ಬಸಾಪೂರ ಏತ ನೀರಾವರಿ ಶೀಘ್ರ ಕಾರ್ಯಾರಂಭ

•2740 ಎಕರೆ ಕೃಷಿಭೂಮಿ ಸಂಪೂರ್ಣ ನೀರಾವರಿ•ಭೂ ಸ್ವಾಧೀನಕ್ಕೆ ಬೇಕಿದೆ ರೈತರ ಸಹಕಾರ

Team Udayavani, Aug 5, 2019, 9:50 AM IST

hv-tdy-3

ಹಾನಗಲ್ಲ: ಬ್ಯಾಗವಾದಿ ಗ್ರಾಮದಲ್ಲಿ ಬಸಾಪುರ ಏತನೀರಾವರಿ ಯೋಜನೆಯ 2ನೇ ಹಂತದ ಕಾಮಗಾರಿಯಡಿ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಶಾಸಕ ಸಿ.ಎಂ.ಉದಾಸಿ ಚಾಲನೆ ನೀಡಿ ಮಾತನಾಡಿದರು.

ಹಾನಗಲ್ಲ: ರಾಜ್ಯ ಸರಕಾರದ ಅನುದಾನ, ಜನರ ಸಹಕಾರ ಹಾಗೂ ಜನಪ್ರತಿನಿಧಿಗಳ ಪ್ರಾಮಾಣಿಕ ಪ್ರಯತ್ನದಿಂದ ಜನಪರ ಯೋಜನೆಗಳು ಜಾರಿಯಾಗಲಿದ್ದು, ಈಗ 2ನೇ ಹಂತದ ಬಸಾಪೂರ ಏತ ನೀರಾವರಿ ಯೋಜನೆ ಆರಂಭಗೊಂಡು 2740 ಎಕರೆ ಕೃಷಿಭೂಮಿ ನೀರಾವರಿಗೊಳಪಡಲಿದೆ ಎಂದು ಶಾಸಕ ಸಿ.ಎಂ.ಉದಾಸಿ ತಿಳಿಸಿದರು.

ರವಿವಾರ ತಾಲೂಕಿನ ಬ್ಯಾಗವಾದಿ ಗ್ರಾಮದಲ್ಲಿ ವರದಾ ನದಿ ಬಲದಂಡೆ ಕಾಲುವೆ ಯೋಜನೆಯ 2ನೇ ಹಂತದ ಕಾಲುವೆಗಳ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕ ನೀರಾವರಿ ನಿಗಮ ಈ ಯೋಜನೆ ಅನುಷ್ಠಾನಗೊಳಿಸುತ್ತಿದ್ದು, ವಿದ್ಯುತ್‌ ಸಂಪರ್ಕಕ್ಕೆ 72 ಲಕ್ಷ ರೂ. ಇಲಾಖೆಗೆ ಪಾವತಿಸದೆ ಯೋಜನೆ ನಿಧಾನಗತಿಯಲ್ಲಿತ್ತು. ಇಲಾಖೆ ಅಧಿಕಾರಿಗಳ ಬೇಡಿಕೆಯಂತೆ ನೀರಾವರಿ ನಿಗಮದಿಂದ 72 ಲಕ್ಷ ರೂ. ಬಿಡುಗಡೆಗೊಳಿಸಿ ಈ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಯೋಜನೆಯಿಂದ ತಾಲೂಕಿನ 2740 ಎಕರೆ ಕೃಷಿಭೂಮಿ ನೀರಾವರಿಗೊಳಪಟ್ಟಿದೆ ಎಂದ ಅವರು, ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಭೂ ಸ್ವಾಧೀನ ಪಡಿಸಿಕೊಳ್ಳುವಾಗ ರೈತ ಸಮುದಾಯ ಸಹಕರಿಸಬೇಕು. ಭೂ ಸ್ವಾದೀನಕ್ಕೆ ಸಂಬಂಧಿಸಿದಂತೆ ಉಳಿದಿರುವ ಪರಿಹಾರದ ಬಾಕಿ ಶೀಘ್ರದಲ್ಲಿ ರೈತರಿಗೆ ನೀಡುವಂತೆ ಇಲಾಖೆಗೆ ಸೂಚಿಸಲಾಗಿದೆ. ಈ ಕುರಿತು ಭಯಪಡಬೇಕಾಗಿಲ್ಲ ಎಂದರು.

ತಾಲೂಕಿನ ಗುಡ್ಡದ ಭಾಗದ ಎಲ್ಲ ಕೆರೆಗಳನ್ನು ತುಂಬಿಸುವ ಆಸೆ ತಮ್ಮದಾಗಿದೆ. ಇದರಿಂದ ಅಂತರ್ಜಲ ಹೆಚ್ಚಿಸಿ ಕೊಳವೆ ಭಾವಿಗಳಲ್ಲಿ ನೀರು ಹೆಚ್ಚಿಸಲು ಸಹಕಾರಿಯಾಗುತ್ತದೆ. ಸೋಮಾಪುರದ ಹತ್ತಿರ 10 ಕೋಟಿ ರೂ. ವೆಚ್ಚದಲ್ಲಿ ಬ್ಯಾರೇಜ್‌ ನಿರ್ಮಿಸಿ ನೀರು ನಿಲ್ಲಿಸಿದರೆ ಸುಮಾರು 10 ಕಿಮೀ ವರೆಗೂ ಕೊಳವೆ ಬಾವಿಗಳು ಪುನಶ್ಚೇತನಗೊಂಡು, ಮಳೆಯ ಅನಿಶ್ಚಿತತೆಯ ಸಂದರ್ಭದಲ್ಲಿ ಇವುಗಳ ಲಾಭ ರೈತರಿಗೆ ತಲುಪಲಿದೆ. ಇದರೊಂದಿಗೆ 604 ಕೋಟಿ ರೂ.ಗಳಲ್ಲಿ ತಾಲೂಕಿನ ಬಾಳಂಬೀಡ, ಹುಲಗಡ್ಡಿ, ಗೊಂದಿ, ನರೇಗಲ್ ಸೇರಿದಂತೆ ನಾಲ್ಕು ಏತ ನೀರಾವರಿ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರದೊಂದಿಗೆ ಚರ್ಚಿಸಿ, ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಶೀಘ್ರದಲ್ಲಿ ನಾಲ್ಕೂ ಯೋಜನೆಗಳು ಮಂಜೂರಾಗಿ ಕಾರ್ಯರಂಭಗೊಳ್ಳಲಿವೆ ಎಂದು ಸಿ.ಎಂ.ಉದಾಸಿ ಭರವಸೆ ನೀಡಿದರು.

