ಹಳಿಯಾಳದ ಇತಿಹಾಸದಲ್ಲೇ ಪ್ರಥಮ ನೆರೆ

•ಹತ್ತಾರು ಮನೆ ಗೋಡೆ ಬಿದ್ದು ಹಾನಿ•ತುಂಬಿ ಹರಿಯುತ್ತಿವೆ ಹಳ್ಳ-ಕೊಳ್ಳ

Team Udayavani, Aug 7, 2019, 2:39 PM IST

uk-tdy-1

ನೆರೆ ಬಂದ ಸ್ಥಳದಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು.

ಹಳಿಯಾಳ: ಕಳೆದ 15 ದಿನಗಳಿಂದ ತಾಲೂಕಿನಾದ್ಯಂತ ಭಾರಿ ವರ್ಷಧಾರೆ ಆಗುತ್ತಿದೆ. ಅದರಲ್ಲೂ ಕಳೆದ ನಾಲ್ಕೂ ದಿನಗಳಿಂದ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ಹಳಿಯಾಳದ ಎಲ್ಲ ಕೆರೆ, ಕಟ್ಟೆ, ಹಳ್ಳ, ಕೊಳ್ಳಗಳು ತುಂಬಿವೆ.

ಕೆಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇನ್ನು ಹಳಿಯಾಳ ಗಡಿಭಾಗದ ಖಾನಾಪುರ, ನಂದಗಡ್‌, ಬಿಡಿ ಸೇರಿದಂತೆ ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣ ಹಳಿಯಾಳದಲ್ಲಿ ನೆರೆ ವಾತಾವರಣ ಸೃಷ್ಟಿಯಾಗಿದೆ.

ಹಳಿಯಾಳದ ಯಡೋಗಾ ಸೇತುವೆ, ಕಳಸಾಪುರ ಹಳ್ಳ, ಕೆಸರೊಳ್ಳಿ ಸೇತುವೆ, ಮಂಗಳವಾಡ ಸೇತುವೆಗಳಲ್ಲಿ ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿದೆ.

ಕೆಸರೊಳ್ಳಿ ಸೇತುವೆ ಮೇಲಿಂದ ಸುಮಾರು ಎರಡರಿಂದ ನಾಲ್ಕು ಅಡಿಯಷ್ಟು ನೀರು ತುಂಬಿ ಹರಿಯುತ್ತಿರುವ ಕಾರಣ ಹಳಿಯಾಳ ಯಲ್ಲಾಪುರ, ಕಾರವಾರ, ದಾಂಡೇಲಿ ಸೇರಿದಂತೆ ಪ್ರಮುಖ ನಗರಗಳಿಗೆ ದಿನನಿತ್ಯ ಸಂಚರಿಸುತ್ತಿದ್ದ ಸಾವಿರಾರು ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದ ಹತ್ತಾರು ಕಿಮೀ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ವಾಹನ ಸವಾರರು, ಪ್ರಯಾಣಿಕರು ಪರದಾಡುವಂತಾಗಿದೆ. ಹಳಿಯಾಳ ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಈ ಪ್ರಮಾಣದ ನೀರು ಹರಿಯುತ್ತಿದ್ದು ಪ್ರವಾಹದ ಪರಿಸ್ಥಿತಿ ಎದುರಾಗಿದೆ.

ಸಾವಿರಾರು ಎಕರೆಯಲ್ಲಿ ಬೆಳೆದ ಕಬ್ಬು, ಭತ್ತ, ಮೆಕ್ಕೆಜೋಳ, ಹತ್ತಿ ಸಂಪೂರ್ಣ ಮಳೆಗೆ ಆಹುತಿಯಾಗಿವೆ. ನೀರಿನಿಂದ ಸಂಪೂರ್ಣ ನಡುಗಡ್ಡೆ ಆಗಿದೆ. ಹಳಿಯಾಳದಿಂದ ಮೂರು ಕಿಮೀ ಅಂತರದಲ್ಲಿರುವ ಕೆಸರೊಳ್ಳಿ ಸೇತುವೆ ಬಳಿಯ ರಾಜಶೇಖರ ರೆಸಾರ್ಟ್‌ ಸಂಪೂರ್ಣ ನೀರಿನಲ್ಲಿ ಮುಳುಗಿದೆ. ಹತ್ತು ಅಡಿಗಿಂತ ಹೆಚ್ಚಿನ ನೀರು ರೆಸಾರ್ಟ್‌ನಲ್ಲಿ ತುಂಬಿಕೊಂಡಿದ್ದು ಇದರಿಂದ ಹೊಟೆಲ್ನಲ್ಲಿ ಇದ್ದ ವಸ್ತುಗಳು ನೀರಿನಲ್ಲಿ ಕೊಚ್ಚಿ ಹೋಗಿದೆ.

ಇನ್ನು ಹಳಿಯಾಳ ಪಟ್ಟಣದ ಅಂಚಿನಲ್ಲಿರುವ ಹೊರಗಿನ ಗುತ್ತಿಗೇರಿ ಕೆರೆ ಸಂಪೂರ್ಣ ತುಂಬಿ ಕೆರೆಯ ನೀರು ಪುಟ್ ಪಾತ್‌ ಹಾಗೂ ರಾಜ್ಯ ಹೆದ್ದಾರಿ ಮೇಲೂ ಹರಿಯುತ್ತಿದೆ. ಕೆರೆಯ ಅಕ್ಕಪಕ್ಕದ ಮನೆಗಳಿಗೂ ನೀರು ನುಗ್ಗಿದೆ. ನೂರಾರು ಎಕರೆ ಪ್ರದೇಶ ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿವೆ ಬೆಳೆ ನಾಶವಾಗಿದೆ.

ಮಳೆಯ ಅವಾಂತರ ಸೃಷ್ಟಿ: ಪಟ್ಟಣದಲ್ಲಿ ಹತ್ತಾರು ಮನೆಗಳ ಗೋಡೆಗಳು ಕುಸಿದು ಬಿದ್ದಿವೆ. ಇನ್ನು ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿದೆ ಕಿಲ್ಲಾ ಪ್ರದೇಶದ ಸುಮಾರು ಐದಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಕೆಲವು ಮನೆಗಳಲ್ಲಿ ಅಗ್ನಿಶಾಮಕದಳದವರ ಸಹಾಯದಿಂದ ಮೋಟಾರುಗಳನ್ನು ಹಚ್ಚಿ ನೀರನ್ನು ಹೊರಹಾಕಲಾಗುತ್ತಿದೆ ಹಾಗೂ ಮನೆಯಲ್ಲಿ ಗಟಾರನ್ನು ತೆಗೆದು ನೀರನ್ನು ಮನೆಯಿಂದ ಹೊರಹಾಕುವ ಸಂದಿಗ್ಧ ಪರಿಸ್ಥಿತಿ ಎದುರಿಸಬೇಕಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.