ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಕಟ್ಟು ನಿಟ್ಟಿನ ಕ್ರಮ


Team Udayavani, Aug 6, 2019, 4:17 PM IST

kolara-tdy-1

ಕೋಲಾರದ ಮಾರುಕಟ್ಟೆಗೆ ಬರಲು ಬಣ್ಣ ಬಳಿದುಕೊಂಡು ಸಾಲಾಗಿ ಕಾಯುತ್ತಿರುವ ಗಣೇಶ ವಿಗ್ರಹಗಳು.

ಕೋಲಾರ: ಜಿಲ್ಲೆಯಲ್ಲಿ ಪರಿಸರ ಸ್ನೇಹಿಯಾಗಿ ಗಣೇಶೋತ್ಸವ ಆಚರಿಸಲು ಸಿದ್ಧತೆಗಳು ನಡೆಯುತ್ತಿರು ವಾಗಲೇ, ಮೂರ್ತಿಗಳ ಮಾರಾಟಕ್ಕೆ ಅನುಮತಿ ಸಿಗದ ಕಾರಣದಿಂದ ಹಬ್ಬಕ್ಕೆ ಕೇವಲ 27 ದಿನಗಳು ಬಾಕಿ ಇದ್ದರೂ ಜಿಲ್ಲಾ ಕೇಂದ್ರದ ಮಾರುಕಟ್ಟೆಗೆ ಗಣೇಶ ಬಂದಿಲ್ಲ!

ಸಾಮಾನ್ಯವಾಗಿ 15 ರಿಂದ 20 ಕುಟುಂಬಗಳು ಜಿಲ್ಲಾ ಕೇಂದ್ರದಲ್ಲಿ ಗಣೇಶ ಮೂರ್ತಿಗಳನ್ನು ನಿರ್ಮಿಸಿ ಮಾರಾಟ ಮಾಡುವ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹಬ್ಬಕ್ಕೆ ಒಂದು ತಿಂಗಳು ಇರುವಂತೆಯೇ ಗಣೇಶ ಮೂರ್ತಿಗಳನ್ನು ರಸ್ತೆ ಬದಿ ಯಲ್ಲಿ ತಾತ್ಕಾಲಿಕ ಶೆಡ್‌ ಹಾಕಿ ಮಾರಾಟಕ್ಕೆ ಸಜ್ಜುಗೊಳಿ ಸುವುದು ವಾಡಿಕೆ. ಆದರೆ, ಈ ಬಾರಿ ಫ‌ುಟ್ಪಾತ್‌ ಅಂಗಡಿಗಳ ತೆರವು ಕಾರ್ಯಾಚರಣೆ ಹಾಗೂ ರಸ್ತೆ ಅಗಲೀಕರಣಕ್ಕೆ ಸಿದ್ಧವಾಗುತ್ತಿರುವ ನಗರಸಭೆ ಗಣೇಶ ಮೂರ್ತಿಗಳ ಮಾರಾಟಕ್ಕೆ ಅನುಮತಿ ನಿರಾಕರಿಸಿರು ವುದರಿಂದ ಇದುವರೆಗೂ ಗಣೇಶ ಮೂರ್ತಿಗಳು ಮಾರುಕಟ್ಟೆಗೆ ಬಂದಿಲ್ಲ.

ವರಮಹಾಲಕ್ಷ್ಮೀ ಹಬ್ಬದ ನಂತರ ಗಣೇಶಾಗಮನ: ಗಣೇಶ ಹಬ್ಬಕ್ಕೆ ಒಂದು ತಿಂಗಳು ಮುಂಚಿತವಾಗಿಯೇ ಗಣೇಶ ವಿಗ್ರಹಗಳನ್ನು ಮಾರುಕಟ್ಟೆಗೆ ತರಲು ಅನು ಮತಿಯ ವಿಘ್ನ ಎದುರಾಗಿದ್ದು, ಇದನ್ನು ನಿವಾರಿಸಿ ಕೊಂಡು ವರಮಹಾಲಕ್ಷ್ಮೀ ಹಬ್ಬದ ನಂತರ ಗಣೇಶ ವಿಗ್ರಹಗಳನ್ನು ಮಾರುಕಟ್ಟೆಗೆ ತರಲು ವಿಗ್ರಹ ತಯಾರಕರು ನಿರ್ಧರಿಸಿದ್ದಾರೆ.

ನಗರಸಭೆಯಿಂದ ನಿರಾಕರಿಸಲ್ಪಟ್ಟ ಅನುಮತಿ ಯನ್ನು ನಗರಸಭೆ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ರನ್ನು ಭೇಟಿ ಮಾಡಿ ಪಡೆದುಕೊಳ್ಳಲು ಗಣೇಶ ವಿಗ್ರಹ ತಯಾರಕರು ತೀರ್ಮಾನಿಸಿದ್ದಾರೆ. ಈ ಸಂಬಂಧ ಮಂಗಳವಾರ ಡಿ.ಸಿ.ಯನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.

