ಜಲಶಕ್ತಿ, ಜಲಾಮೃತ ಯೋಜನೆಗೆ ಉತ್ತಮ ಪ್ರತಿಕ್ರಿಯೆ

ಶ್ರಮದಾನ ಮೂಲಕ ಪುರಾತನ ಕಲ್ಯಾಣಿ ಸ್ವತ್ಛತೆಗೆ ಮುಂದಾದ ಸಾರ್ವಜನಿಕರು,ಅಧಿಕಾರಿಗಳ ಇಚ್ಛಾಶಕ್ತಿಯಿಂದ ತಾಲೂಕು ರಾಜ್ಯಕ್ಕೆ ಪ್ರಥಮ

Team Udayavani, Aug 7, 2019, 4:09 PM IST

hasan-tdy-1

ಚನ್ನರಾಯಪಟ್ಟಣ: ಜಲಶಕ್ತಿ ಹಾಗೂ ಜಲಾಮೃತ ಯೋಜನೆಯಿಂದ ಪ್ರೇರಣೆ ಪಡೆದ ಬೆಳಗಿಹಳ್ಳಿ ಗ್ರಾಮದ ಜನತೆ ತಮ್ಮ ಗ್ರಾಮದಲ್ಲಿ ಹೂಳು ತುಂಬಿರುವ ಕಲ್ಯಾಣಿಯನ್ನು ಪುನರುಜ್ಜೀವನ ಮಾಡಲು ಮುಂದಾಗುವ ಮೂಲಕ ತಾಲೂಕು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ.

ಮಳೆ ಕೊರತೆಯಿಂದ ಕೃಷಿ ಮಾಡಲು ನೀರಿನ ಅಭಾವ ಉಂಟಾಗುತ್ತಿರುವುದಲ್ಲದೇ ಸಾವಿರಾರು ಅಡಿಗಳ ವರೆಗೆ ಅಂತರ್ಜಲ ಕುಸಿದ ಪರಿಣಾಮ ಕೇಂದ್ರ ಸರ್ಕಾರ ದೇಶ ವ್ಯಾಪಿ ಜಲಶಕ್ತಿ ಅಭಿಯಾನ ವನ್ನು ಜಾರಿಗೆ ತಂದಿದೆ. ಇದೇ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಲಮೃತ ಯೋಜನೆ ಎಂಬ ಹೆಸರಿನಲ್ಲಿ ಕೆರೆ-ಕಟ್ಟೆ, ಕಲ್ಯಾಣಿ ಹೂಳೆತ್ತುವ ಕೆಲಸಕ್ಕೆ ಮುಂದಾಗಿದ್ದು ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದೆ.

ಶ್ರಮದಾನ: ತಾಲೂಕಿನ ಪ್ರತಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಮೂಲಕ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೂಲಕ ಪ್ರತಿ ಗ್ರಾಮವನ್ನು ತಲುಪುವ ಉದ್ದೇಶ ಹೊಂದಿದ್ದು, ತಾಲೂಕಿನಲ್ಲಿ ಹೂಳುಗಳಿಂದ ಮುಚ್ಚಿಕೊಂಡಿರುವ ಪುರಾತನ ಕಲ್ಯಾಣಿಗಳನ್ನು ಪುನರುಜ್ಜೀವನ ಮಾಡಲು ಮುಂದಾ ಗುತ್ತಿದೆ. ಇದಕ್ಕೆ ಈಗಾಗಲೇ ಹಲವು ಗ್ರಾಮಗಳಲ್ಲಿ ಗ್ರಾಮಸ್ಥರೇ ಮುಂದೆ ಬಂದು ಶ್ರಮದಾನ ಮಾಡುವ ಮೂಲಕ ಕಲ್ಯಾಣಿ ಹೂಳು ತೆಗೆಯುತ್ತಿದ್ದಾರೆ.

