ಜಿಲ್ಲಾದ್ಯಂತ ನಾಗರಪಂಚಮಿ ಸಂಭ್ರಮ

ನಾಗದೇವತೆ ಮೂರ್ತಿಗೆ ಹಾಲೆರೆದ ನೀರೆಯರು,ಜೋಕಾಲಿ ಜೀಕಿದ ಯುವತಿಯರು

Team Udayavani, Aug 5, 2019, 10:05 AM IST

kopala-tdy-1

ಕೊಪ್ಪಳ: ಕುಟುಂಬ ಸದಸ್ಯರು ನಾಗಪ್ಪ ದೇವಸ್ಥಾನಕ್ಕೆ ತೆರಳಿ ಹಾಲನ್ನೆರೆದರು.

ಕೊಪ್ಪಳ: ಜಿಲ್ಲಾದ್ಯಂತ ನಾಗರ ಪಂಚಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಹಿಳೆಯರು, ಮಕ್ಕಳು ನಾಗದೇವತೆ ಮೂರ್ತಿಗೆ ಶ್ರದ್ಧಾ ಭಕ್ತಿಯಿಂದ ಹಾಲ್ಲೆರೆದು ಸಿಹಿ ಪದಾರ್ಥವನ್ನು ಅರ್ಪಿಸಿ ಪೂಜೆ ಸಲ್ಲಿಸಿದರು.

ಮನೆಯಲ್ಲಿ ಹೋಳಿಗೆ, ಖರ್ಚಿಕಾಯಿ, ಎಳ್ಳು ಚಿಗುಳಿ, ಎಳ್ಳುಂಡಿ ಸಿದ್ದಪಡಿಸಿ ಮಹಿಳೆಯರೆಲ್ಲ ಸೇರಿ ಸಮೀಪದ ನಾಗಪ್ಪ ದೇವಸ್ಥಾನಕ್ಕೆ ತೆರಳಿ ಕೊಬ್ಬರಿ ಬಟ್ಟಲಿನಲ್ಲಿ ಬೆಲ್ಲವನ್ನಿಟ್ಟು ಹಾಲೆರೆದರು. ವಿಶೇಷವಾಗಿ ರೈತರು, ರೈತ ಮಹಿಳೆಯರು ವರ್ಷಪೂರ್ತಿ ಕೃಷಿ ಬದುಕಿನಲ್ಲಿ ತೊಡಗಿದ್ದಾಗ ಯಾವುದೇ ವಿಷ ಜಂತುಗಳಿಂದ ಅಪಾಯವಾಗದಿರಲಿ. ನಮ್ಮ ಮಕ್ಕಳು ನಾವು ಕ್ಷೇಮದಿಂದ ಇರಲಿ. ಮಳೆ-ಬೆಳೆ ಸಮೃದ್ಧಿಯಾಗಿ ಬರಲಿ. ನಾಡಿನೆ‌ಲ್ಲೆಡೆ ಸುಖ-ಶಾಂತಿನೆಲೆಸಲಿ ಎಂಬು ಪ್ರಾರ್ಥಿಸಿ ನಾಗದೇವತೆ ಮೂರ್ತಿಗೆ ಹಾಲೆರೆದರು.

ನಾಗಕಟ್ಟೆಗೆ ವಿಶೇಷ ಪೂಜೆ:  ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಮಹಿಳೆಯರು ಮಕ್ಕಳಾಯಾಗಿ ನಾಗರ ಮೂರ್ತಿಗಳಿಗೆ ಹಾಗೂ ಹುತ್ತಗಳಿಗೆ ಹಾಲೆರೆದು ಸಂಭ್ರಮಿಸಿದರು. ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಬೆಳಗಿನ ಜಾವ ಮನೆಯ ಮುಂದೆ ನಾಗ ಸ್ವರೂಪಿನ ರಂಗೋಲಿಗಳು ಬಿಡಿಸಲಾಗಿತ್ತು. ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ನಾಗಕಟ್ಟೆ ಪೂಜೆ ಸಲ್ಲಿಸಿದರು. ಹೊಸಬಟ್ಟೆಗಳನ್ನು ಧರಿಸಿ, ಕೈಯಲ್ಲಿ ಪೂಜಾ ಸಾಮಾಗ್ರಿ, ನೈವೇದ್ಯ ಹಿಡಿದು ಭಕ್ತಿಯಿಂದ ದೇವಾಲಯಗಳಿಗೆ ನಾಗ ದೇವರ ಮೂರ್ತಿಗೆ ಹಾಲೆರೆದರು. ನಂತರ ತರಹೇವಾರಿ ಉಂಡಿಗಳು, ಕುರುಕುಲ ತಿಂಡಿಗಳನ್ನು ಅಕ್ಕಪಕ್ಕದವರೊಂದಿಗೆ ವಿನಿಮಯ ಮಾಡಿ ಸಂಭ್ರಮಿಸಿದರು. ಗಿಡಗಳಿಗೆ, ಮನೆಯಲ್ಲಿ ಕಟ್ಟಿದ್ದ ಜೊಕಾಲಿ ಆಡಿ ಸಂಭ್ರಮಿಸಿದರು. ಮಕ್ಕಳು ಗಿಟಕ ಕೊಬ್ಬರಿ ಹೋಳಿನಿಂದ ಬೋಲ ಬಗರಿ ಆಡಿ ಸಂಭ್ರಮಿಸಿದರು. ಮಳೆಗಾಲದ ಈ ಸಂದರ್ಭದಲ್ಲಿ ಸಮರ್ಪಕವಾಗಿ ಮಳೆಯಾಗದ ಕಾರಣ ಕೆಲವೆಡೆ ಹಬ್ಬ ಸಾಂಕೇತಿಕವೆನಿಸಿತು.
ಶ್ರದ್ಧಾಭಕ್ತಿಯ ನಾಗರ ಪಂಚಮಿ: ನಾಗರ ಪಂಚಮಿ ನಿಮಿತ್ತ ರವಿವಾರ ಪಟ್ಟಣದ ವಿವಿಧಡೆ ಮಹಿಳೆಯರು ಮತ್ತು ಮಕ್ಕಳು ನಾಗ ಮೂರ್ತಿಗಳಿಗೆ ಪೂಜೆ ಸಲ್ಲಿಸಿ, ತರಹೇವಾರಿ ಉಂಡಿ ನೈವೇದ್ಯ ಮಾಡಿ ಪ್ರಾರ್ಥಿಸಿದರು.

