ಶ್ರೀಗಂಧದ ಮರ ಕದ್ದ ಕಳ್ಳರ ತಂಡ ಬಂಧನ

20 ಲಕ್ಷ ರೂ. ಶ್ರೀಗಂಧದ ಕಟ್ಟಿಗೆ-ವಾಹನ ವಶ.

Team Udayavani, Aug 7, 2019, 2:49 PM IST

uk-tdy-3

ಜೋಯಿಡಾ: ಪೊಲೀಸ್‌ ಮತ್ತು ಅರಣ್ಯಾಧಿಕಾರಿಗಳ ತನಿಖಾ ತಂಡದೊಂದಿಗೆ ಶ್ರೀಗಂಧ ಕಳ್ಳತನದ 7 ಆರೋಪಿಗಳು.

ಜೋಯಿಡಾ: ತಾಲೂಕಿನಲ್ಲಿ ಕಳೆದ ಜು.25 ಮತ್ತು 27 ರಂದು ನಾಗೋಡಾದ ಖಾಸಗಿ ಫಾರಂ ಹೌಸ್‌ನಲ್ಲಿ 6 ಶ್ರೀಗಂಧದ ಮರ ಹಾಗೂ ಅಲ್ಲಿನ ಸಮೀಪದ ಅರಣ್ಯದಲ್ಲಿನ ಮೂರು ಶ್ರೀಗಂಧದ ಮರಗಳನ್ನು ಕದ್ದ 7 ಕಳ್ಳರನ್ನು ಬಲೆಬೀಸಿ ಸೆರೆ ಹಿಡಿಯುವಲ್ಲಿ ಜೋಯಿಡಾ ಪೊಲೀಸ್‌ ಹಾಗೂ ಅರಣ್ಯ ಇಲಾಖೆ ತನಿಖಾ ತಂಡ ಯಶಸ್ವಿಯಾಗಿದೆ.

ಜೋಯಿಡಾ ತಾಲೂಕು ಕೇಂದ್ರದಿಂದ ಅನತಿ ದೂರದಲ್ಲಿರುವ ನಿವೃತ್ತ ಡಿಜಿಪಿ ಓಂಕಾರ ಎಂಬವರ ಖಾಸಗಿ ಪಾರಂ ಹೌಸ್‌ನ ಶ್ರೀಗಂಧದ ಒಟ್ಟೂ 6 ಮರಗಳನ್ನು ಎರಡು ಬಾರಿ ಕಟಾವು ಮಾಡಿ ಸಾಗಿಸಿದ್ದು ಹಾಗೂ ಅಲ್ಲಿಯೇ ಹತ್ತಿರದ ಜೋಯಿಡಾ ಅರಣ್ಯ ವಲಯ ವ್ಯಾಪ್ತಿಗೆ ಸೇರಿದ ನಾಗೋಡಾ ಅರಣ್ಯದ ಮೂರು ಶ್ರೀಗಂಧದ ಗಿಡಗಳನ್ನು ಕದ್ದ ಆರೋಪಕ್ಕೆ ಸಂದಬಂಧಿಸಿದಂತೆ ಜೋಯಿಡಾ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಹಾಗೂ ಅರಣ್ಯ ಇಲಾಖೆ ಹಿರಿಯ ಅಧಿಕಾರಿ ಸೂಚನೆ ಮೇರೆಗೆ ಈ ಶ್ರೀಗಂಧ ಕಳ್ಳರ ಸೇರೆಗೆ ಎರಡು ಪ್ರತ್ಯೇಕ ತಂಡ ರಚಿಸಿ, ಈ ತಂಡದ ಬಗ್ಗೆ ಮಾಹಿತಿ ಸಂಗ್ರಹಿಸಿ ಅತ್ಯಂತ ಕಡಿಮೆ ಅವಧಿಯಲ್ಲಿಯೇ ಈ 7 ಜನರ ಕಳ್ಳರನ್ನು ದಸ್ತಗಿರಿ ಮಾಡಿ, ಇವರಿಂದ ಒಟ್ಟು 240ಕೆ.ಜಿ. ತೂಕದ ಶ್ರೀಗಂಧ ಹಾಗೂ ಆರೋಪಿತರು ಈ ಕೃತ್ಯಕ್ಕೆ ಬಳಸಿದ ಇನೋವಾ ಕಾರು ಮತ್ತು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಶ್ರೀಗಂಧದ ಮೌಲ್ಯ ಅಂದಾಜು 20 ಲಕ್ಷ ರೂ. ಎನ್ನಲಾಗಿದೆ. ಇದರ ಜೊತೆಯಲ್ಲಿ ಜೋಯಿಡಾ ತಾಲೂಕಿನ ಗುಂದ ಹಾಗೂ ಅಳ್ನಾವರದಲ್ಲಿ ನಡೆದ ಒಟ್ಟು 6 ಪ್ರಕರಣ ಭೇದಿಸುವಲ್ಲಿ ಈ ಅಧಿಕಾರಿಗಳ ತಂಡ ಯಶಸ್ವಿಯಾಗಿದೆ.

ಈ ಏಳು ಆರೋಪಿತರನ್ನು ಕ್ರಮವಾಗಿ, ಅಶೋಕ ಬೇಡರ್‌ ಯನೆ ನಾಯಕ ಪಿರನವಾಡಿ ಜೋಯಿಡಾ, ಕರಿಯಪ್ಪ ಯಲ್ಲಪ್ಪ ಹಳಬ ಹಾಗೂ ಗಂಗಪ್ಪ ಯಮನಪ್ಪ ಹಳಬ ಖಾನಾಪುರ ಗರ್ಬೆನಹಳ್ಳಿ, ಸೋಮನಾಥ ವಾಲಿಕರ ಬಾಗೇವಾಡಿ ಖಾನಾಪುರ, ಪ್ರಮೋದ ನಿಲಜಕರ ಖಾನಾಪುರದ ನಂದಗಡ, ಬಾಲಚಂದ್ರ ಫಕಿರಪ್ಪ ತಳವರ ಖಾನಾಪುರ ಗರ್ಬೆನಹಟ್ಟಿ, ಯಲ್ಲಪ್ಪ ಯಮನಪ್ಪ ಹಳಬ, ಖಾನಾಪುರದ ಗರ್ಬೇನಹಟ್ಟಿ ಎಂದು ಗುರುತಿಸಿದ್ದು, ಇವರು ಗಂಧದ ಕಳ್ಳತನದಲ್ಲಿ ತಂಡ ರಚಿಸಿಕೊಂಡು ಜೋಯಿಡಾ ಸಮೀಪದ ಅಶೋಕ ಎಂಬಾತನಿಂದ ಮರಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಕಳ್ಳತನ ಮಾಡುತ್ತಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.