ಜನನಿಬಿಡ ರಸ್ತೆಗಳನ್ನು ಹೊರತುಪಡಿಸಿ, ವಿರಳ ವಾಗಿ ವಾಹನ ಸಂಚಾರವಿರುವ ರಸ್ತೆಗಳನ್ನು ಗುರುತಿಸಿ ಗಣೇಶ ವಿಗ್ರಹಗಳ ಮಾರಾಟಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲು ಡಿ.ಸಿ.ಗೆ ಮನವಿ ಸಲ್ಲಿಸುವುದಾಗಿ ಕುಂಬಾರರು ತಿಳಿಸುತ್ತಿದ್ದಾರೆ.

ಪರಿಸರ ಸ್ನೇಹಿ ಗಣೇಶ ವಿಗ್ರಹ: ಕಳೆದ ಮೂರು ನಾಲ್ಕು ವರ್ಷಗಳಿಂದಲೂ ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆಯು ಪರಿಸರಕ್ಕೆ ಮಾರಕವಾಗುವ ಪಿಒಪಿ ಗಣೇಶ ವಿಗ್ರಹಗಳನ್ನು ಮಾಡುವುದು ಮತ್ತು ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇದರಿಂದ ಬಹುತೇಕ ವ್ಯಾಪಾರಿಗಳು ಮತ್ತು ವಿಗ್ರಹ ತಯಾರಕರು ಪಿಒಪಿ ಗಣೇಶ ವಿಗ್ರಹಗಳ ಮಾಡುವುದನ್ನು ಮತ್ತು ಮಾರಾಟವನ್ನು ಸ್ಥಗಿತಗೊಳಿಸಿದ್ದು, ಸಂಪೂರ್ಣವಾಗಿ ಜೇಡಿಮಣ್ಣು, ಪೇಪರ್‌, ಹುಲ್ಲು ಇತ್ಯಾದಿ ಪರಿಸರ ಸ್ನೇಹಿ ವಸ್ತುಗಳಿಂದ ಮಾತ್ರವೇ ಗಣೇಶ ವಿಗ್ರಹಗಳನ್ನು ತಯಾರಿಸುತ್ತಿವೆ.

ಹಿಂದಿನ ವರ್ಷಗಳಲ್ಲಿ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಇಟ್ಟ ಪಿಒಪಿ ವಿಗ್ರಹಗಳನ್ನು ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಒಡೆದು ಹಾಕುವ ಕ್ರಮ ಕೈಗೊಂಡಿದ್ದರಿಂದ ಗಣೇಶ ವಿಗ್ರಹ ತಯಾರಕರು ಪಿಒಪಿ ಗಣೇಶ ವಿಗ್ರಹ ಮಾಡುವುದಕ್ಕೆ ಗುಡ್‌ಬೈ ಹೇಳಿಬಿಟ್ಟಿದ್ದಾರೆ.

ಹೊರಗಿನಿಂದ ಪಿಒಪಿ ವಿಗ್ರಹ: ಜಿಲ್ಲಾಡಳಿತ ಪಿಒಪಿ ಗಣೇಶ ವಿಗ್ರಹಗಳ ಬಗ್ಗೆ ಇಷ್ಟೆಲ್ಲಾ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದರ ಪ್ರಭಾವ ಕೇವಲ ಸ್ಥಳೀಯ ಗಣೇಶ ವಿಗ್ರಹ ತಯಾರಕರ ಮೇಲೆ ಮಾತ್ರವೇ ಬೀಳುತ್ತಿದೆ. ಬೃಹತ್‌ ಗಾತ್ರದ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುವ ವಿನಾಯಕ ಸಂಘಗಳು ಬೆಂಗಳೂರು, ಚೆನ್ನೈ, ಮುಂಬೈ, ಕೊಲ್ಕೊತ್ತಾಗಳಿಂದ ತರಿಸುತ್ತಿರುವ ಬೃಹತ್‌ ಗಣೇಶ ವಿಗ್ರಹಗಳು ಪಿಒಪಿಯಿಂದ ತಯಾರಿಸಲ್ಪಟ್ಟ ಗಣೇಶ ವಿಗ್ರಹಗಳಾಗಿರುವುದನ್ನು ಸಾರ್ವಜನಿಕರು ಗಮನಿಸುತ್ತಲೇ ಇದ್ದಾರೆ. ಸಣ್ಣ ವಿಗ್ರಹಗಳಿಗೆ ಇರುವ ಕಟ್ಟುಪಾಡು ದೊಡ್ಡ ವಿಗ್ರಹಗಳಿಗೇಕಿಲ್ಲವೆಂದು ಪ್ರಶ್ನಿಸುತ್ತಿದ್ದಾರೆ.

