ಪುತ್ತೂರು: ಆಫ್ರಿಕನ್‌ ಕೊಕ್ಕರೆಗಳ ನಿಗೂಢ ಸಾವು; ಅನೇಕ ಸಂಶಯ

ಹಕ್ಕಿಗಳಿಗೆ ವಿಷವಿಕ್ಕಿರುವ ಶಂಕೆ

Team Udayavani, Aug 7, 2019, 5:27 AM IST

s-36

ಪುತ್ತೂರು: ನಗರದ ಕೇಂದ್ರ ಸ್ಥಾನದಲ್ಲಿರುವ ಐತಿಹಾಸಿಕ ಗಾಂಧಿ ಕಟ್ಟೆಯ ಬಳಿ ಇರುವ ಅಶ್ವತ್ಥ ಮರದಲ್ಲಿರುವ ಕೊಕ್ಕರೆಗಳು ಕೆಲವು ದಿನಗಳಿಂದ ಸತ್ತು ಬೀಳುತ್ತಿರುವುದು ಬೆಳಕಿಗೆ ಬಂದಿದೆ.

ಹಕ್ಕಿಗಳಿಂದಾಗಿ ನಗರದ ವಾಣಿಜ್ಯ ವ್ಯವಹಾರಕ್ಕೆ ಕಿರಿಕಿರಿಯಾಗುತ್ತದೆ ಎನ್ನುವ ಕಾರಣಕ್ಕೆ ಯಾರೋ ಕಿಡಿಗೇಡಿಗಳು ಹಕ್ಕಿಗಳ ಗೂಡಿನತ್ತ ವಿಷ ಸಿಂಪಡಣೆ ಮಾಡಿದ್ದಾರೆಯೇ ಅಥವಾ ರೋಗದಿಂದಾಗಿ ಹಕ್ಕಿಗಳು ಸಾಯುತ್ತಿವೆಯೇ ಎನ್ನುವ ಅನುಮಾನ ಸಾರ್ವಜನಿಕ ವಲಯದಲ್ಲಿ ಇದ್ದು, ಈ ಕುರಿತು ತನಿಖೆ ನಡೆಸಬೇಕೆಂದು ನಗರದ ಪಕ್ಷಿ ಪ್ರಿಯರು ಆಗ್ರಹಿಸಿದ್ದಾರೆ.

ಗೆಲ್ಲು ತೆರವಾದರೂ ವಾಸ್ತವ್ಯ
ಗಾಂಧಿಕಟ್ಟೆ, ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಪೂಜಾ ಕಟ್ಟೆ ಮತ್ತು ಅಶ್ವತ್ಥ ಮರದ ಕಟ್ಟೆ ಇಲ್ಲಿ ಒಂದೇ ಕಡೆ ಇದ್ದು, ಎಲ್ಲದಕ್ಕೂ ಅಶ್ವತ್ಥ ಮರವೇ ಆಸರೆಯಾಗಿದೆ. ಈ ಬಾರಿ ಬೇಸಗೆಯಲ್ಲಿ ಅಶ್ವತ್ಥ ಮರದ ಗೆಲ್ಲುಗಳನ್ನು ಕಡಿದು ಅಪಾಯದ ಪ್ರಮಾಣ ತಗ್ಗಿಸಲಾಗಿತ್ತು. ಪ್ರಸ್ತುತ ಗಾಂಧಿಕಟ್ಟೆ ಪುನರ್‌ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಗಾಂಧಿ ಪ್ರತಿಮೆಯನ್ನು ಸ್ಥಳಾಂತರಿಸಲಾಗಿದೆ.

ಗೆಲ್ಲುಗಳನ್ನು ಕಡಿದ ಬಳಿಕವೂ ಅಶ್ವತ್ಥ ಮರದ ಮೇಲೆ ಸುಮಾರು 30ಕ್ಕೂ ಅಧಿಕ ಕೊಕ್ಕರೆಗಳು ಗೂಡು ಕಟ್ಟಿಕೊಂಡು ವಾಸಿಸುತ್ತಿವೆ. ನೀರು ಕಾಗೆ ಮತ್ತು ಕೊಕ್ಕರೆಗಳು ಅಧಿಕ ಪ್ರಮಾಣದಲ್ಲಿವೆ.