ಧಾರ್ಮಿಕ ಕಾರ್ಯಗಳಿಗೆ ಉಪಯೋಗ: ಗ್ರಾಮ ದಲ್ಲಿ ನಡೆಯುವ ಧಾರ್ಮಿಕ ಕಾರ್ಯಗಳಿಗೆ ಹಾಗೂ ಗ್ರಾಮದಲ್ಲಿನ ದೇವಾಲಯಗಳಿಗೆ ಕಲ್ಯಾಣಿಗಳ ಮೂಲಕ ನೀರನ್ನು ತೆಗೆದುಕೊಂಡು ಹೋಗುವ ಉದ್ದೇಶದಿಂದ ಶತಮಾನಗಳ ಹಿಂದೆ ಪೂರ್ವಜನರು ಪ್ರತಿ ಗ್ರಾಮದಲ್ಲಿ ಕಲ್ಯಾಣಿಗಳನ್ನು ನಿರ್ಮಿಸಿದ್ದರು. ಆಧುನಿಕತೆ ಬೆಳೆದಂತೆ ಕಲ್ಯಾಣಿಗಳನ್ನು ಮುಚ್ಚಿಹಾಕಿ, ಕೊಳವೆ ಬಾವಿಗಳ ಮೂಲಕ ನೀರು ಉಪಯೋಗಿಸುತ್ತಿದ್ದಾರೆ.

42 ಕಲ್ಯಾಣಿ ಸ್ವಚ್ಛತೆ: ತಾಲೂಕಿನ 41 ಗ್ರಾಮ ಪಂಚಾಯಿತಿಯಿಂದ ಸುಮಾರು 65 ಪುರಾತನ ಕಲ್ಯಾಣಿಯನ್ನು ಗುರುತಿಸಿದ್ದು ಅವುಗಳಲ್ಲಿ 42 ಕಲ್ಯಾಣಿಗಳನ್ನು ಗ್ರಾಮಸ್ಥರ ಹಾಗೂ ಶಾಲಾ ವಿದ್ಯಾರ್ಥಿಗಳ ಸಹಾಯೊಂದಿಗೆ ಶ್ರಮದಾನದ ಮಾಡುವ ಮೂಲಕ ಸ್ವಚ್ಛತೆ ಮಾಡಲಾಗಿದೆ. ಉಳಿದ ಕಲ್ಯಾಣಿಗಳನ್ನು ಸಾರ್ವಜನಿಕರ ಸಹಕಾರದೊಂದಿಗೆ ಶ್ರಮದಾನ ಮಾಡುವ ಮೂಲಕ ಶೀಘ್ರದಲ್ಲಿ ಸ್ವಚ್ಛತೆ ಮಾಡಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಪಂಚಾಯಿತಿ ಸಿಬ್ಬಂದಿ ಮುಂದಾಗಲಿದ್ದಾರೆ.

ಪಾಳು ಬಿದ್ದ ಜಲಮೂಲಗಳು: ಶತಮಾನದ ಇತಿಹಾಸ ಹೊಂದಿರುವ ಕಲ್ಯಾಣಿಗಳಲ್ಲಿ ನೀರು ಸಂಗ್ರಹವಾಗುತ್ತಿತ್ತು. ಈ ನೀರನ್ನು ಗ್ರಾಮಸ್ಥರು ಕುಡಿಯಲು, ಧಾರ್ಮಿಕ ಕಾರ್ಯಕ್ರಮಗಳ ಬಳಕೆಗೆ ಉಪಯೋಗಿಸುತ್ತಿದ್ದರು. ಮಳೆಗಾಲದಲ್ಲಿ ಕಲ್ಯಾಣಿಯ ತುಂಬಾ ನೀರು ಶೇಖರಣೆಯಾಗಿ ಅಂತರ್ಜಲ ವೃದ್ಧಿ ಆಗುತ್ತಿದ್ದರಿಂದ ಕಲ್ಯಾಣಿಗೆ ಸಮೀಪದಲ್ಲಿನ ಕೊಳವೆ ಬಾವಿಗಳಲ್ಲಿ ಉತ್ತಮವಾಗಿ ನೀರು ದೊರೆಯುತ್ತಿತ್ತು. ಕೊಳವೆ ಬಾವಿಯಲ್ಲಿ ನೀರು ದೊರೆಯುತ್ತಿದ್ದರಿಂದ ಗ್ರಾಮಸ್ಥರು ಕಲ್ಯಾಣಿಗಳ ಕಡೆ ಗಮನ ನೀಡದೇ ಇದುದ್ದರಿಂದ ಎಲ್ಲಾ ಕಲ್ಯಾಣಿಗಳು ಪಾಳು ಬಿದ್ದವು.

