ನೀರು ಹರಿಸ‌ಲು ಅನುಮತಿ ಕೋರಿ ಪತ್ರ

•ಸರ್ಕಾರಕ್ಕೆ ಅಭಿಯಂತರ ಪತ್ರ •40 ಟಿಎಂಸಿ ನೀರು ಸಂಗ್ರಹ •ಜಲಾನಯನ ಪ್ರದೇಶದಲ್ಲಿ ಮಳೆ ಚುರುಕು

Team Udayavani, Aug 6, 2019, 1:19 PM IST

kopala-tdy-2

ಗಂಗಾವತಿ: ಕಾಲುವೆಗಳಿಗೆ ನೀರು ಹರಿಸುವಂತೆ 21ನೇ ಉಪಕಾಲುವೆ ರೈತರು ತುಂಗಭದ್ರಾ ಯೋಜನಾಧಿಕಾರಿಗೆ ಮನವಿ ಸಲ್ಲಿಸಿದರು.

ಗಂಗಾವತಿ: ತುಂಗಭದ್ರಾ ಡ್ಯಾಂನಲ್ಲಿ ಪ್ರಸ್ತುತ 40 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಒಳಹರಿವು ಉತ್ತಮವಾಗಿದೆ. ಕಾಲುವೆಗಳಿಗೆ ನೀರು ಹರಿಸಲು ಅನುಮತಿ ನೀಡುವಂತೆ ರಾಜ್ಯ ಸರಕಾರಕ್ಕೆ ತುಂಗಭದ್ರಾ ಯೋಜನೆ ಮುಖ್ಯ ಅಭಿಯಂತರ ಪತ್ರ ಬರೆದು ಮನವಿ ಮಾಡಿದ್ದಾರೆ.

ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ಡ್ಯಾಂನ ಒಳಹರಿವು ಉತ್ತಮವಾಗಿದೆ. ಸುಗ್ಗಿ ಬೆಳೆಗೆ ನೀರು ಕಲ್ಪಿಸಲು ಅಚ್ಚುಕಟ್ಟು ಪ್ರದೇಶದ ರೈತರು ಸಂಘ ಸಂಸ್ಥೆಯವರು ನಿರಂತರ ಒತ್ತಡ ಹೇರುತ್ತಿದ್ದಾರೆ. ರೈತರ ಹಿತದೃಷ್ಟಿಯಿಂದ ಕಾಲುವೆಗಳಿಗೆ ನೀರು ಹರಿಸುವುದು ಅವಶ್ಯವಾಗಿದೆ. ಸದ್ಯದ ಡ್ಯಾಂನ ನೀರಿನ ಸ್ಥಿತಿಗತಿ ಕುರಿತು ಪತ್ರದಲ್ಲಿ ವಿವರಣೆ ನೀಡಲಾಗಿದೆ.

ಈ ಭಾರಿ ಮುಂಗಾರು ಮಳೆ ತಡವಾಗಿ ಬಂದಿದ್ದರಿಂದ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದು, ಜುಲೈ ಕೊನೆ ಮತ್ತು ಆಗಸ್ಟ್‌ ಮೊದಲ ವಾರದಲ್ಲಿ ಒಳಹರಿವು ಹೆಚ್ಚಾಗಿದೆ. ಪ್ರಸ್ತುತ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಭತ್ತದ ಒಂದು ಬೆಳೆಗಾಗುವಷ್ಟು ನೀರು ಸಂಗ್ರಹವಿದೆ. ಕಳೆದ ವಾರ ಕುಡಿಯುವ ನೀರಿನ ನೆಪದಲ್ಲಿ ಡ್ಯಾಂನಿಂದ ಪ್ರತಿ ದಿನ 1700 ಕ್ಯೂಸೆಕ್ಸ್‌ ನೀರನ್ನು ಎಡದಂಡೆ ಪ್ರಸ್ತುತ 1200 ಕ್ಯೂಸೆಕ್ಸ್‌ ನೀರನ್ನು ಬಲದಂಡೆ ಕಾಲುವೆ ಮೂಲಕ ಬಳ್ಳಾರಿ ಮತ್ತು ಆಂಧ್ರಪ್ರದೇಶಕ್ಕೆ ಹರಿಸಲಾಗುತ್ತಿದೆ. ಸದ್ಯ ಒಳಹರಿವು 20 ಸಾವಿರ ಕ್ಯೂಸೆಕ್ಸ್‌ ದಾಟುವ ಸಂಭವವಿದ್ದು, ಕಾಲುವೆಗೆ ನೀರು ಹರಿಸಲು ಸರಕಾರದಿಂದ ಪರವಾನಗಿ ಕೋರಲಾಗಿದೆ. ಈಗಾಗಲೇ ಕೊಪ್ಪಳ, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳ ಸಂಸದರು ಅಚ್ಚುಕಟ್ಟು ಪ್ರದೇಶದ ಶಾಸಕರು ಪ್ರತಿ ದಿನ ಡ್ಯಾಂನಲ್ಲಿ ಸಂಗ್ರಹವಾಗುವ ನೀರಿನ ಪ್ರಮಾಣ ಮತ್ತು ಕಾಲುವೆಗಳಿಗೆ ನೀರು ಹರಿಸುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ.

