ಅಲೆಮಾರಿಗಳ ಸಮಸ್ಯೆಗೆ ಸ್ಪಂದಿಸಿದ ಜಿಲ್ಲಾಧಿಕಾರಿ
Team Udayavani, Aug 7, 2019, 2:33 PM IST
ಹಾವೇರಿ: ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಶಾಂತಿನಗರ ಹಾಗೂ ನಾಗೇಂದ್ರನಮಟ್ಟಿ ನಿವಾಸಿಗಳ ಮಳೆಗಾಲ ಸಮಸ್ಯೆ ಆಲಿಸಿದರು.
ಹಾವೇರಿ:ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಇಲ್ಲಿಯ ನಾಗೇಂದ್ರನಮಟ್ಟಿ ಹಾಗೂ ಶಾಂತಿನಗರದ ಅಲೆಮಾರಿಗಳ ವಾಸ ಸ್ಥಳಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಭೇಟಿ ನೀಡಿ ಜನರ ಸಂಕಷ್ಟಗಳನ್ನು ಆಲಿಸಿದರು.
ರಸ್ತೆ ಹಾಗೂ ಚರಂಡಿಗಳು ಸಮರ್ಪಕ ನಿರ್ವಹಣೆ ಇಲ್ಲದೆ ಮನೆಗಳಿಗೆ ನೀರು ನುಗ್ಗುತ್ತಿರುವ ಕುರಿತಂತೆ ನಾಗೇಂದ್ರನಮಟ್ಟಿ ನಿವಾಸಿಗಳು ಜಿಲ್ಲಾಧಿಕಾರಿಗಳ ಗಮನ ಸೆಳೆದರು. ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಬುಧವಾರದಿಂದಲೇ ಕಾಮಗಾರಿ ಆರಂಭಿಸುವಂತೆ ಸ್ಥಳದಲ್ಲಿದ್ದ ಪೌರಾಯುಕ್ತ ಬಸವರಾಜ ಜಿದ್ದಿ ಅವರಿಗೆ ಸೂಚನೆ ನೀಡಿದರು.
ಶಾಂತಿನಗರ ಹೊರವಲಯದಲ್ಲಿರುವ ಅಲೆಮಾರಿ ಕ್ಯಾಂಪಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾತ್ಕಾಲಿಕ ಟೆಂಟಿನಲ್ಲಿ ನೀರು ಹರಿದು ತೀವ್ರ ತೊಂದರೆ ಅನುಭವಿಸುತ್ತಿದ್ದ ಅಲೆಮಾರಿ ಜನರ ಸಂಕಷ್ಟಗಳನ್ನು ಕಂಡ ಜಿಲ್ಲಾಧಿಕಾರಿಗಳು ತಕ್ಷಣವೇ ಅವರನ್ನು ಸ್ಥಳಾಂತರಿಸಿ ಪರಿಹಾರ ಕೇಂದ್ರ ಸ್ಥಾಪಿಸಿ ತಾತ್ಕಾಲಿಕ ಪುನರ್ ವಸತಿ ಹಾಗೂ ಊಟದ ವ್ಯವಸ್ಥೆ ಮಾಡುವಂತೆ ತಹಶೀಲ್ದಾರ್ ಶಿವಕುಮಾರ ಅವರಿಗೆ ಸೂಚಿಸಿದರು.
ಹಾನಗಲ್ಲ ರಸ್ತೆ ಎಪಿಎಂಸಿ ಹತ್ತಿರದ ಹಾಗೂ ಹೆಗ್ಗೇರಿ ರಸ್ತೆಯ ಚರಂಡಿ ವ್ಯವಸ್ಥೆ ಹಾಗೂ ರಾಜಾ ಕಾಲುವೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ಲಾಸ್ಟಿಕ್ ಕಸಕಡ್ಡಿಯಿಂದ ಸರಾಗವಾಗಿ ನೀರು ಹರಿಯಲು ತಡೆಯಾಗುತ್ತಿರುವ ಕುರಿತಂತೆ ಪರಿಶೀಲಿಸಿ ಚರಂಡಿಗಳನ್ನು ಸ್ವಚ್ಛಗೊಳಿಸಲು ಅಗತ್ಯ ಕ್ರಮವಹಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ವ್ಯಾಪಾರಸ್ಥರು ಪ್ಲಾಸ್ಟಿಕ್ ಸೇರಿದಂತೆ ಅಂಗಡಿಯ ತ್ಯಾಜ್ಯವನ್ನು ರಸ್ತೆ, ಚರಂಡಿ ಸೇರಿದಂತೆ ಎಲ್ಲೆಂದರಲ್ಲಿ ಎಸೆಯದೇ ವೈಜ್ಞಾನಿಕವಾಗಿ ವಿಲೇವಾರಿಮಾಡಬೇಕು. ಸರಿಯಾಗಿ ವಿಲೇವಾರಿ ಮಾಡದ ಅಂಗಡಿ ಮಾಲೀಕರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಪೌರಾಯುಕ್ತರಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