ಸರಕಾರಿ ಪ್ರೌಢಶಾಲೆಗಳಿಗೆ ಸೌಕರ್ಯ ಕೊರತೆ
Team Udayavani, Aug 6, 2019, 11:50 AM IST
ಅಫಜಲಪುರ: ನಿಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇದ್ದೂ ಇಲ್ಲದಂತಾಗಿರುವ ಶೌಚಾಲಯ.
ಅಫಜಲಪುರ: ತಾಲೂಕಿನಲ್ಲಿ ಸಾಕಷ್ಟು ಶಾಲೆಗಳು ಮೂಲಭೂತ ಸೌಕರ್ಯಗಳಿಲ್ಲದೆ ನರಳುತ್ತಿವೆ. ಹೀಗಾಗಿ ಮೂಲಭೂತ ಸೌಕರ್ಯಗಳಿಲ್ಲದ ಶಾಲೆಗಳು ನಮಗೆಕೆ ಎಂದು ವಿದ್ಯಾರ್ಥಿಗಳು, ಪಾಲಕರು, ಗ್ರಾಮಸ್ತರು ಕೇಳುವಂತಾಗಿದೆ.
ತಾಲೂಕಿನ ಹಳಿಯಾಳ, ಬಂದರವಾಡ, ಗೊಬ್ಬೂರ(ಬಿ), ಅತನುರ, ಅಫಜಲಪುರ ಪಟ್ಟಣದ ಸರ್ಕಾರಿ ಪ್ರೌಢಶಾಲೆ ಸೇರಿದಂತೆ ಬಹುತೇಕ ಶಾಲೆಗಳು ಶೀಥಿಲಾವಸ್ಥೆಗೆ ತಲುಪಿವೆ. ಮಳೆಗಾಲದಲ್ಲಿ ಸೋರುತ್ತವೆ. ಕಿಟಕಿ, ಬಾಗಿಲುಗಳು ಮುರಿದಿವೆ.
ತಾಲೂಕಿನ ನಿಲೂರು ಸೇರಿದಂತೆ ತಾಲೂಕಿನ ಸಾಕಷ್ಟು ಶಾಲೆಗಳಲ್ಲಿ ಶೌಚಾಲಯ ಇಲ್ಲದ್ದರಿಂದ ವಿದ್ಯಾರ್ಥಿನಿಯರು, ಶಿಕ್ಷಕಿಯರು ಸಮಸ್ಯೆ ಎದುರಿಸುವಂತಾಗಿದೆ.
ಐವತ್ತು ವರ್ಷ ಮೇಲ್ಪಟ್ಟ ಶಾಲೆಗಳೆಲ್ಲ ಈಗ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸೊರಗಿವೆ. ಹೀಗಾಗಿ ತಾಲೂಕಿನಾದ್ಯಂತ ಇರುವ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಅದರಲ್ಲೂ ಮುಖ್ಯವಾಗಿ ಮಹಿಳಾ ಶೌಚಾಲಯ ನಿರ್ಮಿಸಿ ಸರಿಯಾಗಿ ಬಳಕೆ ಮಾಡಿಸಬೇಕಾಗಿದೆ. ನಂತರ ಸೋರುವ ಮೇಲ್ಛಾವಣಿಗಳನ್ನು ದುರಸ್ತಿಗೊಳಿಸಬೇಕಾಗಿದೆ. ಶಾಲೆ ಅಂಗಳದಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕಾಗಿದೆ. ಹೀಗೆ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕಾದ ಜವಾಬ್ದಾರಿ ಶಿಕ್ಷಣ ಇಲಾಖೆ ಮತ್ತು ತಾಲೂಕಿನ ಶಾಸಕರ ಮೇಲಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಹಾಗೂ ಪಾಲಕರು ಆಗ್ರಹಿಸಿದ್ದಾರೆ.
ತಾಲೂಕಿನಾದ್ಯಂತ 50 ವರ್ಷ ಮೇಲ್ಪಟ್ಟ ಶಾಲೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ರೂಪಿಸಲಾಗುತ್ತಿದೆ. ಇನ್ನೂ ಶೌಚಾಲಯ, ಮೂಲಭೂತ ಸೌಕರ್ಯಗಳ ಕೊರತೆ ಕಂಡು ಬಂದರೆ ಕೂಡಲೇ ಅವುಗಳನ್ನು ಪೂರೈಸುವ ಕೆಲಸ ಮಾಡಲಾಗುತ್ತದೆ.•ಎಂ.ವೈ. ಪಾಟೀಲ ಶಾಸಕರು ಅಫಜಲಪುರ
•ಮಲ್ಲಿಕಾರ್ಜುನ ಹಿರೇಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