ಕಸದ ತೊಟ್ಟಿಯಾಗಿವೆ: ಹಲವು ವರ್ಷಗಳಿಂದ ಗ್ರಾಮಗಳಲ್ಲಿರುವ ಪುರಾತನ ಕಲ್ಯಾಣಿಗಳು ಪಾಳು ಬಿದಿದ್ದರಿಂದ ಪಾರ್ಥೇನಿಯಂ ಮೊದಲಾದ ಗಿಡಗಳು ಬೆಳೆಯಲಾರಂಭಿಸಿದವು. ಇದೇ ಕಲ್ಯಾಣಿಗಳಿಗೆ ಕೆಲವರು ಕಸ ಹಾಗೂ ಇತರ ಅನುಪಯುಕ್ತ ವಸ್ತುವನ್ನು ತುಂಬಿದ್ದರಿಂದ ಕಲ್ಯಾಣಿಗಳು ಸಂಪೂರ್ಣ ವಾಗಿ ಹಾಳಾದವು. ಮಳೆಗಾಲದಲ್ಲಿ ನೀರು ಶೇಖರಣೆ ಆಗಬೇಕಿದ್ದ ಕಲ್ಯಾಣಿಗಳು ಗ್ರಾಮದ ಕಸದ ತೊಟ್ಟಿಗಳಾಗಿ ಮಾರ್ಪಟ್ಟವು.

ಅಂತರ್ಜಲ ವೃದ್ಧಿಗೆ ಶ್ರಮಿಸಿ: ಯಾವಾಗ ಮಳೆ ಕಡಿಮೆಯಾಯಿತೋ ಅಂತರ್ಜಲದ ಕೊರೆತೆಯಿಂದ ಯಾವಾಗ ಕೊಳವೆ ಬಾವಿಗಳು ನೀರು ದೊರೆ ಯುವುದು ಸ್ಥಗಿತವಾಯಿತು. ಆಗ ಕಲ್ಯಾಣಿಗಳ ಕಡೆ ಗ್ರಾಮಸ್ಥರು ಮುಖ ಮಾಡಿದರು. ಇದೇ ವೇಳೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾಗಳು ಜಲಸಂರಕ್ಷಣಾ ಅಭಿಯಾನ ಪ್ರಾರಂಭಿಸಿ ಕಲ್ಯಾಣಿಗಳು ಕೊಳವೆ ಬಾವಿಗೆ ಪೂರಕವಾಗಿ ನೀರಿನ ಸೆಲೆ ನೀಡುತ್ತವೆ ಇವುಗಳನ್ನು ಉಳಿಸದಿದ್ದರೆ ಮುಂದೆ ಗಂಡಾಂತರ ಕಾದಿದೆ ಎಂದು ತಿಳಿಸಿದ್ದರಿಂದ ಎಚ್ಚೆತ್ತ ಸಾರ್ವಜನಿಕರು ಮುಂದೆ ಬಂದು ಶ್ರಮದಾನ ಮೂಲಕ ಕಲ್ಯಾಣಿ ಸ್ವಚ್ಛತೆಗೆ ಮುಂದಾಗುತ್ತಿದ್ದಾರೆ.

 

● ಶಾಮಸುಂದರ್‌ ಕೆ.ಅಣ್ಣೇನಹಳ್ಳಿ

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.