ದಶಕಗಳಿಂದ ಬರುತ್ತಿವೆ
ರೀಪ್‌ ಎಗ್ರೆಟ್ ಮತ್ತು ಎಗ್ರೆಟಾ ಗುಲಾರಿಸ್‌ ಎನ್ನುವ ಹೆಸರಿನ ಆಫ್ರಿಕಾ ಮೂಲದ ಕೊಕ್ಕರೆಗಳು ಹಲವು ದಶಕಗಳಿಂದ ಪ್ರತೀ ವರ್ಷ ಮಳೆಗಾಲದಲ್ಲಿ ಪುತ್ತೂರಿಗೆ ವಲಸೆ ಬಂದು ಇಲ್ಲಿನ ಬೃಹತ್‌ ಮರಗಳಲ್ಲಿ ಆಸರೆ ಪಡೆಯುತ್ತಿವೆ. ಇಲ್ಲೇ ಮೊಟ್ಟೆ ಇಟ್ಟು ಮರಿ ಮಾಡಿ ಚಳಿಗಾಲದ ಹೊತ್ತಿಗೆ ಮರಳಿ ಹೋಗುತ್ತವೆ.

ಪುತ್ತೂರು, ಸುಳ್ಯ ಮತ್ತು ಕೊಡಗು ಗಡಿಭಾಗದಲ್ಲಿ ಹೇರಳವಾಗಿ ಕಂಡು ಬರುವ ಈ ಜಾತಿಯ ಕೊಕ್ಕರೆಗಳು ಈಗ ಇದ್ದಕ್ಕಿದ್ದಂತೆ ಸತ್ತು ಬೀಳುವುದಕ್ಕೆ ಕಾರಣ ಏನೆನ್ನುವುದು ನಿಗೂಢವಾಗಿದೆ. ಕೆಲವು ದಿನಗಳಿಂದ ಈ ವಿದ್ಯಮಾನ ನಡೆಯುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ.ಪಕ್ಷಿ ಶಾಸ್ತ್ರಜ್ಞರ ಮೂಲಕ ತನಿಖೆ ನಡೆದರೆ ನಿಜಾಂಶ ಹೊರಬರಬಹುದು.

ಸಂತಾನೋತ್ಪತ್ತಿಗಾಗಿ ಪಶ್ಚಿಮ ಆಫ್ರಿಕಾ ಮತ್ತು ಕೆಂಪು ಸಮುದ್ರರಿಂದ ಕರಾವಳಿಗೆ ವಲಸೆ ಬಂದ ರೀಪ್‌ ಎಗ್ರೇಟ್ ಹಾಗೂ ಎಗ್ರೆಟಾ ಗುಲಾರಿಸ್‌ ಕೊಕ್ಕರೆಗಳು ಪುತ್ತೂರಿನ ಹೃದಯ ಭಾಗದ ಅಶ್ವತ್ಥ ಮರದ ಬಳಿ ಸಾವನ್ನಪ್ಪುತ್ತಿದ್ದು, ಮಂಗಳವಾರ ಇನ್ನೂ 3 ಕೊಕ್ಕರೆಗಳು ಸಾವಿಗಿಡಾಗಿವೆ.

ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಅಶ್ವಥ ಮರ ಸುತ್ತ ಸ್ಥಳ ಮಹಜರು ನಡೆಸಿ, ಮಡಿಕೇರಿ ವಿಭಾಗ ವನ್ಯಜೀವಿ ವಿಭಾಗಕ್ಕೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

ವಿಲೇವಾರಿಗೆ ಕ್ರಮ
ಎರಡು ದಿನಗಳಿಂದ ಅಶ್ವತ್ಥ ಕಟ್ಟೆ ಸುತ್ತಮುತ್ತ ಹಲವಾರು ಕೊಕ್ಕರೆಗಳು ಅಸುನೀಗಿದ್ದು, ಕಳೇಬರ ವಿಲೇವಾರಿಗೆ ಸ್ಥಳೀಯಾಡಳಿತ ಕ್ರಮ ಕೈಗೊಂಡಿರಲಿಲ್ಲ. ಕೊಕ್ಕರೆಗಳ ಶವಗಳು ಕೊಳೆತ ಸ್ಥಿತಿಯಲ್ಲಿದ್ದು, ಪರಿಸರ ದುರ್ನಾತ ಬೀರುತ್ತಿದೆ. ಅರಣ್ಯ ಇಲಾಖೆ ಮಹಜರು ನಡೆಸಿದ ಬಳಿಕ ಕಳೇಬರ ವಿಲೇವಾರಿಗೆ ಸೂಚಿಸಲಾಗಿದೆ. ಮಂಗಳವಾರ ರಾತ್ರಿ ಕಳೇಬರ ವಿಲೇವಾರಿ ನಡೆಸಲಾಗುವುದು ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

ಅರೆಪ್ರಜ್ಞಾವಸ್ಥೆಯಲ್ಲಿ ಕೊಕ್ಕರೆಗಳು
ಮಂಗಳವಾರವೂ ಕೆಲವು ಕೊಕ್ಕರೆಗಳು ಸಾವಿಗೀಡಾಗಿದ್ದು, ಇನ್ನೂ ಕೆಲವು ಕೊಕ್ಕರೆಗಳು ಅರೆಪ್ರಜ್ಞಾವಸ್ಥೆಯಲ್ಲಿವೆ. ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ನಿರಂತರ ಮಳೆ ಹಾಗೂ ಗಾಳಿ ಪರಿಣಾಮದಿಂದ ಕೊಕ್ಕರೆಗಳು ಬಿದ್ದು ಗಾಯಗೊಂಡು ಸತ್ತಿರುವ ಸಾಧ್ಯತೆ ಇದೆ.

ಸ್ಥಳ ಪರಿಶೀಲನೆ
ಸಂತಾನೋತ್ಪತ್ತಿಗಾಗಿ ಪಶ್ಚಿಮ ಆಫ್ರಿಕಾ ಮತ್ತು ಕೆಂಪು ಸಮುದ್ರರಿಂದ ಕರಾವಳಿಗೆ ವಲಸೆ ಬಂದ ರೀಪ್‌ ಎಗ್ರೇಟ್ ಹಾಗೂ ಎಗ್ರೆಟಾ ಗುಲಾರಿಸ್‌ ಕೊಕ್ಕರೆಗಳು ಪುತ್ತೂರಿನ ಹೃದಯ ಭಾಗದ ಅಶ್ವತ್ಥ ಮರದ ಬಳಿ ಸಾವನ್ನಪ್ಪುತ್ತಿದ್ದು, ಮಂಗಳವಾರ ಇನ್ನೂ 3 ಕೊಕ್ಕರೆಗಳು ಸಾವಿಗಿಡಾಗಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಅಶ್ವಥ ಮರ ಸುತ್ತ ಸ್ಥಳ ಮಹಜರು ನಡೆಸಿ, ಮಡಿಕೇರಿ ವಿಭಾಗ ವನ್ಯಜೀವಿ ವಿಭಾಗಕ್ಕೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. ವಿಲೇವಾರಿಗೆ ಕ್ರಮ ಎರಡು ದಿನಗಳಿಂದ ಅಶ್ವತ್ಥ ಕಟ್ಟೆ ಸುತ್ತಮುತ್ತ ಹಲವಾರು ಕೊಕ್ಕರೆಗಳು ಅಸುನೀಗಿದ್ದು, ಕಳೇಬರ ವಿಲೇವಾರಿಗೆ ಸ್ಥಳೀಯಾಡಳಿತ ಕ್ರಮ ಕೈಗೊಂಡಿರಲಿಲ್ಲ. ಕೊಕ್ಕರೆಗಳ ಶವಗಳು ಕೊಳೆತ ಸ್ಥಿತಿಯಲ್ಲಿದ್ದು, ಪರಿಸರ ದುರ್ನಾತ ಬೀರುತ್ತಿದೆ. ಅರಣ್ಯ ಇಲಾಖೆ ಮಹಜರು ನಡೆಸಿದ ಬಳಿಕ ಕಳೇಬರ ವಿಲೇವಾರಿಗೆ ಸೂಚಿಸಲಾಗಿದೆ. ಮಂಗಳವಾರ ರಾತ್ರಿ ಕಳೇಬರ ವಿಲೇವಾರಿ ನಡೆಸಲಾಗುವುದು ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ. ಅರೆಪ್ರಜ್ಞಾವಸ್ಥೆಯಲ್ಲಿ ಕೊಕ್ಕರೆಗಳು ಮಂಗಳವಾರವೂ ಕೆಲವು ಕೊಕ್ಕರೆಗಳು ಸಾವಿಗೀಡಾಗಿದ್ದು, ಇನ್ನೂ ಕೆಲವು ಕೊಕ್ಕರೆಗಳು ಅರೆಪ್ರಜ್ಞಾವಸ್ಥೆಯಲ್ಲಿವೆ. ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ನಿರಂತರ ಮಳೆ ಹಾಗೂ ಗಾಳಿ ಪರಿಣಾಮದಿಂದ ಕೊಕ್ಕರೆಗಳು ಬಿದ್ದು ಗಾಯಗೊಂಡು ಸತ್ತಿರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-aasdsadsa-dad

Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.