ಹಳಿಗೆ ಕುಸಿದ ಮಣ್ಣು: ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ
Team Udayavani, Aug 6, 2019, 4:12 PM IST
ಸುಬ್ರಹ್ಮಣ್ಯ: ಶಿರಾಡಿ ಘಾಟ್ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳೂರು-ಬೆಂಗಳೂರು ರೈಲು ಹಳಿಗೆ ಸಿರಿಬಾಗಿಲು ಹಾಗೂ ಇತರ 4 ಕಡೆ ಹಳಿಗೆ ಮಣ್ಣು ಕುಸಿದ ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿದೆ.
ಮಂಗಳವಾರ ಬೆಳಗ್ಗೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯಲ್ಲಿ ಮಣ್ಣು ಕುಸಿತದ ಪರಿಣಾಮ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.
ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯ 86 ನೇ ಕಿಮೀ ಹಾಗೂ 83 ಕಿಮೀ ಹಾಗೂ ಇತರ ಎರಡು ಕಡೆ ಸೇರಿದಂತೆ 4 ಕಡೆಗಳಲ್ಲಿ ಕುಸಿತವಾಗಿದೆ.
ಈವರೆಗೆ 86 ನೇ ಕಿಮೀ ಪ್ರದೇಶದ ಮಣ್ಣು ತೆರವು ಕಾರ್ಯ ಪೂರ್ತಿಗೊಂಡಿಲ್ಲ. ತುರ್ತು ಕಾರ್ಯದ ಹಿನ್ನೆಲೆಯಲ್ಲಿ 50 ಕ್ಕೂ ಅಧಿಕ ಕಾರ್ಮಿಕರು ಹಾಗೂ ಯಂತ್ರದ ಮೂಲಕ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಮಳೆ ಸುರಿಯುತ್ತಿರುವ ಕಾರಣ ಕಾಮಗಾರಿ ಪ್ರಗತಿಗೆ ಅಡ್ಡಿಯಾಗಿದೆ.
ಮಧ್ಯಾಹ್ನದ ಎರಡೂ ರೈಲುಗಳ ಓಡಾಟ ಸ್ಥಗಿತವಾಗಿತ್ತು. ರಾತ್ರಿ ರೈಲು ಓಡಾಟವು ಸ್ಥಗಿತಗೊಳ್ಳುವ ಸಾದ್ಯತೆಗಳು ದಟ್ಟವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