ನೀರಾವರಿ ನಿಗಮದ ಅಧಿಕಾರಿ ಬಿ.ಸುರೇಶ್‌ ಮಾತನಾಡಿ, ಬಸಾಪುರ ಏತ ನೀರಾವರಿ ಯೋಜನೆಯಡಿ 0.6 ಟಿಎಂಸಿ ನೀರು ಬಳಸಿಕೊಳ್ಳುವ ಅವಕಾಶವಿದೆ. ಮೊದಲ ಹಂತದಲ್ಲಿ ತಾಲೂಕಿನ 2240 ಎಕರೆ ಭೂಮಿಗೆ ನೀರುಣಿಸುವುದರ ಜತೆಗೆ 11 ಕೆರೆಗಳಿಗೆ ನೀರು ಹರಿಸಲಾಗುವುದು. ಈ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇನ್ನಷ್ಟು ಪೂರಕ ಕಾಮಗಾರಿ ಕೈಗೊಳ್ಳಬೇಕಿದೆ. ಬಸಾಪುರ ಏತನೀರಾವರಿಯಿಂದ ಎಲ್ಲ ಕೆರೆ-ಕಟ್ಟೆಗಳಿಗೂ ನೀರು ತುಂಬಿಸುವ ನಿರಂತರ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಿವಲಿಂಗಪ್ಪ ತಲ್ಲೂರ ಮಾತನಾಡಿ, ಹಿಂದಿನ ಸರಕಾರದ ಅವಧಿಯಲ್ಲಿ ನಿಧಾನಗತಿಯಲ್ಲಿ ಸಾಗಿತ್ತು. ಸಿ.ಎಂ.ಉದಾಸಿ ಅವರು ಶಾಸಕರಾಗಿ ಆಯ್ಕೆಯಾದ ನಂತರ ಕಾಮಗಾರಿ ಒಂದು ವರ್ಷದ ಅವಧಿಯಲ್ಲಿ ವೇಗ ಪಡೆದುಕೊಂಡಿತ್ತು. ನೀರಾವರಿ ನಿಗಮದೊಂದಿಗೆ ಶಾಸಕರು ಚರ್ಚೆ ನಡೆಸಿ ಹಣ ಬಿಡುಗಡೆಗೊಳಿಸಿದ್ದರಿಂದ ಯೋಜನೆ ಸಾಕಾರಗೊಂಡಿದೆ. ಈ ಯೋಜನೆಯಡಿ ಇನ್ನೂ 7 ಕೋಟಿಗಳ ಕಾಮಗಾರಿ ಬಾಕಿ ಉಳಿದಿದೆ. ಹಿರೇಬಾಸೂರಿನ ಕೆರೆಗಳು ಕಾಲುವೆಗಳಿಗಿಂತ ಎತ್ತರದಲ್ಲಿರುವುದರಿಂದ ನೀರು ಹರಿಸುವುದು ತಾಂತ್ರಿಕವಾಗಿ ಕಷ್ಟದಾಯಕವಾಗಿದ್ದು, ರೈತರು ಪ್ರತ್ಯೇಕ ಮೋಟರ್‌ ಅಳವಡಿಸಿಕೊಂಡು ನೀರು ಪಡೆಯಬಹುದು ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಬಿ.ಎಸ್‌.ಅಕ್ಕಿವಳ್ಳಿ, ಸಿದ್ದಲಿಂಗಪ್ಪ ಶಂಕ್ರಿಕೊಪ್ಪ, ಮಹೇಶ ಬಣಕಾರ, ಚಂದ್ರಣ್ಣ ಕಳ್ಳಿ, ಎಸ್‌.ಆರ್‌.ಪಾಟೀಲ, ಸುರೇಶ ಕಾಗಿನೆಲ್ಲಿ, ಮಾರ್ತಾಂಡಪ್ಪ ದೇಸಾಯಿ, ಅಶೋಕ ಪೂಜಾರ, ಚಂದ್ರಪ್ಪ ಬಣಕಾರ, ನೂರಾನಿ ಮುಲ್ಲಾ, ಭೀಮಣ್ಣ ಯಮನೂರ, ಸುರೇಶ ಸುಣಗಾರ, ಹರೀಶ ಕೊಪ್ಪದ್‌ ನೀರಾವರಿ ನಿಗಮದ ಅಧಿಕಾರಿಗಳಾದ ಮಧುಕುಮಾರ, ದೇವರಾಜ್‌ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.