ಮ್ಯೂಚುವಲ್ ಫ‌ಂಡ್‌ ಹೂಡಿಕೆದಾರರ 5 ತಪ್ಪುಗಳು!


Team Udayavani, Aug 5, 2019, 5:00 AM IST

c-20

ಭಾರತದಲ್ಲಿ ಬಂಡವಾಳ ಹೂಡುವ ವಿಶ್ವಸನೀಯ ಮಾರ್ಗ ಗಳಲ್ಲಿ ಮ್ಯೂಚುವಲ್ ಫ‌ಂಡ್‌ ಪ್ರಮುಖವಾದುದು. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಮಂದಿ ಮ್ಯೂಚುವಲ್ ಫ‌ಂಡ್‌ನ‌ತ್ತ ಆಕರ್ಷಿತರಾಗುತ್ತಿದ್ದಾರೆ. ಮ್ಯೂಚುವಲ್ ಫ‌ಂಡ್‌ ಯೋಜನೆಗಳು ಅದೆಷ್ಟೇ ಸರಳ ಮತ್ತು ಲಾಭಕರವಾಗಿದ್ದರೂ ಹೂಡಿಕೆದಾರರು, ತಮ್ಮ ಬಂಡವಾಳವನ್ನು ಸೂಕ್ತವಾಗಿ ನಿರ್ವಹಣೆ ಮಾಡದಿದ್ದರೆ ನಷ್ಟವಾಗುತ್ತದೆ. ತಪ್ಪು ನಿರ್ಧಾರಗಳಿಂದ ಆರ್ಥಿಕ ಅಸ್ಥಿರತೆ ಉಂಟಾಗಬಹುದು. ಹೂಡಿಕೆ ಮಾಡಿದ ಬಂಡವಾಳ ಲಾಭ ತರಬೇಕು. ಹೀಗಾಗಿ ಕಷ್ಟಪಟ್ಟು ಗಳಿಸಿದ ಹಣವನ್ನು ವ್ಯವಸ್ಥಿತವಾಗಿ ಬಳಸಬೇಕು. ಮ್ಯೂಚುವಲ್ ಫ‌ಂಡ್‌ ಹೂಡಿಕೆದಾರರು ಎಸಗುವ 5 ಸಾಮಾನ್ಯ ತಪ್ಪುಗಳು ಇವು.

ಲಾಭದ ಗುರಿ ಹಾಕುವುದು
ಬಂಡವಾಳ ಹೂಡಿಕೆ ಮಾಡುವುದೇ ಲಾಭಕ್ಕೋಸ್ಕರ. ಹೀಗಾಗಿ ನಿರ್ದಿಷ್ಟ ಮೊತ್ತದಷ್ಟು ಲಾಭದ ಗುರಿಯನ್ನು ಹೂಡಿಕೆದಾರ ಹಾಕಿಕೊಂಡಿರಬೇಕು. ನಮ್ಮ ಆರ್ಥಿಕ ಶಕ್ತಿಗೆ ತಕ್ಕಂತೆ, ಹೆಚ್ಚು ಪ್ರಯೋಜನಗಳನ್ನು ಒದಗಿಸುವ ಯೋಜನೆಗಳನ್ನು ಹುಡುಕಿ, ಪರಾಮರ್ಶಿಸಿ, ಬಳಿಕವೇ ಬಂಡವಾಳ ಹೂಡಬೇಕು.

ಕಡಿಮೆ ಅವಧಿಯ ಹೂಡಿಕೆ
ಮ್ಯೂಚುವಲ್ ಫ‌ಂಡ್‌ನ‌ಲ್ಲಿ ದೀರ್ಘಾವಧಿಗೆ ಹೂಡಿಕೆ ಮಾಡಿದಷ್ಟೂ ಹೆಚ್ಚು ಲಾಭ ದೊರೆಯುತ್ತದೆ. ಕಡೇ ಪಕ್ಷ 5 ರಿಂದ 7 ವರ್ಷಗಳ ಅವಧಿಗಾದರೂ ಹೂಡಿಕೆ ಮಾಡುವುದು ಉತ್ತಮ. ದೀರ್ಘಾವಧಿಯ ಕಾಲ ಬಂಡವಾಳ ಹೂಡಿಕೆ ಮಾಡುವುದರಿಂದ, ಒಳಹೊರಗು ತಿಳಿಯುವುದರ ಜತೆಗೆ, ಮಾರುಕಟ್ಟೆಯಲ್ಲಿ ನಿಯಂತ್ರಣ ಸಾಧಿಸಬಹುದಾಗಿದೆ.

