ಕೃಷಿಕ ಶಿವನಾಪುರದ ರಮೇಶ್‌ ಮಾತನಾಡಿ, 15 ಬಗೆಯ ಹಲಸಿನ ತಳಿಗಳ ಗುಣಗಳ ವಿಶೇಷತೆಯನ್ನು ವಿವರಿಸಿದರು. ವೇದಿಕೆಯಲ್ಲಿ ಸಹಜ ಕೃಷಿಕ ಎ.ಪಿ.ಚಂದ್ರಶೇಖರ್‌ ರಚಿಸಿರುವ “ಹಲಸು ಬಿಡಿಸಿದಾಗ ‘ ಪುಸ್ತಕ ಬಿಡುಗಡೆಗೊಳಿಸಲಾಯಿತು. ಜೈವಿಕ್‌ ಕೃಷಿಕ್‌ ಸಂಸ್ಥೆಯ ಗೌರಾವಾಧ್ಯಕ್ಷ ಡಾ.ಕೆ.ರಾಮಕೃಷ್ಣಪ್ಪ, ಸಹಜ ಸಮೃದ್ಧ ಅಧ್ಯಕ್ಷ ಎನ್‌.ಆರ್‌.ಶೆಟ್ಟಿ, ಬೆಂಗಳೂರು ಕೃಷ್ಠಿ ವಿವಿ ಪ್ರಾಧ್ಯಾಪಕಿ ಡಾ.ಎಸ್‌.ಶಾಮಲಾ ರೆಡ್ಡಿ ಮಾತನಾಡಿದರು.

ಹಲಸು ನೆಟ್ಟು, ಬರ ಅಟ್ಟು ಕಾರ್ಯಾಗಾರದಲ್ಲಿ ಹಿರೇಹಳ್ಳಿ ಫಾರಂ ಮುಖ್ಯಸ್ಥ ಡಾ.ಜಿ.ಕರುಣಾಕರನ್‌, ಕೃಷಿಕ ಹೆಗ್ಗವಾಡಿಪುರದ ಶಿವಕುಮಾರಸ್ವಾಮಿ ಅವರು ಹಲಸಿನ ಮಹತ್ವ , ವಿಶೇಷತೆ ಮತ್ತು ಹಲಸು ಬೆಳೆದರೆ ಹೇಗೆ ಆದಾಯ ಗಳಿಸಬಹುದು ಎಂಬುದನ್ನು ತಿಳಿಸಿದರು. ರೋಟೇರಿಯನ್‌ ರಿಜಿನಾಲ್ಡ ವೆಸ್ಲಿ, ಸಹಜ ಸಮೃದ್ಧ ನಿರ್ದೇಶಕ ಜಿ.ಕೃಷ್ಣಪ್ರಸಾದ್‌, ರೊಟೇರಿಯನ್‌ ಉಲ್ಲಾಸ್‌ ಪಂಡಿತ್‌ ಇದ್ದರು.

ಕರ್ನಾಟಕ ಹಲಸಿನ ತವರು: ದೇಶದಲ್ಲಿ ಸಾವಿರಕ್ಕೂ ಹೆಚ್ಚು ಹಲಸಿನ ತಳಿಗಳಿದ್ದು, ರಾಜ್ಯದಲ್ಲಿ 150 ತಳಿಗಳು ಇವೆ. ಕರ್ನಾಟಕ ಹಲಸಿನ ತವರಾಗಿದ್ದು, ನೂರಾರು ಬಗೆಯ ಹಲಸಿನ ತಳಿಗಳು ಇಲ್ಲಿ ವಿಕಸಿತಗೊಂಡಿವೆ. ಹಲಸಿನಿಂದ ವಿವಿಧ ಬಗೆಯ ಉತ್ಪನ್ನಗಳನ್ನು ತಯಾರು ಮಾಡಬಹುದಾಗಿದ್ದು, ಹಲಸಿನಿಂದ ಮೌಲ್ಯವರ್ಧಿತ ಉತ್ಪನ್ನ ಮಾಡಿದಾಗ ರೈತನಿಗೂ ಆದಾಯ ಬರುತ್ತದೆ ಎಂದು ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಎಂ.ಆರ್‌.ದಿನೇಶ್‌ ತಿಳಿಸಿದರು.

ಕಸಿ ಸಸಿಗಳ ಭರ್ಜರಿ ಮಾರಾಟ: ಬೆಳಗ್ಗೆ ಹಲಸಿನ ಹಬ್ಬ ಆರಂಭವಾಗುತ್ತಿದ್ದಂತೆ ಒಬ್ಬೊಬ್ಬರಾಗಿಯೇ ಕಾರ್ಯಕ್ರಮಕ್ಕೆ ಬಂದವರು ತಮಗಿಷ್ಟವಾದ ತಳಿಯ ಕಸಿ ಸಸಿಗಳನ್ನು ಖರೀದಿಸಿದರು. ಅವುಗಳಲ್ಲಿ ಸಿಂಧೂ, ಹೆಜ್ಜೆನು, ಅಂಟುರಹಿತ, ಬೈರ, ವಿಯಟ್ನಾಂ ಸೂಪರ್‌ ಅರ್ಲಿ, ಬೆಂಗ್‌ ಸೂರ್ಯ, ನಾಗಚಂದ್ರ, ರಾಮಚಂದ್ರ, ಕಾಚಳ್ಳಿ ಹಸಲು, ಲಾಲ್‌ಬಾಗ್‌ ಮಧುರ, ಸಿಂಗಾಪುರ ಹಲಸು, ಜೇನು ಬೊಕ್ಕೆ, ಸರ್ವ ಋತು ಹಲಸು, ರುದ್ರಾಕ್ಷಿ ಬೊಕ್ಕೆ, ಈ-11, ಜೆ-33 ಮುಂತಾದ ತಳಿಯ ಹಲಸಿನ ಸಸಿಗಳು ಹೆಚ್ಚು ಮಾರಾಟವಾದವು.

ಇವುಗಳ ಜೊತೆಗೆ ಹುಣಸೇ, ಸೀಬೆ, ನೇರಳೆ, ನೆಲ್ಲಿ, ಮಾವಿನ ಸಸಿಗಳನ್ನು ಮಾರಾಟಕ್ಕೆ ಇಡಲಾಗಿತ್ತು. ಕೃಷಿ ಮತ್ತು ಹಲಸು ಕೃಷಿ ಸಂಬಂಧಿತ ಪುಸ್ತಕಗಳನ್ನೂ ಮಾರಾಟಕ್ಕೆ ಇಡಲಾಗಿತ್ತು. ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಹಬ್ಬದಲ್ಲಿ ಅನೇಕ ಗ್ರಾಹಕರು ಭಾಗವಹಿಸಿ ಮೂಲಕ ಕಾರ್ಯಕ್ರಮಕ್ಕೆ ಮೆರಗು ತಂದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.