ಡ್ಯಾಂನಲ್ಲಿ ಇನ್ನೂ ಎರಡು ದಿನಗಳಲ್ಲಿ 40 ಟಿಎಂಸಿ ಅಡಿ ನೀರು ಸಂಗ್ರಹವಾಗಲಿದ್ದು, ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯ ಕಾರಣ ಒಳಹರಿವು ಹೆಚ್ಚಾಗಲಿದೆ. 20 ಸಾವಿರ ಕ್ಯೂಸೆಕ್ಸ್‌ಗೂ ಅಧಿಕ ಪ್ರಮಾಣದ ನೀರು 20-25 ದಿನ ಒಳಹರಿವು ಇದ್ದರೆ ಭತ್ತದ ಬೆಳೆಗಾಗುವಷ್ಟು ನೀರು ಡ್ಯಾಂನಲ್ಲಿ ಸಂಗ್ರಹವಾಗಲಿದೆ. ರೈತರು ಆತಂಕ ಪಡುವ ಅಗತ್ಯವಿಲ್ಲ. ಈಗಾಗಲೇ ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳ ಜನಪ್ರತಿನಿಧಿಗಳು ಸಂಘ ಸಂಸ್ಥೆಯವರು ಒತ್ತಡ ಹಾಕಿದ್ದಾರೆ. ಪ್ರಸ್ತುತ ನೀರಾವರಿ ಸಲಹಾ ಸಮಿತಿ ಅಸ್ತಿತ್ವದಲ್ಲಿಲ್ಲದ ಕಾರಣ ಕಾಲುವೆಗಳಿಗೆ ನೀರು ಹರಿಸಲು ಸರಕಾರದ ಪರವಾನಗಿ ಕೋರಿ ಪತ್ರ ಬರೆಯಲಾಗಿದೆ.•ಮಂಜಪ್ಪ, ಮುಖ್ಯ ಅಭಿಯಂತರರು
ತುಂಗಭದ್ರಾ ಯೋಜನೆ
ಸದ್ಯ ಸುಗ್ಗಿ ಬೆಳೆಗೆ ಐಸಿಸಿ ಸಭೆ ನಡೆಸುವುದು ಅವಶ್ಯವಿಲ್ಲ. ಕೂಡಲೇ ಕಾಲುವೆಗಳಿಗೆ ತುಂಗಭದ್ರಾ ಯೋಜನೆ ಅಧಿಕಾರಿಗಳು ನೀರು ಹರಿಸಬೇಕು. ಜತೆಗೆ ಉಪಕಾಲುವೆಗಳ ಮೂಲಕ ನೀರು ಪೋಲಾಗಿ ನದಿಗೆ ಸೇರದಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ನಿಗಾ ವಹಿಸಬೇಕು. •ಟಿ. ವೆಂಕಟಸತ್ಯನಾರಾಯಣ, ಅಧ್ಯಕ್ಷರು 21ನೇ ಉಪಕಾಲುವೆ ನೀರು ಬಳಕೆದಾರರ ಸಂಘ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.