ಮೇಘ ಸ್ಫೋಟಕ್ಕೆ ಮಳೆನಾಡಾದ ಮೈಸೂರು


Team Udayavani, Aug 7, 2019, 3:00 AM IST

megha-spota

ಮೈಸೂರು: ಮೇಘ ಸ್ಫೋಟದಿಂದಾಗಿ ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುತ್ತಿದ್ದು, ಮೈಸೂರು ಅಕ್ಷರಶಃ ಮಳೆನಾಡಾಗಿ ಮಾರ್ಪಟ್ಟಿದೆ. ಸೋಮವಾರ ತಡರಾತ್ರಿ ಆರಂಭವಾದ ಸಾಧಾರಣ ಮಳೆ ಇಡೀ ರಾತ್ರಿ ಬಿಟ್ಟು ಬಿಟ್ಟು ಸುರಿಯಿತು. ಮಂಗಳವಾರ ಬೆಳಗ್ಗೆ ಕೆಲಕಾಲ ಬಿಡುವು ನೀಡಿದ್ದ ಮಳೆ ಮಧ್ಯಾಹ್ನ 12ಗಂಟೆ ನಂತರ ಆಗಾಗ್ಗೆ ಧಾರಾಕಾರವಾಗಿ ಸುರಿಯಲಾರಂಭಿಸಿದ್ದರಿಂದ ನಗರದ ಪ್ರಮುಖ ರಸ್ತೆಗಳೆಲ್ಲಾ ಜಲಾವೃತವಾಗಿದ್ದವು. ಮಳೆಯಿಂದಾಗಿ ದಾರಿಹೋಕರು, ಬೀದಿ ಬದಿ ವರ್ತಕರು ಪರದಾಡುವಂತಾಯಿತು.

ಕೊಡೆ ಆಶ್ರಯ: ಇನ್ನು ಸಂಜೆ ವೇಳೆಗೆ ವರಮಹಾಲಕ್ಷ್ಮೀ ಹಬ್ಬಕ್ಕೆ ಪೂಜಾ ಸಾಮಗ್ರಿ, ಹೊಸಬಟ್ಟೆ ಖರೀದಿಸಲು ಮಾರುಕಟ್ಟೆಗೆ ಬಂದಿದ್ದ ಜನ ಮಳೆಯಿಂದಾಗಿ ಸಿಕ್ಕ ಸಿಕ್ಕಕಡೆಗಳಲ್ಲಿ ನಿಂತು ರಕ್ಷಣೆ ಪಡೆದರೆ, ಇನ್ನೂ ಕೆಲವರು ಕೊಡೆ ಹಿಡಿದು ವ್ಯಾಪಾರ ಹೊರಟಿದ್ದು ಕಂಡುಬಂತು.

ಇಡೀ ದಿನ ಮಳೆ ಸುರಿದ ಪರಿಣಾಮ ಜನ ಕೊಡೆ ಹಿಡಿದು, ಜರ್ಕಿನ್‌ ತೊಟ್ಟು ಓಡಾಡುತ್ತಿದ್ದರಲ್ಲದೆ, ಅಲ್ಲಲ್ಲಿ ಟೀ ಕ್ಯಾಂಟೀನ್‌ ಗಳ ಬಳಿ ನಿಂತು ಕಾಫಿ-ಟೀ ಕುಡಿದು ಮೈ ಬೆಚ್ಚಗೆ ಮಾಡಿಕೊಳ್ಳುತ್ತಿದ್ದರು. ಸಂಜೆ ನಂತರ ಜಿಟಿ ಜಿಟಿ ಮಳೆ ಮತ್ತು ಚಳಿಯಿಂದ ಪಾರಾಗಲು ಪಾನೀಪುರಿ, ಗೋಬಿ ಸೆಂಟರ್‌ಗಳಿಗೆ ಜನ ಮುಗಿಬಿದ್ದಿದ್ದರು.

