ಯೋಜನೆಗಳ ಅನುಷ್ಠಾನಕ್ಕಾಗಿ ಗ್ರಾಮ ವಾಣಿ

ಬೆಂಗಳೂರು ನಗರ ಜಿಲ್ಲಾಡಳಿತದಿಂದ ಈ ಉಪಕ್ರಮ | ವಾಟ್ಸ್‌ ಆ್ಯಪ್‌ ಗ್ರೂಪ್‌ ಮೂಲಕ ಕಾಮಗಾರಿ ಚರ್ಚೆ

Team Udayavani, Aug 7, 2019, 11:49 AM IST

bng-tdy-1

ಬೆಂಗಳೂರು: ಸ್ವಚ್ಛ ಭಾರತ್‌, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಯೋಜನೆಗಳು ಸೇರಿದಂತೆ ವಿವಿಧ ಇಲಾಖೆಯ ಹಲವು ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಗೊಳಿಸಲು ಬೆಂಗಳೂರು ನಗರ ಜಿಲ್ಲಾಡಳಿತ ‘ಗ್ರಾಮ ವಾಣಿ’ಎಂಬ ವಾಟ್ಸ್‌ ಆ್ಯಪ್‌ ಗ್ರೂಪ್‌ ಆರಂಭಿಸಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಯೋಜನೆಗಳ ಬಗ್ಗೆ ‘ಗ್ರಾಮ ವಾಣಿ’ ಗ್ರೂಪ್‌ನಲ್ಲಿ ವಿಸ್ತೃತವಾದ ಚರ್ಚೆಗಳು ನಡೆಯಲಿವೆ.

ಬೆಂಗಳೂರು ನಗರ ಜಿಪಂ ವ್ಯಾಪ್ತಿಗೆ ಬರುವ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಆನೇಕಲ್ ತಾಲೂಕುಗಳ ವ್ಯಾಪ್ತಿಯ ಹಿರಿಯ ಅಧಿಕಾರಿಗಳು ‘ಗ್ರಾಮ ವಾಣಿ’ ವಾಟ್ಸ್‌ ಆ್ಯಪ್‌ ಗ್ರೂಪ್‌ನಲ್ಲಿದ್ದು ಕಿರಿಯ ಅಧಿಕಾರಿಗಳೊಂದಿಗೆ ಯೋಜನೆ ಜಾರಿ ಸಂಬಂಧ ಚರ್ಚೆ ನಡೆಸಿ ಸಲಹೆ ಸೂಚನೆ ನೀಡಲಿದ್ದಾರೆ.

ಭೇಟಿ ಬಗ್ಗೆ ಚರ್ಚೆ, ಸಲಹೆ: ಗ್ರಾಪಂ ಮಟ್ಟದಲ್ಲಿ ಯೋಜನೆ ಅನುಷ್ಠಾನದ ಸಂಬಂಧ ಇಲಾಖಾವಾರು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಾಗ ಈ ಬಗ್ಗೆ ಗ್ರಾಮ ವಾಣಿಯಲ್ಲಿ ಫೋಟೋ ಹಾಗೂ ಅದಕ್ಕೆ ಸಂಬಂಧಿಸಿದ ಮಾಹಿತಿಗಳು ರವಾನೆ ಆಗಲಿವೆ. ಈ ವೇಳೆ ಆ ಕಾರ್ಯಕ್ರಮದ ಬಗ್ಗೆ ಗ್ರೂಪ್‌ ಚರ್ಚೆ ನಡೆಯಲಿದೆ. ಜೊತೆಗೆ ಸಲಹೆಗಳನ್ನು ಕೂಡ ನೀಡಲಾಗುತ್ತದೆ.

ನಗರ ಜಿಲ್ಲಾಡಳಿತ ಈಗಾಗಲೇ ಶಾಲಾ- ಕಾಲೇಜು ವಿದ್ಯಾರ್ಥಿಗಳನ್ನು ಒಡಗೂಡಿ ಗ್ರಾಮಾಂತರ ಪ್ರದೇಶ ದಲ್ಲಿ ಸ್ವಚ್ಛ ಭಾರತ್‌ ಯೋಜನೆಗೆ ಸಂಬಂಧಿಸಿದಂತೆ ಹಲವು ರೀತಿಯ ಅರಿವು ಮೂಡಿಸುವ ಕಾರ್ಯಕ್ರಮ ಗಳನ್ನು ಹಮ್ಮಿಕೊಂಡಿದ್ದು ಸಾರ್ವಜನಿಕರಲ್ಲಿ ತಿಳಿವಳಿಕೆ ನೀಡುವಲ್ಲಿ ಯಶಸ್ವಿಯಾಗಿವೆ. ಆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಜನರನ್ನು ಮತ್ತಷ್ಟು ತಲುಪುವ ಬಗ್ಗೆ ಸಾಕಷ್ಟು ಚರ್ಚೆ ಗಳು ಗ್ರಾಮ ವಾಣಿಯಲ್ಲಿ ನಡೆದಿದೆ ಎಂದು ಬೆಂಗ ಳೂರು ನಗರ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ವಚ್ಛ ಭಾರತ್‌ ಯೋಜನೆಯ ಅಡಿಯಲ್ಲಿ ನಗರ ಜಿಲ್ಲಾಡಳಿತ ಅನುಪಮ ಕಾರ್ಯಕ್ರಮಗಳನ್ನು ರೂಪಿಸಿದ್ದು, ಶಾಲೆಗಳಲ್ಲಿ ಸ್ವಚ್ಛತೆ ಕಾಪಾಡುವುದು, ಗ್ರಾಮೀಣ ಪ್ರದೇಶದಲ್ಲಿ ಶೌಚಾ ಲಯ ನಿರ್ಮಿಸುವುದು ಕೂಡ ಇದರಲ್ಲಿ ಸೇರಿದೆ.

ಇದರ ಯಶಸ್ವಿಗಾಗಿಯೇ ಶಾಲಾ-ಕಾಲೇಜು ಪ್ರಾಂಶುಪಾಲರ ಮೊಬೈಲ್ ಸಂಖ್ಯೆಯನ್ನು ಕೂಡ ‘ಗ್ರಾಮ ವಾಣಿ’ ಗ್ರೂಪ್‌ನಲ್ಲಿ ಅಳವಡಿಕೆ ಮಾಡಲಾ ಗಿದ್ದು, ಸ್ವಚ್ಛತೆ ಸಂಬಂಧಿಸಿದ ಅನೇಕ ರೀತಿಯ ಸಕಾರಾತ್ಮಕ ಸಮಾಲೋಚನೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಕುಡಿಯುವ ನೀರಿನ ಯೋಜನೆ ಬಗ್ಗೆ ಚರ್ಚೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ಇಲಾಖೆ ವ್ಯಾಪ್ತಿಗೆ ಸಂಬಂಧ ಪಟ್ಟಂತೆ ಅಭಿವೃದ್ಧಿ ಕಾಮಗಾರಿ ಬಗ್ಗೆ ಚರ್ಚೆಗಳು ಕೂಡ ನಡೆಯಲಿವೆ.

ಕುಡಿಯುವ ನೀರು, ನೈರ್ಮಲ್ಯ, ನಬಾರ್ಡ್‌ ಯೋಜನೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ಸುವರ್ಣ ಗ್ರಾಮ ಯೋಜನೆ ಸೇರಿದಂತೆ ಇನ್ನಿತರ ಯೋಜನೆ ಮತ್ತು ಕಾಮಗಾರಿಗಳ ಬಗ್ಗೆ ಚರ್ಚೆಗಳು ಈಗಾಗಲೇ ನಡೆದಿವೆ.

ಸ್ವಚ್ಛ ಭಾರತ್‌ ಯೋಜನೆ ಜಾರಿ ಸಂಬಂಧಿಸಿದಂತೆ ಹಲವು ರೀತಿಯ ಚರ್ಚೆಗಳು ನಡೆದಿದ್ದು ‘ಗ್ರಾಮ ವಾಣಿ’ ವಾಟ್ಸ್‌ ಆಪ್‌ ಬಗ್ಗೆ ಉತ್ತಮ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಸ್ವಚ್ಛ ಭಾರತ್‌ ಯೋಜನೆ ವಿಭಾಗದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ 250 ಮಂದಿಯನ್ನು ಗ್ರೂಪ್‌ನಲ್ಲಿ ಸೇರಿಸಲಾಗಿದ್ದು ಹಿರಿಯ ಅಧಿಕಾರಿಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

 

● ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.