ಆಧುನಿಕ ತಂತ್ರಜ್ಞಾನ ಶಿಕ್ಷಣ ಬದುಕಿಗೆ ಹೆದ್ದಾರಿ
ಶಾಲಾ ದಿನಗಳಲ್ಲಿಯೇ ಮಕ್ಕಳಿಗೆ ವಿಜ್ಞಾನದ ಅರಿವು ಮೂಡಿಸಿ
Team Udayavani, Aug 5, 2019, 9:37 AM IST
ಗಜೇಂದ್ರಗಡ: ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ನಡೆದ ವಿಜ್ಞಾನ, ಗಣಿತ ವಿಷಯದ ಚಿತ್ರಗಳ ರಂಗೋಲಿ ಸ್ಪರ್ಧೆಯನ್ನು ಶಾಸಕ ಕಳಕಪ್ಪ ಬಂಡಿ ವೀಕ್ಷಿಸಿದರು.
ಗಜೇಂದ್ರಗಡ: ತಾಂತ್ರಿಕ ಯುಗದಲ್ಲಿ ಆಧುನಿಕ ತಂತ್ರಜ್ಞಾನ ಶಿಕ್ಷಣ ಬದುಕಿಗೆ ಹೆದ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಶಾಲಾ ದಿನಗಳಲ್ಲಿಯೇ ಮಕ್ಕಳಿಗೆ ವಿಜ್ಞಾನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮುಂದಾಗಬೇಕು. ಇದಕ್ಕೆ ಶಿಕ್ಷಣ ಇಲಾಖೆ ಪ್ರೋತ್ಸಾಹ ನೀಡಲಾಗುವುದು ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು.
ಪಟ್ಟಣದ ಸರಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ವಿಜ್ಞಾನ, ಗಣಿತ ವಿಷಯದ ಚಿತ್ರಗಳ ರಂಗೋಲಿ ಸ್ಪರ್ಧೆ ವೀಕ್ಷಿಸಿ, ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ವಿಜ್ಞಾನ ಸಹ ಬದಲಾವಣೆಯಾಗುತ್ತಿದೆ. ವಿಶ್ವವೇ ಇದರ ಮೇಲೆ ನಿಂತಿದೆ. ವಿದ್ಯಾರ್ಥಿಗಳು ಯಾವುದೇ ಸಣ್ಣ ಸಮಸ್ಯೆಯನ್ನು ಅಂತರ್ಜಾಲ ತಾಣದಲ್ಲಿ ಹುಡುಕಿ ಪರಿಹಾರ ಕಂಡುಕೊಳ್ಳುವಷ್ಟರ ಮಟ್ಟೆಗೆ ವಿಜ್ಞಾನ ಕ್ಷಿಪ್ರ ಕ್ರಾಂತಿಯಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಭವಿಷ್ಯ ಭಾರತದ ಬುನಾದಿಯಾಗಿದೆ. ವಿಜ್ಞಾನ ತಂತ್ರಜ್ಞಾನಗಳ ಪರಿಚಯ, ವಿಜ್ಞಾನ ಗೋಷ್ಠಿ, ಪ್ರಾಯೋಗಿಕ ಪ್ರಾತ್ಯಕ್ಷಿಕೆ ಸೇರಿ ಇನ್ನಿತರ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಹೊರತರಲು ಶಿಕ್ಷಕರು ಹಾಗೂ ಪಾಲಕರು ಶ್ರಮಿಸಬೇಕಾಗಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂದರ್ಭದಲ್ಲಿ ವಿಜ್ಞಾನ ವಿಷಯ ಕಠಿಣ ಆಗಬಾರದು ಎನ್ನುವ ಉದ್ದೇಶದಿಂದ ಇಂಥಹ ಸ್ಪರ್ಧೆಗಳನ್ನು ಪ್ರತಿಯೊಂದು ಸರಕಾರಿ ಶಾಲೆಗಳಲ್ಲಿ ಹಮ್ಮಿಕೊಳ್ಳುವ ಮೂಲಕ ವಿದ್ಯಾಭ್ಯಾಸಕ್ಕೆ ಪೂರಕವಾಗುವಂತಹ ವಾತಾವರಣ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ಮುಖ್ಯೋಪಾಧ್ಯಾಯ ಜಾಲಿಹಾಳ ಮಾತನಾಡಿ, ವಿದ್ಯಾರ್ಥಿಗಳಿಗೆ ವೈಜ್ಞಾನಿಕ ವಿಷಯಗಳ ಸ್ಥೂಲ ಪರಿಚಯ ತೀರಾ ಅವಶ್ಯಕವಾಗಿದೆ. ವಿಜ್ಞಾನ ಎಂದರೆ ನಿಖರವಾದ ಮತ್ತು ಸಂದೇಹಗಳಿಲ್ಲದ ವಿಶೇಷ ಜ್ಞಾನವಾಗಿದೆ. ವಿಜ್ಞಾನ ಮೂಲಕ ನಿರೀಕ್ಷಿತ ಫಲ ಕಂಡುಕೊಳ್ಳಬಹುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಿಜ್ಞಾನ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.
ಶಿಕ್ಷಕರಾದ ಕೆ.ಎಸ್. ರಾಜೂರ, ಐ.ಎಸ್. ಬದಾಮಿ ಎಫ್.ಎಚ್. ಡಾಲಾಯತ್, ಎಸ್.ಡಿ. ಕುರಿ, ಎಸ್.ಡಿ. ಕೋಲಕಾರ, ಎನ್.ಜಿ. ಹೊಸಮನಿ, ಎಂ.ವಿ. ಲೂತಿಮಠ, ಕೆ.ಸಿ. ಲಮಾಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಮತದಾನದ ಮುನ್ನಾ ದಿನ ಬಸ್ಗಳು ಫುಲ್ ರಶ್: ಜನರ ಪರದಾಟ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
MUST WATCH
ಹೊಸ ಸೇರ್ಪಡೆ
May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್ ಯಾತ್ರೆ
ಅಧಿಕಾರಕ್ಕೆ ಬಂದರೆ ರಾಮ ಮಂದಿರ ತೀರ್ಪು ಬದಲಿಸಲು ರಾಹುಲ್ ಚಿಂತನೆ: ಕೈ ಮಾಜಿ ನಾಯಕ ಆಚಾರ್ಯ
Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ
Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್ ಕಡ್ಡಾಯ
ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು