ಬಿಆರ್‌ಟಿಎಸ್‌-ಟೆಂಡರ್‌ಶ್ಯೂರ್‌ ರಸ್ತೆ ಶೀಘ್ರ ಉದ್ಘಾಟನೆ


Team Udayavani, Aug 5, 2019, 8:40 AM IST

huballi-tdy-2

ಹುಬ್ಬಳ್ಳಿ: ಸಿಆರ್‌ಎಫ್‌ ಯೋಜನೆಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮಾತನಾಡಿದರು.

ಹುಬ್ಬಳ್ಳಿ: ಸೆಪ್ಟೆಂಬರ್‌ ಮೊದಲ ಅಥವಾ ಎರಡನೇ ವಾರದಲ್ಲಿ ಬಿಆರ್‌ಟಿಎಸ್‌ ಹಾಗೂ ಟೆಂಡರ್‌ಶ್ಯೂರ್‌ ರಸ್ತೆ ಉದ್ಘಾಟಿಸುವ ಚಿಂತನೆ ನಡೆದಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ಅಶೋಕ ನಗರದ ರೈಲ್ವೆ ಸೇತುವೆಯಿಂದ ಉಪ ಕಾರಾಗೃಹದವರೆಗೆ ಸಿಆರ್‌ಎಫ್‌ ಯೋಜನೆಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ರವಿವಾರ ಚಾಲನೆ ನೀಡಿ ಡಾ| ಡಿ.ಎಸ್‌.ಕರ್ಕಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಾನಗರದ ಪ್ರಮುಖ ಯೋಜನೆಗಳು ಪೂರ್ಣಗೊಂಡಿದ್ದು, ಸಣ್ಣಪುಟ್ಟ ಕೆಲಸಗಳು ಬಾಕಿ ಉಳಿದಿವೆ. ಇನ್ನೊಂದು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಉದ್ಘಾಟನೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುತ್ತೇನೆ. ಈ ಕಾರ್ಯಕ್ರಮಗಳಿಗೆ ಕೇಂದ್ರದಿಂದ ಗಣ್ಯರನ್ನು ಆಹ್ವಾನಿಸುವ ಕುರಿತು ಚರ್ಚೆ ಮಾಡಲಾಗುವುದು ಎಂದರು.

ಕೇಂದ್ರ ರಸ್ತೆ ನಿಧಿಯಲ್ಲಿ ಹಿಂದೆಂದೂ ಕೇಂದ್ರದಿಂದ ಬಿಡುಗಡೆಯಾಗಿರದಷ್ಟು ಹಣವನ್ನು ಬಿಜೆಪಿ ಸರಕಾರ ರಾಜ್ಯಕ್ಕೆ ನೀಡಿದೆ. ಅವಳಿ ನಗರದಲ್ಲಿ ಕಾಂಕ್ರೀಟ್ ರಸ್ತೆಗಳು ನಿರ್ಮಾಣವಾಗುತ್ತಿರುವುದರಿಂದ ಸಾಕಷ್ಟು ಬದಲಾವಣೆಯಾಗಿದೆ. ಕಳೆದ ಸರಕಾರದಲ್ಲಿ ಗುತ್ತಿಗೆ ಕರೆಯಲು, ಅನುದಾನ ನೀಡಲು ಹಿಂದೇಟು ಹಾಕಿದ ಪರಿಣಾಮ ಮಹಾನಗರದಲ್ಲಿ ಶೇ.30 ಕಾಮಗಾರಿಗಳು ಮುಗಿದಿದೆ. ಇಷ್ಟೇ ಕಾಮಗಾರಿಯಿಂದ ನಗರದ ಚಿತ್ರಣ ಬದಲಾಗಿದೆ. ಆದಷ್ಟು ಶೀಘ್ರದಲ್ಲಿ ಉಳಿದ ಕಾಮಗಾರಿಗಳಿಗೆ ಟೆಂಡರ್‌ ಕರೆಯುವುದು, ಟೆಂಡರ್‌ ಆಗಿರುವ ಕಾಮಗಾರಿಗಳಿಗೆ ಕಾರ್ಯಾದೇಶ ನೀಡುವ ಕೆಲಸ ಆರಂಭವಾಗಲಿದೆ. ಈ ಯೋಜನೆಗಳಿಗೆ ಅನುದಾನ ಕೊರತೆಯಾಗದಂತೆ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ಪಿಂಟೋ ರಸ್ತೆಯಿಂದ ಅಂಬೇಶ ಹೋಟೆಲ್ವರೆಗಿನ ಯೋಜನೆಯಲ್ಲಿ ಹೆಚ್ಚುವರಿಯಾಗಿ ಅಶೋಕ ನಗರದ ರೈಲ್ವೆ ಸೇತುವೆಯಿಂದ ಉಪ ಕಾರಾಗೃಹದವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಶೀಘ್ರದಲ್ಲಿ ನೀಲಿಜಿನ್‌ ರಸ್ತೆ ಸೇರಿದಂತೆ ಆಟೋ ಕಾಂಪ್ಲೆಕ್ಸ್‌ನಲ್ಲಿರುವ ಎಲ್ಲ ರಸ್ತೆಗಳನ್ನು ಕಾಂಕ್ರೀಟ್ ರಸ್ತೆಗಳನ್ನಾಗಿಸಲಾಗುವುದು. ಕೇಶ್ವಾಪುರದಿಂದ ಬೆಂಗೇರಿ- ಗೋಪನಕೊಪ್ಪ- ಉಣಕಲ್ಲ ರಸ್ತೆಯನ್ನು ಸಿಆರ್‌ಎಫ್‌ ಯೋಜನೆಯಲ್ಲಿ ನಿರ್ಮಿಸಲಾಗುವುದು. ಸಿಆರ್‌ಎಫ್‌ ಯೋಜನೆ ಎಲ್ಲ ಕಾಮಗಾರಿಗಳು ಶೇ.100 ಪೂರ್ಣಗೊಂಡರೆ ನಗರ ಚಿತ್ರವೇ ಬದಲಾಗಲಿದೆ ಎಂದರು.

ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ನಮ್ಮದೇ ಸರಕಾರ ಇರುವುದರಿಂದ ಯಾವುದೇ ಯೋಜನೆಗಳಿಗೆ ಅನುದಾನದ ಕೊರತೆಯಾಗುವುದಿಲ್ಲ. ಹೊಸ ಯೋಜನೆಗಳನ್ನು ತರಲು ಶ್ರಮಿಸಲಾಗುವುದು. ಟ್ರಾಫಿಕ್‌ ಐಲೆಂಡ್‌ನ‌ಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಆದಷ್ಟು ಬೇಗ ಕೇಂದ್ರದಿಂದ ಅನುಮೋದನೆ ಪಡೆಯಲಾಗುವುದು. ಪ್ರಹ್ಲಾದ ಜೋಶಿ ಅವರು ಕೇಂದ್ರ ಸಚಿವರಾಗಿರುವುದಿಂದ ಕೇಂದ್ರದಿಂದ ಅನುದಾನ ಹಾಗೂ ಹೊಸ ಯೋಜನೆಗಳ ಮಂಜೂರಾತಿಗೆ ಸಮಸ್ಯೆಯಾಗುವುದಿಲ್ಲ. ನಗರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಹೇಳಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಇ ಎನ್‌.ಎಂ. ಕುಲಕರ್ಣಿ, ಕೃಷ್ಣಾರೆಡ್ಡಿ, ಮುಖಂಡರಾದ ಸಿದ್ದು ಮೊಗಲಿಶೆಟ್ಟರ ಇನ್ನಿತರರಿದ್ದರು.

‘ನೀವು ಡಿಸಿಎಂ ಆಗಬೇಕು, ನಗರಾಭಿವೃದ್ಧಿಗೆ ಸಹಕಾರಿ ಆಗುತ್ತೆ’

ಜನರನ್ನುದ್ದೇಶಿಸಿ ಮಾಜಿ ಸಿಎಂ ಜಗದೀಶ ಶೆಟ್ಟರ ಮಾತನಾಡುತ್ತಿದ್ದ ವೇಳೆ ನಾಗರಿಕರೊಬ್ಬರು ಎದ್ದು ನಿಂತು, ನೀವು ಮುಖ್ಯಮಂತ್ರಿಯಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೀರಿ. ಇದೀಗ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿರುವುದರಿಂದ ನೀವು ಉಪ ಮುಖ್ಯಮಂತ್ರಿಯಾಗಬೇಕು. ಇದರಿಂದ ಮಹಾನಗರದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಯಾರಿಗೆ ಬೇಕಾದರೂ ಮನವಿ ಸಲ್ಲಿಸಲು ಸಿದ್ಧರಿದ್ದೇವೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ, ಯಾವುದೇ ಮನವಿ ಸಲ್ಲಿಸುವುದು ಬೇಡ. ಏನು ಆಗಬೇಕೋ ಅದು ಆಗುತ್ತದೆ ಎಂದರು.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.