ಸಕ್ರೀಯತೆಗೆ ಇನ್ನೊಂದು ಹೆಸರೇ ಸುಷ್ಮಾ

ಮೋದಿ ಅವರೇ ಮೆಚ್ಚಿಕೊಂಡಿದ್ದ ವ್ಯಕ್ತಿತ್ವ

Team Udayavani, Aug 7, 2019, 2:40 AM IST

sakreeya1

ಮಣಿಪಾಲ: ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ, ಸಜ್ಜನ ರಾಜಕಾರಣಿ ಸುಷ್ಮಾ ಸ್ವರಾಜ್ ನಿಧನಕ್ಕೆ ಇಡೀ ರಾಷ್ಟ್ರವೇ ಕಂಬನಿ ಮಿಡಿಯುತ್ತಿದೆ.

ಸಕ್ರೀಯ ಸ್ವಭಾವ
ಮೇಲ್ನೋಟಕ್ಕೆ ಆರೋಗ್ಯವಾಗಿದ್ದಂತೆ ಕಾಣುತ್ತಿದ್ದ ಸುಷ್ಮಾ ಅವರು ಹಲವು ಸಮಸ್ಯೆಗಳಿಂದ ಬಳಲುತ್ತಿದ್ದರು. ಕಳೆದ ಸರಕಾರದಲ್ಲಿ ತಾವು ವಿದೇಶಾಂಗ ಖಾತೆ ಸಚಿವೆಯಾಗಿದ್ದ ಅವಧಿಯಲ್ಲಿ ಬಹುತೇಕ ರಾಷ್ಟ್ರಗಳಿಗೆ ಸುಷ್ಮಾ ಸ್ವರಾಜ್ ಭೇಟಿ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ತೆಳಿದ ಬಹುತೇಕ ರಾಷ್ಟ್ರಗಳಿಗೆ ಸುಷ್ಮಾ ಅವರು ತೆರಳಿದ್ದರು. ಮೋದಿ ಅವರು ಭೇಟಿ ನೀಡಲಿರುವ ಕೆಲವು ರಾಷ್ಟ್ರಗಳಿಗೆ ಮುಂಗಡವಾಗಿ ತೆರಳಿ ಕಾರ್ಯಕ್ರಮಗಳನ್ನು ಸಂಘಟಿಸಿ ಬರುತ್ತಿದ್ದರು. ಇಷ್ಟು ಮಾತ್ರವಲ್ಲದೇ ಪ್ರಧಾನಿಗಳ ಭೇಟಿ ಬಳಿಕ ನಡೆಯುವ ಬೆಳವಣಿಗೆಗಳ ಕುರಿತಾಗಿ ಹೆಚ್ಚು ಗಮನ ಹರಿಸುತ್ತಿದ್ದರು. ಪ್ರಧಾನಿಗಳ ಮಾತುಕತೆ ನಡೆದ ಬಳಿಕ ಸುಷ್ಮಾ ಅವುಗಳನ್ನು ಕಾರ್ಯಗತಗೊಳಿಸಲು ಉತ್ಸುಕರಾಗಿದ್ದರು. ಸುಷ್ಮಾ ಅವರೊಂದಿಗೆ ಅಂದು ಈಗಿನ ವಿದೇಶಾಂಗ ಸಚಿವ ಜಯ ಶಂಕರ್‌ ಅವರು, ವಿದೇಶಾಂಗ ಕಾರ್ಯದರ್ಶಿಯಾಗಿ ಸಹಕಾರ ನೀಡುತ್ತಿದ್ದರು. ಸುಷ್ಮಾ ಅವರಿಗೆ ಕಳೆದ ಸರಕಾರದ ಅವಧಿಯಲ್ಲಿಯೇ ಅನಾರೋಗ್ಯ ಕಾಡುತ್ತಿತ್ತು. ಆದರೂ ಕೆಲಸವನ್ನು ಪೂರೈಸಿದ್ದರು.

