ಶುದ್ಧ ನೀರಿನ ಘಟಕ ನಿರ್ಮಾಣ ನಿರ್ಲಕ್ಷ್ಯ

ಪಿಡಿಒಗಳ ವಿರುದ್ಧ ಶಾಸಕ ಸಂಜೀವ ಮಠಂದೂರು ಗರಂ

Team Udayavani, Aug 4, 2019, 5:31 AM IST

x-31

ಪುತ್ತೂರು: ತಾಲೂಕಿನಲ್ಲಿ ಸರಕಾರದಿಂದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಕೋಟಿ ರೂ. ಅನು ದಾನ ಬಿಡುಗಡೆಯಾಗಿದ್ದರೂ ಎಲ್ಲಿಯೂ ಕಾಮಗಾರಿ ಪೂರ್ತಿಗೊಂಡು ಪ್ರಯೋ ಜನಕ್ಕೆ ಸಿಗದ ಕುರಿತು ಗರಂ ಆದ ಪುತ್ತೂರು ಶಾಸಕ ಸಂಜೀವ ಮಠಂದೂರು ಗ್ರಾ.ಪಂ.ಗಳ ಪಿಡಿಒಗಳನ್ನು ತರಾಟೆಗೆ ತೆಗೆದುಕೊಂಡರು.

ಶಾಸಕರು ಶನಿವಾರ ಪುತ್ತೂರು ಮಿನಿ ವಿಧಾನಸೌಧದ ತಹಶೀಲ್ದಾರ್‌ ಕಚೇರಿಯ ಸಭಾಭವನದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿದರು.

ಪಿಡಿಒಗಳಿಂದ ಶುದ್ಧ ಕುಡಿಯುವ ನೀರು ಘಟಕ ಸ್ಥಾಪನೆಗಳ ಕಾಮಗಾರಿಗಳ ಕುರಿತು ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಬಹುತೇಕ ಅಧಿಕಾರಿಗಳಿಂದ ಕಾಮಗಾರಿ ಪೂರ್ಣಗೊಂಡಿಲ್ಲ, ಹಸ್ತಾಂತರಗೊಂಡಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಯಿತು.

ಶುದ್ಧ ನೀರಿನ ಘಟಕ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿ 2 ವರ್ಷ ಗಳಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಸಾರ್ವಜನಿಕರಿಗೆ 1 ಲೀ. ನೀರೂ ಲಭ್ಯವಾಗಿಲ್ಲ. ಘಟಕ ನಿರ್ಮಾಣದಲ್ಲಿ ಹಗರಣ ನಡೆದಿದೆ ಎಂದು ಮಠಂದೂರು ಆಕ್ರೋಶ ವ್ಯಕ್ತಪಡಿಸಿ ದರು.

1.50 ಕೋಟಿ ರೂ.
ಶುದ್ಧ ನೀರು ಘಟಕ ಸ್ಥಾಪನೆಗೆ ಕೆಲವು ಗ್ರಾ.ಪಂ.ಗಳಿಗೆ 5 ಲಕ್ಷ ರೂ. ಮತ್ತು ಇನ್ನು ಕೆಲವು ಗ್ರಾ.ಪಂ.ಗಳಿಗೆ 9 ಲಕ್ಷ ರೂ. ಅನು ದಾನ ಬಿಡುಗಡೆಯಾಗಿದೆ. ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಸರಕಾರ ಈ ಅನುದಾನ ನೀಡಿದೆ. ಪುತ್ತೂರು ತಾಲೂಕಿಗೆ 1.50 ಕೋಟಿ ರೂ.ಗೂ ಅಧಿಕ ಅನುದಾನ ನೀಡ ಲಾಗಿದೆ. ತೆರಿಗೆ ಈ ಮೂಲಕ ದುರುಪ ಯೋಗವಾಗಿದೆ ಎಂದು ಶಾಸಕರು ಆರೋಪಿ ಸಿದರು.

ಮಾಹಿತಿ ನೀಡಲು ಸೂಚನೆ
ಕೃಷಿ ಇಲಾಖೆ ಮತ್ತು ತೋಟಗಾರಿಕಾ ಇಲಾಖೆಗಳ ಮಾಹಿತಿ ತಳ ಮಟ್ಟದ ಜನರಿಗೆ ತಲುಪ ಬೇಕು. ಈ ನಿಟ್ಟಿನಲ್ಲಿ ಪ್ರತಿ ಗ್ರಾ.ಪಂ.ಗಳಿಗೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ನೀಡಬೇಕು. ಇಲಾಖೆಯ ಯೋಜನೆಗಳ ಕುರಿತು ಕರಪತ್ರ ವಿತರಿಸಬೇಕು ಎಂದು ಶಾಸಕರು ಸೂಚನೆ ನೀಡಿದರು.

ರಸ್ತೆ ಬದಿ ಗಿಡ ನೆಡಿ
ಜನರಲ್ಲಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸುವ ಉದ್ದೇಶದಿಂದ ಸಾಮಾಜಿಕ ಅರಣ್ಯ ಇಲಾಖೆಯ ವತಿಯಿಂದ ನಡೆಯುವ ಕಾರ್ಯಕ್ರಮಗಳಿಗೆ ಗ್ರಾ.ಪಂ. ಸಹಕಾರ ನೀಡಬೇಕು. ಸ್ಥಳೀಯಾಡಳಿತವು ಕಾಳಜಿ ವಹಿಸಿ ಪರಿಸರ ಸಮತೋಲನವನ್ನು ಕಾಯ್ದುಕೊಳ್ಳುವ ಕಾರ್ಯ ನಡೆಸಬೇಕು. ರಸ್ತೆ ಬದಿಗಳಲ್ಲಿ ಹಣ್ಣಿನ ಗಿಡವನ್ನು ಬೆಳೆಸಲು ಕ್ರಮ ಕೈ ಗೊಳ್ಳಬೇಕು. ಇದನ್ನು ಸಾಮಾಜಿಕ ಕಳಕಳಿಯಾಗಿ ರೂಪಿಸುವಲ್ಲಿ ಪಿಡಿಒಗಳು ಮುಂದಾಗಬೇಕು. ಮರ ಬೆಳೆಸಿ ಮಾದರಿ ರಸ್ತೆಯಾಗಿ ರೂಪಿಸಬೇಕು ಎಂದರು.

ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ, ಸಾಮಾಜಿಕ ಅರಣ್ಯ ಯೋಜನೆ, ಸ್ವಚ್ಛ ಭಾರತ್‌, ಶ್ಮಶಾನ, ಆಟದ ಮೈದಾನ ಸಹಿತ ಗ್ರಾ.ಪಂ. ವ್ಯಾಪ್ತಿಯ ಅಭಿವೃದ್ಧಿ ಕಾರ್ಯಯೋಜನೆಗಳ ಕುರಿತು ಶಾಸಕರು ಪಿಡಿಒಗಳಿಗೆ ಮಾಹಿತಿ ಮತ್ತು ಸಲಹೆ ನೀಡಿದರು.

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿ ಗೋಡು, ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್‌, ಉಪಾಧ್ಯಕ್ಷೆ ಲಲಿತಾ ಈಶ್ವರ್‌, ಸ್ಥಾಯೀ ಸಮಿತಿ ಅಧ್ಯಕ್ಷ ಹರೀಶ್‌ ಬಿಜತ್ರೆ, ತಾ.ಪಂ. ವಿಷಯ ನಿರ್ವಾಹಕ ಶಿವಪ್ರಕಾಶ್‌ ಅಡ್ಪಂಗಾಯ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ನವೀನ್‌ ಭಂಡಾರಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾಮಾನ್ಯ ಜನರ ಧ್ವನಿಯಾಗಿ

ತಳಮಟ್ಟದ ಗ್ರಾ.ಪಂ.ನ ಆಡಳಿತಾತ್ಮಕ ಸಮಸ್ಯೆಗಳನ್ನು ನೀಗಿಸುವ ನಿಟ್ಟಿನಲ್ಲಿ ಪಿಡಿಒಗಳ ಜವಾಬ್ದಾರಿ ಪ್ರಮುಖವಾಗಿದೆ. ಗ್ರಾ.ಪಂ. ಸಬಲೀಕರಣದ ಉದ್ದೇಶದಿಂದಲೇ ಪಿಡಿಒಗಳ ನೇಮಕಗೊಳಿಸಿ ಅಧಿಕಾರ ನೀಡಲಾಗಿದೆ. ಜವಾಬ್ದಾರಿ ಹೆಚ್ಚಾದಂತೆ ಬದ್ಧತೆಯೂ ಹೆಚ್ಚಾಗಬೇಕು. ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ ಚಿಂತನೆ ನಡೆಸಬೇಕು. ಸಾಮಾನ್ಯ ಜನರ ಧ್ವನಿಯಾಗಬೇಕು ಎಂದು ಮಠಂದೂರು ಪಿಡಿಒಗಳಿಗೆ ಕರೆ ನೀಡಿದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.