ಆತಂಕದಲ್ಲಿ ಚಾರ್ಮಾಡಿ 3,4,7ನೇ ತಿರುವು: ಅಲ್ಲಲ್ಲಿ ಕುಸಿಯುತ್ತಿದೆ ಗುಡ್ಡ
Team Udayavani, Aug 6, 2019, 3:29 PM IST
ಬೆಳ್ತಂಗಡಿ: ಬಿರುಸೇರಿದ ಮಳೆಯಿಂದ ಚಾರ್ಮಾಡಿ ಹಾದಿ ಗುಡ್ಡ ಅಲ್ಲಲ್ಲಿ ಜರಿಯುತ್ತಿದ್ದು ಜೆ.ಸಿ.ಬಿ. ಯಂತ್ರದಿಂದ ತೆರವು ಕಾರ್ಯ ಭರದಿಂದ ಸಾಗುತ್ತಿದೆ.
ಕಳೆದ ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಾಟಿ ರಸ್ತೆ ಪ್ರಯಾಣಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಬೆಳ್ತಂಗಡಿ ಪರಿಸರದಲ್ಲಿ ಸೋಮವಾರದಿಂದ ಇಂದಿನವರೆಗೆ 135.5 ಮಿ.ಮೀ ಮಳೆಯಾಗಿದೆ.
ಮತ್ತೆ ಮತ್ತೆ ಕುಸಿಯುತ್ತಿದೆ ಚಾರ್ಮಾಡಿ: ಚಾರ್ಮಾಡಿ ಘಾಟ್ ರಸ್ತೆಯ 3, 4, 7 ನೇ ತಿರುವಿನಲ್ಲಿ ಗುಡ್ಡ ಕುಸಿಯುತ್ತಿದ್ದು, ಮರಗಳು ಕೂಡಾ ಧರಾಶಾಯಿಯಾಗಿವೆ. ಮೂರನೇ ತಿರುವಿನಲ್ಲಿ ದೊಡ್ಡ ಬಂಡೆ ಕುಸಿಯುವ ಹಂತದಲ್ಲಿದ್ದು, ಸವಾರರು ಭೀತಿಗೊಳಗಾಗಿದ್ದಾರೆ. ನೀರು ಹರಿಯಲು ಜಿಸಿಬಿಯಿಂದ ಮಣ್ಣು ತೆರವು ಕಾರ್ಯ ಭರದಿಂದ ಸಾಗಿದೆ.
ಅರಣ್ಯ ಇಲಾಖೆ ಸಿಬಂದಿ, 5 ಮಂದಿ ಪ್ರಕೃತಿ ವಿಕೋಪ ರಕ್ಷಣಾ ತಂಡ, ಬೆಳ್ತಂಗಡಿ, ಧರ್ಮಸ್ಥಳ ಠಾಣೆ ಪೊಲೀಸ್ ಸಿಬಂದಿ, ಆರೋಗ್ಯ, ಮೆಸ್ಕಾಂ ಇಲಾಖೆ ಸಿಬಂದಿ ಸ್ಥಳದಲ್ಲಿ ಮೆಕ್ಕಾಂ ಹೂಡಿದ್ದಾರೆ.
ನೇತ್ರಾವತಿ ನದಿಯು ಮೈದುಂಬಿ ಹರಿಯುತ್ತಿದ್ದು, ಧರ್ಮಸ್ಥಳ ಸ್ನಾನಘಟ್ಟದಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!