ಅಪಘಾತ: 10ಕ್ಕೂ ಹೆಚ್ಚು ಮಂದಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಡಿಕ್ಕಿ • ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಪಲ್ಟಿ
Team Udayavani, Aug 7, 2019, 3:27 PM IST
ಸಾತನೂರು ರಸ್ತೆಯಲ್ಲಿ ಅಪಘಾತದಿಂದ ಜಖಂಗೊಂಡಿರುವ ಸಾರಿಗೆ ಬಸ್.
ಚನ್ನಪಟ್ಟಣ: ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಸಂಸ್ಥೆ ಬಸ್, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್ನಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಟ್ಟಣದ ಸಾತನೂರು ರಸ್ತೆಯ ಅಂಬೇಡ್ಕರ್ ನಗರದ ಬಳಿ ನಡೆದಿದೆ.
ಸಾತನೂರು ಮಾರ್ಗದ ಸಾರಿಗೆ ಸಂಸ್ಥೆ ಬಸ್, ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಚಾಲಕ, ನಿರ್ವಾಹಕ ಸೇರಿದಂತೆ ಬಸ್ ಮುಂಭಾಗ ಕುಳಿತಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ: ವಿರೂಪಸಂದ್ರ ಗ್ರಾಮದ ಲಕ್ಷ್ಮೀ, ಕೋಡಿಹೊಸಹಳ್ಳಿಯ ಗೀತಾ, ಬಿ.ವಿ.ಹಳ್ಳಿಯ ಹರ್ಷಿತಾ, ಭಾಗ್ಯ, ಅಮ್ಮಳ್ಳಿದೊಡ್ಡಿಯ ಶಾಂತಾ, ಬೈರಶೆಟ್ಟಿಹಳ್ಳಿ ಗ್ರಾಮದ ಪೂರ್ಣಿಮಾ, ಶಿವರಾಜು, ಅರುಣ್, ಜಗದೀಶ್, ಸತೀಶ್ ಅವರಿಗೆ ಗಾಯಗಳಾಗಿವೆ. ಚಾಲಕ ಲೋಕೇಶ್ ಕಾಲಿಗೆ ಪೆಟ್ಟಾದರೆ, ನಿರ್ವಾಹಕ ಸ್ವಾಮಿ ಕಣ್ಣಿನ ಬಳಿ ಗಾಯಗಳಾಗಿವೆ. ಗಾಯಗೊಂಡವರಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಕೆಟ್ಟು ರಸ್ತೆ ಬದಿ ನಿಂತಿದ್ದ ಲಾರಿ: ಲಾರಿ ಕೆಟ್ಟಿದ್ದರಿಂದ ರಸ್ತೆ ಬದಿಯಲ್ಲಿಯೇ ಇದ್ದ ಗ್ಯಾರೇಜ್ಗೆ ರಿಪೇರಿಗಾಗಿ ಬಿಡಲಾಗಿತ್ತು. ಸಾತನೂರು ಕಡೆಯಿಂದ ಬಂದ ಬಸ್ನ ಬ್ರೇಕ್ ವೈಫಲ್ಯವೇ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬ್ರೇಕ್ ಹಾಕಿದಾಗ ವೈಫಲ್ಯಗೊಂಡಿರುವುದು ಚಾಲಕನ ಗಮನಕ್ಕೆ ಬಂದು, ಹೆಚ್ಚಿನ ಅನಾಹುತ ತಪ್ಪಿಸಲು ಮುಂದೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆಸಿದ್ದಾನೆ ಎಂದು ಹೇಳಲಾಗಿದೆ.
ಗ್ರಾಮೀಣ ಭಾಗದಲ್ಲಿ ಹಳೆ ಬಸ್ ಸಂಚಾರ: ಗ್ರಾಮೀಣ ಭಾಗದಲ್ಲಿ ಸಂಚಾರ ಮಾಡುವ ಬಹುತೇಕ ಬಸ್ಗಳು ಹಳೆಯವಾಗಿದ್ದು, ಅವಧಿ ಮುಗಿದಿದ್ದರೂ ಕೆಲ ಬಸ್ಗಳು ಸಂಚಾರ ಮಾಡುತ್ತಿವೆ. ಸುಸ್ಥಿತಿಯಲ್ಲಿರದ ಬಸ್ಗಳನ್ನು ಓಡಿಸುತ್ತಿರುವುದು ಇಂತಹ ಘಟನೆಗಳಿಗೆ ಕಾರಣವಾಗುತ್ತಿವೆ ಎನ್ನುವುದು ಚಾಲಕ, ನಿರ್ವಾಹಕರ ಅಳಲಾಗಿದೆ. ಸ್ಥಳಕ್ಕೆ ಡಿಪೋ ವ್ಯವಸ್ಥಾಪಕ ರಾಘವೇಂದ್ರ, ಸಂಚಾರ ಠಾಣೆ ಎಸ್ಐ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು