ಬಿಬಿಎಂಪಿ ಬಜೆಟ್ಗೂ ಸಿಎಂ ಯಡಿಯೂರಪ್ಪ ಬ್ರೇಕ್
Team Udayavani, Aug 4, 2019, 3:03 AM IST
ಬೆಂಗಳೂರು: ಬಿಬಿಎಂಪಿ ಬಜೆಟ್ಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಡೆ ನೀಡಿದ್ದು, ಬಿಬಿಎಂಪಿ ಪರಿಷ್ಕೃತ ಆಯವ್ಯಯ ಅಂದಾಜುಗಳಿಗೆ ಸಂಪುಟದ ಅನುಮೋದನೆ ಪಡೆದಿಲ್ಲ. ಇದು ಕಾನೂನು ಬಾಹಿರವಾಗಿದ್ದು, ಸಂಚಿವ ಸಂಪುಟದ ಅನುಮತಿ ಪಡೆದು ಮುಂದಿನ ಆದೇಶ ಹೊರಡಿಸುವವರೆಗೂ ಯಾವುದೇ ಕಾಮಗಾರಿಗೆ ಜಾಬ್ ಕೋಡ್ ನೀಡುವುದು ಮತ್ತು ಟೆಂಡರ್ ಪ್ರಕ್ರಿಯೆ ನಡೆಸದಂತೆ ಸೂಚನೆ ನೀಡಿದ್ದಾರೆ.
“ಮುಖ್ಯಮಂತ್ರಿಗಳ ನವ ಬೆಂಗಳೂರು ಯೋಜನೆ’ಯಡಿ ಹಲವಾರು ಕಾಮಗಾರಿಗಳ ಕ್ರಿಯಾಯೋಜನೆಗೆ ನಗಾರಾಭಿವೃದ್ದಿ ಇಲಾಖೆಯ ಅನುಮೋದನೆ ಈಗಾಗಲೇ ಸಿಕ್ಕಿದ್ದು, ಈ ಕಾಮಗಾರಿಗಳಿಗೂ ಜಾಬ್ ಕೋಡ್ ನೀಡದಂತೆ ಮತ್ತು ಟೆಂಡರ್ ಗೆ ಅವಕಾಶ ನೀಡದಂತೆ ನಿರ್ದೇಶನ ನೀಡಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಪಾಲಿಕೆ ಆಯುಕ್ತ ಎನ್.ಮಂಜುನಾಥ್ ಪ್ರಸಾದ್, ಈಗಾಗಲೇ ಹಲವು ಕಾಮಗಾರಿಗಳು ಪ್ರಾರಂಭವಾಗಿದ್ದು ಇವುಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ,ಸರ್ಕಾರದ ಆದೇಶದಂತೆ ಮುಂದಿನ ಆದೇಶದವರೆಗೂ ಯಾವುದೇ ಕಾಮಗಾರಿಗಳಿಗೆ ಚಾಲನೆ ನೀಡುವುದಿಲ್ಲ. ಹೊಸ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಹೇಳಿದ್ದಾರೆ.