ಬೇಡಿಕೆ ಈಡೇರಿಕೆಗೆ ಮನವಿ


Team Udayavani, Aug 4, 2019, 12:10 PM IST

HV-TDY-2

ಹಾವೇರಿ: ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರಿಂದ ಫೆಡರೇಷನ್‌ ಪದಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಹಾವೇರಿ: ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ನಡೆಯುತ್ತಿರುವ ಬಿಸಿಯೂಟ ಯೋಜನೆಯಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರ ಸಂಭಾವನೆ ಹೆಚ್ಚಳ ಮಾಡಬೇಕು ಹಾಗೂ ಬಾಕಿ ಇರುವ ಸಂಭಾವನೆಯನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದು ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ ರಾಜ್ಯಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ ಒತ್ತಾಯಿಸಿದ್ದಾರೆ.

ಎಐಟಿಯುಸಿ ನೇತೃತ್ವದ ಕರ್ನಾಟಕ ರಾಜ್ಯ ಬಿಸಿಯೂಟ ತಯಾರಕರ ಫೆಡರೇಷನ್‌ ವತಿಯಿಂದ ಶನಿವಾರ ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಮೂಲಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಮತ್ತು ರಾಜ್ಯ ಸರಕಾರ ಬಿಸಿಯೂಟ ಯೋಜನೆ ಆರಂಭದಲ್ಲಿ ಮುಖ್ಯ ಅಡಿಗೆಯವರಿಗೆ ಮಾಸಿಕ 650 ರೂ., ಸಹ ಅಡಿಗೆಯವರಿಗೆ 450ರೂ. ಇತ್ತು.ಕಳೆದ 16 ವರ್ಷಗಳಿಂದ ಕನಿಷ್ಠ ವೇತನಕ್ಕಾಗಿ ಹೋರಾಟ ನಡೆಸಿದ್ದರ ಫಲವಾಗಿ ಈಗ ಮುಖ್ಯ ಅಡಿಗೆಯವರು 2700 ರೂ., ಸಹಾಯಕರು 2600 ರೂ. ಪಡೆದುಕೊಳ್ಳುವಂತಾಗಿದೆ. ಈ ಯೋಜನೆ ಜಾರಿ ಬಂದ ಮೇಲೆ ಮಕ್ಕಳ ಹಾಜರಾತಿ ಹಾಗೂ ಕಲಿಕೆ ಗುಣಮಟ್ಟ ಹೆಚ್ಚಾಗಿದೆ. ದೇಶದಲ್ಲಿಯೇ ನಮ್ಮ ರಾಜ್ಯವು ಯೋಜನೆಯನ್ನು ಯಶಸ್ವಿಯಾಗಿ ಜಾರಿ ಮಾಡುವಲ್ಲಿ ಪ್ರಥಮ ಸ್ಥಾನದಲ್ಲಿದೆ. ಇದಕ್ಕೆ ಕಡಿಮೆ ಸಂಭಾವನೆಯಲ್ಲಿ ನಿಷ್ಠೆಯಿಂದ ಕಾರ್ಯನಿರ್ವಹಿಸುವ ಮಹಿಳೆಯರ ಶ್ರಮ ಕಾರಣವಾಗಿದೆ. ಆದ್ದರಿಂದ ಇಂತಹ ಯೋಜನೆಯ ಯಶಸ್ವಿಯಾಗಲು ದುಡಿಯುತ್ತಿರುವ ಮಹಿಳೆಯರ ಸಂಭಾವನೆಯನ್ನು ಕನಿಷ್ಠ ವೇತನಕ್ಕೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಹಾವೇರಿ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಬಿಸಿಯೂಟ ತಯಾರಕರಿಗೆ ಮಾಸಿಕ ಪ್ರತಿ ತಿಂಗಳು 5ನೇ ತಾರೀಕಿನೊಳಗೆ ಸಂಭಾವನೆ ನೀಡಬೇಕು ಎಂಬ ಆದೇಶವಿದ್ದರೂ, ಕಳೆದ ಎಪ್ರಿಲ್, ಮೇ, ಜೂನ್‌, ಜುಲೈ ತಿಂಗಳ ಮಾಸಿಕ ಸಂಭಾವನೆ ನೀಡಿಲ್ಲ. ಇದರಿಂದ ಅವರು ನಿತ್ಯ ಜೀವನ ನಡೆಸುವದು ಕಷ್ಟವಾಗಿದೆ. ಜಿಲ್ಲಾಡಳಿತ ಕಡಿಮೆ ಸಂಭಾವನೆಯಲ್ಲಿ ದುಡಿಯುವ ಮಹಿಳೆಯರ ಹಣ ತಕ್ಷಣಕ್ಕೆ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಸರಕಾರ ಬಿಸಿಯೂಟ ತಯಾರಕರನ್ನು ಶಾಲಾ ಸಿಬ್ಬಂದಿಗಳೆಂದು ಕಾಯಂ ಮಾಡಿ, ಸರ್ಕಾರಿ ನೌಕರರನ್ನಾಗಿ ಮಾಡಬೇಕು. ಅಲ್ಲಿಯವರೆಗೂ ಕಾರ್ಮಿಕ ಇಲಾಖೆಯಿಂದ ಅಸಂಘಟಿತ ಕಾರ್ಮಿಕರಿಗೆ ನೀಡುವ ಸೌಲಭ್ಯ ನೀಡಬೇಕು. ದೇಶದ ಸವೋಚ್ಛ ನ್ಯಾಯಾಲಯ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಕನಿಷ್ಠ 18000 ರೂ. ಕೊಡಬೇಕು ಎಂದು ಸೂಚಿಸಿದೆ. ಅದನ್ನು ಈ ವರೆಗೂ ಕೊಟ್ಟಿಲ್ಲ, ಅದನ್ನು ಕೊಡಬೇಕು. ಬಿಸಿಯೂಟ ತಯಾರಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಂಘಟನೆಯ ಪದಾಧಿಕಾರಿಗಳು ಅಧಿಕಾರಿಗಳು, ಸಚಿವರೊಂದಿಗೆ ಸಭೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಮಯದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಜಿ.ಡಿ. ಪೂಜಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಖಮ್ಮ ದನ್ನೂರ, ಜಿಲ್ಲಾ ಸಂಘಟನ ಕಾರ್ಯದರ್ಶಿ ಗುರುನಾಥ ಲಕಮಾಪೂರ, ಜಿಲ್ಲಾ ಉಪಾಧ್ಯಕ್ಷ ಲಲಿತಾ ಬೂಶೆಟ್ಟಿ, ನಾಗರತ್ನ ಕುಲಕರ್ಣಿ ಸೇರಿದಂತೆ ಮುಂತಾದವರು ಇದ್ದರು.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.