ಅನುಮತಿಯಲ್ಲೇ ಕಟ್ಟು ಪಾಡು: ವಿನಾಯಕ ಸಂಘಗಳು ಬೃಹತ್‌ ಗಾತ್ರದ ಪಿಒಪಿ ಗಣೇಶಮೂರ್ತಿಗಳನ್ನು ಹೊರ ರಾಜ್ಯಗಳಿಂದ ತರಿಸಿ ಪ್ರತಿಷ್ಠಾಪನೆ ಮಾಡುತ್ತಿರುವುದಕ್ಕೆ ಈ ಬಾರಿ ಅನುಮತಿಯಲ್ಲೇ ಷರತ್ತಿನ ಕಡಿವಾಣ ಹಾಕಲು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ನಗರಸಭೆ, ಪೊಲೀಸ್‌ ಇಲಾಖೆಗಳು ಕಾರ್ಯೋನ್ಮುಖವಾಗುತ್ತಿವೆ. ಈ ಕುರಿತು ನಾಲ್ಕೈದು ದಿನಗಳಲ್ಲಿ ಸ್ಪಷ್ಟವಾದ ಗಣೇಶ ಪೆಂಡಾಲ್ನಲ್ಲಿ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಪ್ರಕಟಿಸಲು ತಯಾರಿ ನಡೆಯುತ್ತಿದೆ.

ಪಿಒಪಿ ಗಣೇಶ ತರಿಸಿ ಪ್ರತಿಷ್ಠಾಪಿಸಲು ಮಂದಾದರೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲವೆಂಬ ಷರತ್ತು ಹಾಕಿ ಇದನ್ನು ಕಡ್ಡಾಯವಾಗಿ ಪಾಲಿಸಲು ತೀರ್ಮಾನಿಸಲಾಗಿದೆ. ಇದರಿಂದ ಈ ಬಾರಿ ಪರ ರಾಜ್ಯಗಳಿಂದ ಪಿಒಪಿ ಗಣೇಶ ಮೂರ್ತಿಗಳನ್ನು ತಯಾರಿಸುವವರು ಮಣ್ಣಿನ ವಿಗ್ರಹಗಳಿಗೆ ಮೊರೆ ಹೋಗಬೇಕಾಗುವುದು ಅನಿವಾರ್ಯವಾಗುತ್ತದೆ.

ಬರಗಾಲದ ಭೀತಿ: ಗಣೇಶ ಹಬ್ಬದ ಮೇಲೆ ಬರಗಾಲದ ಛಾಯೆ ಇದೆ. ಕಳೆದ ವರ್ಷವೂ ಕೋಲಾರ ಜಿಲ್ಲೆಯನ್ನು ಬರಗಾಲ ಆವರಿಸಿದ್ದು, ಗಣೇಶ ವಿಗ್ರಹಗಳ ಮಾರಾಟ ಮೇಲೆ ಇದರ ಕರಿನೆರಳು ಬಿದ್ದಿತ್ತು. ಕೆರೆ ಕುಂಟೆಗಳಲ್ಲಿ ನೀರಿಲ್ಲದ ಕಾರಣದಿಂದ ಹಲಪು ಕುಟುಂಬಗಳು ವಿಸರ್ಜನೆಗೆ ತೊಂದರೆಯಾಗಬಹುದು ಎಂಬ ಕಾರಣದಿಂದ ಗಣೇಶ ವಿಗ್ರಹಗಳು ಖರೀದಿಸುವುದನ್ನು ಬಿಟ್ಟಿದ್ದರು. ಇದರಿಂದ ಬಹುತೇಕ ಮಾರಾಟಗಾರರ ಬಳಿ ಗಣೇಶ ವಿಗ್ರಹಗಳು ಉಳಿಯುವಂತಾಗಿದ್ದವು.

ಈ ಬಾರಿಯೂ ಇಂತದ್ದೇ ಸಮಸ್ಯೆ ಎದುರಾಗಿದ್ದು, ಕೋಲಾರ ಜಿಲ್ಲೆಯ ಬಹುತೇಕ ಕೆರೆ ಕುಂಟೆ ಕಲ್ಯಾಣಿಗಳು ಮಳೆ ಕೊರತೆಯಿಂದಾಗಿ ಬತ್ತಿವೆ. ಇದು ಗಣೇಶ ವಿಗ್ರಹಗಳ ಮಾರಾಟಗಾರರ ಆತಂಕಕ್ಕೂ ಕಾರಣವಾಗಿದೆ. ಗಣೇಶ ಮದುವೆಗೆ ನೂರೆಂಟು ವಿಘ್ನ ಎನ್ನುವಂತೆ ಕೋಲಾರ ಜಿಲ್ಲೆಯಲ್ಲಿ ಗಣೇಶ ಪೂಜೆಗೂ ಹಲವಾರು ವಿಘ್ನಗಳು ಎದುರಾಗುವಂತಾಗಿದೆ.

ಟಾಪ್ ನ್ಯೂಸ್

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.