ಜಿಲ್ಲಾದ್ಯಂತ ಮಳೆ: ಮೈಸೂರು ನಗರ ಸೇರಿದಂತೆ ಕೊಡಗು ಜಿಲ್ಲೆಗೆ ಹೊಂದಿಕೊಂಡಂತಿರುವ ಪಿರಿಯಾಪಟ್ಟಣ, ಹುಣಸೂರು, ಎಚ್‌.ಡಿ.ಕೋಟೆ ತಾಲೂಕುಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನಂಜನಗೂಡು, ತಿ.ನರಸೀಪುರ, ಕೆ.ಆರ್‌.ನಗರ ಹಾಗೂ ಮೈಸೂರು ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದೆ.

ಮೈಸೂರು ಜಿಲ್ಲೆಯಲ್ಲಿ ಮುಂದಿನ ಐದು ದಿನ ಮೋಡ ಕವಿದ ವಾತಾವರಣವಿದ್ದು ಸಾಧಾರಣ ಮಳೆ ಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗರಿಷ್ಠ ಉಷ್ಣಾಂಶ 27 ರಿಂದ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುವ ಸಾಧ್ಯತೆ ಇದೆ. ಬೆಳಗಿನ ಗಾಳಿಯ ತೇವಾಂಶ ಶೇ.87 ರಿಂದ 91ರವರೆಗೆ ಮತ್ತು

ಮಧ್ಯಾಹ್ನದ ತೇವಾಂಶ ಶೇ.74 ರಿಂದ 81 ಮತ್ತು ಗಾಳಿಯು ಗಂಟೆಗೆ ಸರಾಸರಿ 2 ರಿಂದ 3 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಆ. 7 ಮತ್ತು 8ರಂದು 20 ಮಿ.ಮೀ, 9, 10 ರಂದು 18 ಮಿ.ಮೀ ಹಾಗೂ 11ರಂದು 10 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ನಾಗನಹಳ್ಳಿ ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಪಿ.ಪ್ರಕಾಶ್‌ ತಿಳಿಸಿದ್ದಾರೆ.

ತ.ನಾಡಿಗೆ ನೀರು ಹರಿಸಿದ್ದಕ್ಕೆ ಬರಿದಾದ ಕಬಿನಿ ಜಲಾಶಯ: ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿತ್ತಾದರೂ ಜೂನ್‌ ತಿಂಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆಯಾಗದ ಕಾರಣ ಮುಂಗಾರಿನ ಆರಂಭದಲ್ಲೇ ರಾಜ್ಯದಲ್ಲಿ ಮೊಟ್ಟ ಮೊದಲು ಭರ್ತಿಯಾಗುವ ಹೆಗ್ಗಳಿಕೆ ಹೊಂದಿರುವ ಎಚ್‌.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಒಳ ಹರಿವು ಕಡಿಮೆಯಾಗಿದೆ.

ಜಲಾಶಯದಿಂದ ತಮಿಳುನಾಡಿಗೆ ಹರಿಸುತ್ತಿರುವುದರಿಂದ ಕಬಿನಿಯ ಒಡಲು ಬರಿದಾಗುತ್ತಿದ್ದು, ಮುಂದಿನ ಮಳೆಗಾಲದವರೆಗೆ ಬೆಂಗಳೂರು, ಮೈಸೂರು ನಗರಗಳ ಕುಡಿಯುವ ನೀರಿಗೆ ನೀರನ್ನು ಕಾಯ್ದುಕೊಳ್ಳುವ ಸಲುವಾಗಿ ಈ ವರ್ಷ ಕಬಿನಿ ಜಲಾನಯನ ಪ್ರದೇಶದಲ್ಲಿ ಭತ್ತ ಬೆಳೆಯದಂತೆ ನೀರಾವರಿ ಇಲಾಖೆ ಈಗಾಗಲೇ ಪ್ರಕಟಣೆ ಹೊರಡಿಸಿದೆ.

ಟಾಪ್ ನ್ಯೂಸ್

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.