ಚುನಾವಣೆಯಿಂದ ದೂರ
ಎರಡನೇ ಅವಧಿಗೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರಕಾರ ರಚನೆಯಾಗು ಸಂದರ್ಭದಲ್ಲಿ ಮೋದಿ ಅವರು ತಮ್ಮ ಕ್ಯಾಬಿನೆಟ್ ನಲ್ಲಿ ಮತ್ತೆ ಸುಷ್ಮಾ ಸ್ವರಾಜ್ ಅವರನ್ನು ಮಂತ್ರಿ ಮಾಡಲು ಅಭಿಲಾಷೆ ಹೊಂದಿದ್ದರು. ಆದರೆ ಸುಷ್ಮಾ ಅವರು ಲೋಕಸಭೆ ಚುನಾವಣೆಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸದೇ ಚುನಾವಣೆಯಿಂದ ಅಂತರ ಕಾಯ್ದುಕೊಂಡಿದ್ದರು.

ಮಂತ್ರಿಸ್ಥಾನ ನೋ ಎಂದಿದ್ದರು
ಸುಷ್ಮಾ ಸ್ವರಾಜ್ ಅವರು ಚುನಾವಣೆಗೆ ಸ್ಪರ್ಧಿಸಲಿಲ್ಲವಾದರೂ ಅವರನ್ನು ಮಂತ್ರಿ ಮಾಡುವ ವಿಶ್ಚಾಸ ಬಿಜೆಪಿ ನಾಯಕರಲ್ಲಿ ಇತ್ತು. ಇದಕ್ಕಾಗಿ ಹಲವು ನಾಯಕರು ಸುಷ್ಮಾ ಅವರನ್ನು ಸಂರ್ಕಿಸಿ ಮಂತ್ರಿಸ್ಥಾನ ಒಪ್ಪಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಅನಾರೋಗ್ಯ ಕಾರಣದಿಂದ ಸುಷ್ಮಾ ಅವರು ಸಮ್ಮತಿಸಲಿಲ್ಲ. ಕೊನೆಗೆ ಬಿಜೆಪಿ ನಾಯಕರು ನರೇಂದ್ರ ಮೋದಿ ಮುಖಾಂತರ ಸುಷ್ಮಾಅವರ ಮನೆಗೆ ತೆರಳಿ ಅವರಲ್ಲಿ ಮತ್ತೆ ಮಂತ್ರಿ ಸ್ಥಾನದ ಮಾತುಕತೆಗೆ ಮುಂದಾದರು. ಇಲ್ಲೂ ಸುಷ್ಮಾ ಸ್ವರಾಜ್ ಅವರು ತನ್ನ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ಯಾಕೆಂದರೆ ಅಷ್ಟು ಅನಾರೋಗ್ಯ ಅವರನ್ನು ಕಾಡುತ್ತಿತ್ತು. ಸುಷ್ಮಾ ಅವರ ಕೆಲಸದ ಶೈಲಿ ಮೋದಿ ಅವರಿಗೆ ಇಷ್ಟವಾಗಿತ್ತು.

ವೇದಿಕೆ ಕೆಳಗೆ ಕೂತ ಸುಷ್ಮಾ
ಕೇಂದ್ರ ಸಂಪುಟದ ಪ್ರಮಾಣ ವಚನ ಸಮಾರಂಭದಲ್ಲಿ ಸುಷ್ಮಾ ಅವರು ಕೊನೆಗೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಎಲ್ಲರಿಗೂ ನಮಿಸಿ ವೇದಿಕೆಯ ಕೆಳಗೆ ಕುಳಿತುಕೊಂಡಿದ್ದರು. ಇದು ಬಹುತೇಕ ಮಂದಿಗೆ ಆಶ್ಚರ್ಯವನ್ನುಂಟು ಮಾಡಿತ್ತು. ಯಾಕೆಂದರೆ ಎಲ್ಲರೂ ಸುಷ್ಮಾ ಸ್ವರಾಜ್ ಸಚಿವೆಯಾಗುತ್ತಾರೆ ಎಂದೇ ನಂಬಿದ್ದರು. ಆದರೆ ಬಿಜೆಪಿ ಸುಷ್ಮಾ ಸ್ವರಾಜ್ ಜತೆ ಕೆಲಸ ಮಾಡಿ ಅನುಭವವುಳ್ಳ ವಿದೇಶಾಂಗ ಕಾರ್ಯದರ್ಶಿ ಜಯಶಂಕರ್ ಅವರನ್ನು ಸುಷ್ಮಾ ಅಲಂಕರಿಸಿದ್ದ ವಿದೇಶಾಂಗ ಇಲಾಖೆಯ ಮಂತ್ರಿಯನ್ನಾಗಿ ಮಾಡಿತು.