ಎನ್‌ಎವಿಗೆ ಹೋಲಿಕೆ
ದಿ ಚೀಪರ್‌, ದಿ ಬೆಟರ್‌’ ಎಂಬ ಮಾತನ್ನು ನೀವು ಕೇಳಿರುತ್ತೀರಿ. ಮ್ಯೂಚುವಲ್ ಫ‌ಂಡ್ಸ್‌ ವಿಷಯದಲ್ಲಿ ಹಾಗನ್ನಲು ಸಾಧ್ಯವೇ ಇಲ್ಲ. ಸಾಮಾನ್ಯವಾಗಿ ಹೊಸ ಹೂಡಿಕೆದಾರರು ಈ ತಪ್ಪನ್ನು ಮಾಡುತ್ತಾರೆ. ಅವರು ಮ್ಯೂಚುವಲ್ ಫ‌ಂಡ್‌ನ‌ ನಿವ್ವಳ ಆಸ್ತಿ ಮೌಲ್ಯ (NAV- Net Asset Value)ಕ್ಕೆ ತಕ್ಕಂತೆ ಬಂಡವಾಳ ಹಾಕುತ್ತಾರೆ. ಅದು ತಪ್ಪು. ಮ್ಯೂಚುವಲ್ ಫ‌ಂಡ್ಸ್‌ಗಳನ್ನು ಯೂನಿಟ್ ಲೆಕ್ಕದಲ್ಲಿ ಖರೀದಿಸಲಾಗುತ್ತದೆ. ಪ್ರತಿ ಯೂನಿಟ್ ಬೆಲೆ ಎಷ್ಟಿದೆ ಎಂಬುದನ್ನು ಹೂಡಿಕೆದಾರರು ತಿಳಿದಿರಬೇಕು.
ಹಲವು ಹೂಡಿಕೆ
ವಿವಿಧ ಮ್ಯೂಚುವಲ್ ಫ‌ಂಡ್‌ ಯೋಜನೆಗಳಲ್ಲಿ ಹೂಡಿಕೆ ಮಾಡುವುದರಿಂದ ಲಾಭ ಹೆಚ್ಚು ಎನ್ನುವುದು ತಪ್ಪು ಕಲ್ಪನೆ. ಈ ರೀತಿ ಹೂಡಿಕೆ ಮಾಡುವುದರಿಂದ ನಷ್ಟವಾಗುವ ಸಾಧ್ಯತೆ ಹೆಚ್ಚು. ಕೆಲ ಯೋಜನೆಗಳು ನಮ್ಮ ಹೂಡಿಕೆಗೆ ತಕ್ಕಂತೆ ಲಾಭ ತಂದುಕೊಡದೇ ಇರಬಹುದು. ಅಲ್ಲದೆ, ಹಲವು ಯೋಜನೆಗಳಲ್ಲಿ ಹೂಡಿಕೆ ಮಾಡಿದಾಗ ವಿವಿಧ ದಿನಾಂಕಗಳಲ್ಲಿ ಹಣ ಕಡಿತಗೊಳ್ಳುವ ಕಾರಣ ಹೂಡಿಕೆದಾರನ ಖಾತೆಯೂ ಖಾಲಿಯಾಗುತ್ತದೆ. ಅದೇ ರೀತಿ, ಎಲ್ಲ ಹಣವನ್ನೂ ಒಂದೇ ಯೋಜನೆಯಲ್ಲಿ ಹೂಡಿಕೆ ಮಾಡುವುದೂ ಆರೋಗ್ಯಕರವಲ್ಲ.
ನಷ್ಟದ ನಿರ್ಲಕ್ಷ್ಯ
ಹೂಡಿಕೆ ಏರಿಳಿತಗಳ ಗೂಳಿ ಆಟವಿದ್ದಂತೆ. ಮೂಲ ಬಂಡವಾಳವೇ ಕೈತಪ್ಪಿ ಹೋಗುವ ಅಪಾಯವೂ ಇರುತ್ತದೆ. ಈ ವೇಳೆ ನಿರ್ಲಕ್ಷ್ಯ ವಹಿಸಬಾರದು. ನಷ್ಟವಾಗುವ ಸಾಧ್ಯತೆಗಳಿದ್ದರೆ ಅದನ್ನು ಖಾತರಿ ಪಡಿಸಿಕೊಂಡು ಇನ್ನಿತರ ಯೋಜನೆಗಳಿಂದ ಹೂಡಿಕೆ ವಾಪಸ್‌ ಪಡೆಯುವ ಬಗ್ಗೆ ಚಿಂತಿಸಬೇಕು. ಇಲ್ಲವೇ, ಸದ್ಯಕ್ಕೆ ನಷ್ಟ ಅನುಭವಿಸಿದರೂ ಮುಂದಿನ ಆರು ತಿಂಗಳಿಗೆ ನಿಮ್ಮ ಖಾತೆಯಲ್ಲಿ ಹಣ ಇರುವಂತೆ ನೋಡಿಕೊಳ್ಳಿ.

•ಮಲ್ಲಪ್ಪ ಪಾರೆಗಾಂವ

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.