ವಿಶಿಷ್ಟ ಗುರುತಿನ ಚೀಟಿ ನೋಂದಣಿ ಕಾರ್ಯ ತ್ವರಿತಗೊಳ್ಳಲಿ: ವಿನೋತ್‌ ಪ್ರಿಯಾ


Team Udayavani, Aug 6, 2019, 2:40 PM IST

cd-tdy-1

ಚಿತ್ರದುರ್ಗ: ವಿಕಲಚೇತನರಿಗೆ ನೀಡುವ ವಿಶಿಷ್ಟ ಗುರುತಿನ ಚೀಟಿಯನ್ನು ಜಿಲ್ಲಾಧಿಕಾರಿಗಳು ಸಾಂಕೇತಿಕವಾಗಿ ವಿತರಿಸಿದರು.

ಚಿತ್ರದುರ್ಗ: ಜಿಲ್ಲೆಯಲ್ಲಿರುವ ವಿಕಲಚೇತನರಿಗೆ ನೀಡುವ ವಿಶಿಷ್ಟ ಗುರುತಿನ ಚೀಟಿ ನೋಂದಣಿ ಕಾರ್ಯವನ್ನು ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಸೂಚಿಸಿದರು.

ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ ನೀಡುವ ಕುರಿತು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಕಲಚೇತನರಿಗೆ ವೈದ್ಯಕೀಯ ಪ್ರಮಾಣಪತ್ರ ನೀಡಲು ಜಿಲ್ಲಾಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಬೇಕು. ವೈದ್ಯಕೀಯ ಪರಿಶೀಲನೆಗೆ ಸೂಕ್ತ ವ್ಯವಸ್ಥೆಯಾಗಬೇಕು. ಈ ವಿಷಯದಲ್ಲಿ ವೈದ್ಯರು ಇಲ್ಲಸಲ್ಲದ ಸಬೂಬು ಹೇಳುವಂತಿಲ್ಲ ಎಂದು ತಾಕೀತು ಮಾಡಿದರು.

ಜಿಲ್ಲೆಯಲ್ಲಿ 2011ರ ಜನಗಣತಿಯಂತೆ 35,971 ವಿಕಲಚೇತನರಿದ್ದಾರೆ. ಈ ಮೊದಲು ಪುಸ್ತಕ ರೂಪದಲ್ಲಿ ಗುರುತಿನ ಚೀಟಿ ನೀಡಲಾಗುತ್ತಿತ್ತು. ಆದರೆ ಸರ್ಕಾರ ಗಣಕೀಕೃತಗೊಂಡ ವಿಶಿಷ್ಟ ಗುರುತಿನ ಚೀಟಿ ನೀಡಲು ನಿರ್ಧರಿಸಿದ್ದು ಪ್ರಕ್ರಿಯೆ ನಡೆಯುತ್ತಿದೆ ಎಂದರು.

ತಾಲೂಕು ಅಂಗವಿಕಲ ಪುನರ್ವಸತಿ ಕಾರ್ಯಕರ್ತರು ಮಾತನಾಡಿ, ಜಿಲ್ಲೆಯಲ್ಲಿ ಶ್ರವಣ ದೋಷವುಳ್ಳವರಿಗೆ ಪ್ರಮಾಣ ದೃಢೀಕರಣಕ್ಕಾಗಿ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಉಪಕರಣವಿಲ್ಲ, ಪಕ್ಕದ ದಾವಣಗೆರೆಗೆ ಹೋಗಿ ಪರೀಕ್ಷೆ ಮಾಡಿಸಿಕೊಂಡು ಬನ್ನಿ ಎಂದು ವಾಪಸ್‌ ಕಳುಹಿಸುತ್ತಿದ್ದಾರೆ. ಬಹು ಅಂಗವೈಕಲ್ಯ ಹೊಂದಿರುವವರನ್ನು ಸಂಬಂಧಪಟ್ಟ ತಜ್ಞ ವೈದ್ಯರೇ ಪರಿಶೀಲಿಸಿ ಪ್ರಮಾಣಪತ್ರ ನೀಡಬೇಕಿದೆ. ಅದಕ್ಕಾಗಿ ವೈದ್ಯರನ್ನು ಹುಡುಕಿಕೊಂಡು ಅಲೆಯುವ ಪರಿಸ್ಥಿತಿ ಇದೆ ಎಂದು ಸಮಸ್ಯೆಯನ್ನು ವಿವರಿಸಿದರು.