ಕಷ್ಟಗಳಿಗೆ ಮಿಡಿಯುವ ಮನಸ್ಸು
ತಾವು ವಿದೇಶಾಂಗ ಇಲಾಖೆ ಸಚಿವೆಯಾಗಿದ್ದ ಅವಧಿಯಲ್ಲಿ ಸಾಗರೋತ್ತರ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರಿಗೆ ಸಹಾಯ ಹಸ್ತವನ್ನು ಚಾಚಿದ್ದರು. ಯಾವುದೇ ದೇಶದಲ್ಲಿ ಭಾರತಿಯರು ಅಪಾಯದಲ್ಲಿ ಇದ್ದಾಗ ಅವರನ್ನು ಸುರಕ್ಷಿತವಾಗಿ ತವರಿಗೆ ಕರೆ ತರುವ ಕೆಲಸವನ್ನು ಸುಷ್ಮಾ ಮಾಡುತ್ತಿದ್ದರು. ವೀಸಾಗಳ ಸಮಸ್ಯೆಯಾದಾಗ ಅವುಗಳನ್ನು ತಕ್ಷಣ ಬಗೆಹರಿಸಿ ಕೊಟ್ಟ ಅದೆಷ್ಟೋ ಉದಾಹರಣೆಗಳಿವೆ. ಭಾರತೀಯರು ವಿದೇಶದಲ್ಲಿ ಅಪಘಾತಕ್ಕೆ ಒಳಗಾಗಿ ಪ್ರಾಣ ಹಾನಿ ಸಂಭವಿಸಿದರೆ, ಕುಟುಂಗಳಿಗೆ ಅಲ್ಲಿಗೆ ತೆರಳಲು ವೀಸಾ, ಮೃತ ಶರೀರವನ್ನು ಭಾರತಕ್ಕೆ ಕರೆ ತರಲು ಶೀಘ್ರವೇ ಪ್ರಯತ್ನಿಸಿದ ಅದೆಷ್ಟೋ ಉದಾಹರಣೆಗಳಿವೆ. ಜನ ಒಂದು ಟ್ವೀಟ್ ಮೂಲಕ ಮನವಿ ಮಾಡಿದರೆ ಸಾಕಿತ್ತು ಅದಕ್ಕೆ ತಕ್ಷಣ ಸ್ಪಂದಿಸಿ ಪರಿಹಾರದತ್ತ ಕಾರ್ಯಪ್ರವೃತರಾಗುತ್ತಿದ್ದರು.

ಪಾಕ್ ವಶದಲ್ಲಿರುವ ಕುಲ್ ಭೂಷನ್ ಜಾಧವ್ ಅವರನ್ನು ಬಿಡುಗಡೆ ಗೊಳಿಸಲು ಬಹಳ ಪ್ರಯತ್ನಿಸಿದ್ದರು. ಜಾಧವ್ ಅವರಿಗೆ ಗಲ್ಲು ಶಿಕ್ಷೆಯನ್ನು ಪಾಕ್ ವಿಧಿಸಿದಾಗ ಸುಷ್ಮಾ ಅಕ್ರೋಶ ವ್ಯಕ್ತಪಡಿಸಿದ್ದರು.

ಇನ್ನೇನಿದ್ದರೂ ಸುಷ್ಮಾ ನೆನಪು ಮಾತ್ರ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.