ಬಿಎಸ್‌ಪಿ ಬಿಟ್ಟು ಬೇರೆ ಪಕ್ಷ ಸೇರುವುದಿಲ್ಲ


Team Udayavani, Aug 5, 2019, 3:00 AM IST

bsp-bnittu

ಕೊಳ್ಳೇಗಾಲ: ಬಿಎಸ್‌ಪಿಯಲ್ಲೇ ಇರುತ್ತೇನೆ. ಸದ್ಯದ ಸಂದರ್ಭದಲ್ಲಿ ಬೇರೆ ಯಾವ ಪಕ್ಷವನ್ನು ಸೇರುವುದಿಲ್ಲ. ಅಲ್ಲದೆ ತಾತ್ಕಾಲಿಕ ಅಮಾನತ್ತಿನ ಕುರಿತು ಪಕ್ಷದ ವರಿಷ್ಠೆ ಮಾಯಾವತಿಯವರೊಂದಿಗೆ ಚರ್ಚಿಸಿದ್ದೇನೆ. ವಾರದಲ್ಲಿ ಉಚ್ಛಾಟನೆ ತೆರವುಗೊಳ್ಳಲಿದೆ ಎಂದು ಶಾಸಕ ಮಹೇಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಆದರ್ಶ ನಗರದಲ್ಲಿರುವ ಶಾಸಕರ ನಿವಾಸದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅದ್ಯಕ್ಷ ಡಿ.ನಟರಾಜು ಅಧ್ಯಕ್ಷತೆಯಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಪತ್ರ ಸಲ್ಲಿಸಿದ ಬಳಿಕ ಸುದ್ದಿ ಗಾರರೊಂದಿಗೆ ಮಾತನಾಡಿದರು.

ವರಿಷ್ಠೆ ಮಾಯಾವತಿಯೊಂದಿಗೆ ಚರ್ಚೆ: ರಾಜ್ಯದಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟು ಪರಿಹಾರವಾಗುವವರೆಗೆ ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ. ತಟಸ್ಥವಾಗಿರುತ್ತೇನೆ ಎಂದು ಮಾಯಾವತಿಗೆ ತಿಳಿಸಿದ್ದೆ. ಆದರೆ ಅವರು ನನಗೆ ಟ್ವೀಟ್‌ ಮೂಲಕ ಜೆಡಿಎಸ್‌ಗೆ ಬೆಂಬಲ ಸೂಚಿಸಲು ತಿಳಿಸಿರುವುದನ್ನು ನಾನು ಗಮನಿಸಲಿಲ್ಲ. ಈ ಸಂವಹನದ ಕೊರತೆಯಿಂದಾಗಿ ವರಿಷ್ಠೆ ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ತಟಸ್ಥವಾಗಿರುವ ಬಗ್ಗೆ ಸವಿವರವಾದ ವರದಿಯೊಂದನ್ನು ವರಿಷ್ಠರ ಗಮನಕ್ಕೆ ತಂದಿದ್ದು, ಒಂದು ವಾರದಲ್ಲಿ ಇತ್ಯರ್ಥವಾಗಲಿದೆ ಎಂದು ಹೇಳಿದರು.

ಮಾಧ್ಯಮಗಳ ವಿರುದ್ಧ ಅಸಮಾಧಾನ: ರಾಜ್ಯದಲ್ಲಿ ಹಲವು ದಿಢೀರ್‌ ರಾಜಕೀಯ ಬೆಳೆವಣಿಗೆಗಳ ಸಂಭವಿಸಿದವು. ಈಗಲೂ ರಾಜಕೀಯವಾಗಿ ಬೇರೆ ಬೆಳವಣಿಗೆಗಳು ನಡೆಯುತ್ತಿವೆ. ಆದರೆ ಮಾಧ್ಯಮಗಳಲ್ಲಿ ಅದನ್ನು ತಿರುಚಿ ಬಳಸಲಾಗುತ್ತಿದೆ. ಇದು ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಕ್ಷೇತ್ರದ ಅಭಿವೃದ್ಧಿಗೆ ಹಣ ನೀಡದಿದ್ದರಿಂದ ನಿರ್ಧಾರ: ಜೆಡಿಎಸ್‌ ಬೆಂಬಲದಿಂದ ಗೆದ್ದ ನನಗೆ ಕ್ಷೇತ್ರ ಅಭಿವೃದ್ಧಿಗಾಗಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿಯವರಿಗೆ 25 ಕೋಟಿ ಮಂಜೂರು ಮಾಡುವಂತೆ ಮನವಿ ಮಾಡಿದ್ದೆ. ಆದರೆ ಸಿಎಂ ಕೇವಲ 4 ಕೋಟಿ ಮಂಜೂರು ಮಾಡಿದರು. ಈ ಹಣದಿಂದ ಕ್ಷೇತ್ರ ಅಭಿವೃದ್ಧಿ ಸಾಧ್ಯವೇ? ಎಂದು ಕುಮಾರಸ್ವಾಮಿಯವರನ್ನು ಪ್ರಶ್ನಿಸಿದ್ದೆ. ಆದರೂ ಪ್ರಯೋಜನವಾಗಲಿಲ್ಲ ಎಂದು ಅಸಮಾಧಾನ ತೊಡಿಕೊಂಡರು.

ಪತ್ರಕರ್ತರಿಂದ ಮನವಿ: ರಾಜಕೀಯವಾಗಿ ಏನೇ ಬದಲಾವಣೆಯಾದರು ನಾನು ಯಾವುದೇ ಕಾರಣಕ್ಕೂ ಬೇರೆ ಪಕ್ಷ ಸೇರದೆ ತಟಸ್ಥ ನಿಲುವು ತಾಳಿದ್ದೇನೆ. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಮಾರು 8 ಬೇಡಿಕೆಗಳ ಮನವಿ ಸಲ್ಲಿಸಲಾಗಿದೆ. ಕೂಡಲೇ ಬೇಡಿಕೆಗಳನ್ನು ಪೂರೈಸಿಕೊಡುವ ಭರವಸೆ ನೀಡಿದರು.

ಸರ್ಕಾರದಿಂದ ಪತ್ರಕರ್ತರ ಭವನ ನಿರ್ಮಾಣ ಮಾಡಲು ಈಗಾಗಲೇ 10 ಸೆಂಟ್‌ ನಿವೇಶನ ನೀಡಲಾಗಿದೆ. ನಿವೇಶನಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬೇಲಿ ಹಾಕಿದ್ದಾರೆ. ಕೂಡಲೇ ತಹಶೀಲ್ದಾರ್‌ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು, ಪತ್ರಕರ್ತರ ನೇತೃತ್ವದಲ್ಲಿ ಸಭೆ ನಡೆಸಿ, ಬೇಲಿ ತೆರವು ಮಾಡಿ ಕೂಡಲೇ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದರು.

ಸಂಘದ ಉಪಾದ್ಯಕ್ಷ ಮರಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಎನ್‌.ರಾಜೇಶ್‌, ಖಜಾಂಚಿ ಮಲ್ಲಪ್ಪ, ನಿರ್ದೇಶಕರಾದ ಎ.ಎಚ್‌.ಗೋವಿಂದ, ಬಸಂತ್‌ ಮೋಟಾಯ್‌, ಅವಿನ್‌ ಪ್ರಕಾಶ್‌, ಮರಿಸ್ವಾಮಿ(ಸೋಮು), ಸದಸ್ಯರಾದ ಯೂನಸ್‌, ಸಾಗರ್‌, ಗಿರಿ ಇದ್ದರು.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.