ಶ್ರಾವಣ ಮಾಸ ಪ್ರಾರಂಭದಲ್ಲಿ ಬರುವ ನಾಗರ ಪಂಚಮಿ ಮೊದಲ ಹಾಗೂ ದೊಡ್ಡ ಹಬ್ಬಗಳಲ್ಲಿ ಒಂದಾಗಿದೆ. ಸಂತಾನ ಪ್ರಾಪ್ತಿಗಾಗಿ, ಮಕ್ಕಳ ಉನ್ನತಿಗಾಗಿ, ನಾಗದೋಷ ಪರಿಹಾರಕ್ಕಾಗಿ, ಸ್ತ್ರೀಯರು ತಮ್ಮ ಸೋದರರ ಒಳಿತಿಗಾಗಿ ಅನಾದಿಕಾಲದಿಂದಲೂ ನಾಗದೇವತೆಯನ್ನು ಪೂಜಿಸುತ್ತಾ ಬಂದಿರುವುದು ವಿಶೇಷ. ಮನೆಯಲ್ಲಿ ತಾಯಂದಿರು ನಾಗಮೂರ್ತಿಗೆ ವಿಶೇಷ ತಿನಿಸುಗಳ ನೈವೇದ್ಯ ಮತ್ತು ಹರಕೆ ಹೊತ್ತವರು ಲೋಹಗಳ ಕಣ್ಣು, ಮೀಸೆ, ಇತ್ಯಾದಿಗಳನ್ನು ಸಮರ್ಪಿಸಿ, ಮನೆಯವರ ಶ್ರೇಯೋಭಿವೃದ್ಧಿಗಾಗಿ ಹರಕೆ ತೀರಿಸುವುದು ನಂಬಿಕೆ.

ಈ ಹಿನ್ನೆಲೆಯಲ್ಲಿ ಐತಿಹಾಸಿ ಪುಷ್ಕರಣಿ, ಕನಕಾಚಲಪತಿ ದೇವಸ್ಥಾನದ ಮುಂಭಾಗ ಸೇರಿದಂತೆ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಇರುವ ನಾಗದೇವರ ಕಟ್ಟೆಗೆ ಮಹಿಳೆಯರು ತಂಡೋಪ ತಂಡವಾಗಿ ತೆರಳಿ ಪೂಜೆ ಸಲ್ಲಿಸಿ ದೋಷ ನಿವಾರಣೆಗೆ ಭಕ್ತಿ ಸಮರ್ಪಿಸುವುದು ಕಂಡು ಬಂತು.

ಕೇಸೂರ-ದೋಟಿಹಾಳ: ಕೇಸೂರ, ದೋಟಿಹಾಳ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ರವಿವಾರ ನಾಗರಪಂಚಮಿ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ದೋಟಿಹಾಳ ಗ್ರಾಮದ ಶುಖಮುನಿಸ್ವಾಮಿ ಮಠದ ಹತ್ತಿರ, ರುದ್ರಮುನಿ ಸ್ವಾಮಿ ಮಠದ ಹತ್ತಿರ, ಕಾಳಿನ ಸಂತೆ ಬಾಜಾರ್‌ ಹತ್ತಿರ, ಹನುಮಂತನ ದೇವಸ್ಥಾನದ ಹತ್ತಿರ, ಕೇಸೂರ ಗ್ರಾಮದ ಮಹಾಂತೇಶ್ವರ ಸ್ವಾಮಿ ಮಠದ ಹತ್ತಿರ ಮತ್ತು ಬಸವಣ್ಣನ ದೇವಸ್ಥಾನದಲ್ಲಿ ಮಹಿಳೆಯರು ನಾಗ ದೇವತೆಗೆ ಹಾಲೆರೆದು ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಹಬ್ಬದ ಪ್ರಯುಕ್ತ ಗ್ರಾಮದ ಪ್ರತಿಮನೆಗಳಲ್ಲಿ ಹಲವಾರು ಬಗೆಯ ಲಾಡು (ಉಂಡಿ) ತಯಾರಿಸಿ ನಾಗದೇವತೆಗೆ ಪೂಜೆ ಸಲ್ಲಿಸಿ ಹಾಲನ್ನು ಎರೆದು ನಂತರ ಗಿಡಮರಗಳಿಗೆ ಜೋಕಾಲಿ ಕಟ್ಟಿ ಆಡಿದರು.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.