ತಾಲೂಕು ಕಚೇರಿಗಳಲ್ಲಿ ಆನ್‌ಲೈನ್‌ ನೊಂದಣಿಗೆ ಅಲ್ಲಿನ ಸಿಬ್ಬಂದಿ ಸಹಕಾರ ನೀಡುತ್ತಿಲ್ಲ. ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಸಂಬಂಧಿಸಿದಂತೆ ನಮಗೆ ತರಬೇತಿಯ ಅಗತ್ಯವಿದೆ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಬಹು ಅಂಗವೈಕಲ್ಯ ಉಳ್ಳವರಿಗೆ ಒಂದೇ ಕಡೆ ತಜ್ಞ ವೈದ್ಯರಿಂದ ಪರೀಕ್ಷೆ ನಡೆಯಬೇಕು. ಕಾರ್ಯಕರ್ತರಿಗೆ ತರಬೇತಿ ನೀಡಬೇಕು, ಅಂಗವೈಕಲ್ಯ ಪ್ರಮಾಣ ದೃಢೀಕರಣ ವಿಷಯದಲ್ಲಿ ವೈದ್ಯರು ಹಣ ಪಡೆದು ಪ್ರಮಾಣ ನಿರ್ಧರಿಸುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಇಂತಹ ಯಾವುದೇ ಅಕ್ರಮದಲ್ಲಿ ಭಾಗವಹಿಸದೆ ಪ್ರಾಮಾಣಿಕವಾಗಿ ಅಂಗವೈಕಲ್ಯದ ಪ್ರಮಾಣವನ್ನು ನಮೂದಿಸಬೇಕು ಎಂದು ಎಚ್ಚರಿಸಿದರು.

ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ವೈಶಾಲಿ ಮಾತನಾಡಿ, 2011ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 35,971 ವಿಕಲಚೇತನರಿದ್ದಾರೆ. ಈ ಪೈಕಿ ದೃಷ್ಟಿದೋಷ-6196, ಶ್ರವಣ-6096, ಮಾತಿನ ದೋಷ-2880, ಮಾನಸಿಕ ಅಸ್ವಸ್ಥ-415, ಬುದ್ಧಿಮಾಂದ್ಯ-2461, ದೈಹಿಕ ವೈಕಲ್ಯ-8373, ಬಹುವಿಧ ಅಂಗವೈಕಲ್ಯ-2961, ಇತರೆ-6589 ಜನ ವೈಕಲ್ಯತೆ ಹೊಂದಿದ್ದಾರೆ ಎಂದು ಮಾಹಿತಿ ನೀಡಿದರು.

ಈಗಾಗಲೇ ಹೊಂದಿರುವ ಅಂಗವೈಕಲ್ಯ ಪ್ರಮಾಣಪತ್ರ ತಾತ್ಕಾಲಿಕವಾಗಿದೆ. ಮರು ಮೌಲ್ಯಮಾಪನ ನಡೆಸಿ ಗಣಕೀಕೃತ ವಿಶಿಷ್ಟ ಗುರುತಿನ ಚೀಟಿ ನೀಡಲಾಗುತ್ತಿದೆ. ಚಿತ್ರದುರ್ಗ, ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕುಗಳಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಪ್ರಗತಿಯಲ್ಲಿದೆ. ಆದರೆ ಹೊಳಲ್ಕೆರೆ, ಹೊಸದುರ್ಗ ಹಾಗೂ ಹಿರಿಯೂರು ತಾಲೂಕಿನಲ್ಲಿ ನಿಧಾನಗತಿಯಲ್ಲಿದೆ ಎಂದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಜಯಪ್ರಕಾಶ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾ ನಾಯಕ್‌, ಡಿವೈಪಿಸಿ ಸಿ.ಎಂ. ತಿಪ್ಪೇಸ್ವಾಮಿ ಮತ್ತಿತರರು ಭಾಗವಹಿಸಿದ್ದರು. ವಿಕಲಚೇತನರಿಗೆ ನೀಡುವ ವಿಶಿಷ್ಟ ಗುರುತಿನ ಚೀಟಿಯನ್ನು ಜಿಲ್ಲಾಧಿಕಾರಿಗಳು ಸಾಂಕೇತಿಕವಾಗಿ ವಿತರಿಸಿದರು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.