ಬೆಳೆ ವಿಮೆ ಹಣ ಬಿಡುಗಡೆಗೆ ಒತ್ತಾಯ
ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯಿಂದ ಮನವಿ
Team Udayavani, Aug 7, 2019, 11:32 AM IST
ಗದಗ: ಮೂರು ವರ್ಷಗಳಿಂದ ಬಾಕಿ ಇರುವ ಬೆಳೆ ವಿಮೆ ಹಣ ಬಿಡುಗಡೆಗೆ ಒತ್ತಾಯಿಸಿ ರೈತ ಮುಖಂಡರು ಜಿ.ಪಂ. ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.
ಗದಗ: ಕಳೆದ ಮೂರು ವರ್ಷಗಳಿಂದ ಬಿಡುಗಡೆಯಾಗದೇ ಬಾಕಿ ಇರುವ ಬೆಳೆ ವಿಮಾ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ.
ಈ ಕುರಿತು ರೈತ ಸಂಘದ ಪ್ರಮುಖರು ಜಿ.ಪಂ. ಅಧ್ಯಕ್ಷ ಎಸ್.ಪಿ. ಬಳಿಗಾರ ಅವರಿಗೆ ಮನವಿ ಸಲ್ಲಿಸಿ, ಚಿಕ್ಕಮಣ್ಣೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತರಿಗೆ 2016ರಿಂದ ಈ ವರೆಗೆ ಯಾವುದೇ ರೀತಿಯ ವಿಮಾ ಹಣ ಬಿಡುಗಡೆಯಾಗಿಲ್ಲ.
2016-17 ಹಿಂಗಾರು, 2017-18ನೇ ಸಾಲಿನ ಮುಂಗಾರಿನ ಕಡಲಿ, ಜೋಳ ಹಾಗೂ 2018-19ರ ಮುಂಗಾರು ಬೆಳೆಗಳಾದ ಹೆಸರು ಮತ್ತು ಮುಸುಕಿನ ಜೋಳ ಮತ್ತು ಶೇಂಗಾ ಬೆಳೆಗಳಿಗೆ ವಿಮೆ ಮಾಡಿಸಲಾಗಿತ್ತು. ಆದರೆ, 2016ರಿಂದ 2018ರ ವರೆಗೆ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಬರಗಾಲ ಕಾಡಿದ್ದರಿಂದ ಬೆಳೆ ಸಂಪೂರ್ಣ ಹಾನಿಗೀಡಾಗಿದೆ.
ಆದರೆ, ಚಿಕ್ಕಮಣ್ಣೂರು ಗ್ರಾ.ಪಂ. ವ್ಯಾಪ್ತಿಯ ಅರಹುಣಸಿ, ಭಾಸಲಾಪುರ, ಚಿಕ್ಕಮಣ್ಣೂರ, ಹಿರೇಮಣ್ಣೂರ ಭಾಗದ ರೈತರಿಗೆ ಬೆಳೆ ವಿಮೆಯಿಂದ ಪರಿಹಾರ ಹಣ ಬಿಡುಗಡೆಯಾಗಿಲ್ಲ. ಈ ಕುರಿತು ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈ ಕುರಿತು ಪರಿಶೀಲಿಸಿ ಈ ಭಾಗದ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ರಾಜ್ಯಾಧ್ಯಕ್ಷ ಶಾಂತಸ್ವಾಮಿ ಹಿರೇಮಠ, ಮುತ್ತಣ್ಣ ಚೌಡರೆಡ್ಡಿ, ಶರಣಪ್ಪ ಚಿಗರಿ, ಬಸನಗೌಡ ಸಿ. ಪಾಟೀಲ, ಯಲ್ಲಪ್ಪಗೌಡ ಶಿ. ಪಾಟೀಲ, ಉಮೇಶ ಮ.ತಡಹಾಳ, ಶಂಕ್ರಪ್ಪ ಶಿವಳ್ಳಿ, ರುದ್ರಪ್ಪ ವಿ. ರೋಣದ, ಗೋವಿಂದಪ್ಪ ಕಿರಟಗೇರಿ, ಗಂಗಾಧರಯ್ಯ ಹಿರೇಮಠ, ಬಾಳಪ್ಪ ಮೊರಬದ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ
Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು