ಕೃಷಿ ಮಾಡಲು ಕುಮ್ಮಟದುರ್ಗದ ಕುದುರೆ ಕಲ್ಲು ಸ್ಮಾರಕ ನಾಶ


Team Udayavani, Aug 7, 2019, 5:16 PM IST

kopala-tdy-4

ಗಂಗಾವತಿ: ಕುಮ್ಮಟದುರ್ಗದ ಕುದುರೆ ಕಲ್ಲು ಕಿತ್ತು ಹಾಕಿರುವದು.

ಗಂಗಾವತಿ: ಇತಿಹಾಸ ಪ್ರಸಿದ್ಧ ಕುಮ್ಮಟದುರ್ಗ ಕೋಟೆ ವ್ಯಾಪ್ತಿಯಲ್ಲಿ ಕೃಷಿ ಮಾಡಲು ಕೆಲ ಕೃಷಿಕರು ಇಲ್ಲಿದ್ದ ಕುದುರೆ ಕಲ್ಲು ಸ್ಮಾರಕಗಳನ್ನು ಕಿತ್ತು ಹಾಕಿ ನಾಶ ಮಾಡಿದ್ದಾರೆ. ಕುಮ್ಮಟ ದುರ್ಗದ ಕೋಟೆಗಳನ್ನು ಸಂರಕ್ಷಣೆ ಮಾಡಿದ ನೆನಪಿಗಾಗಿ ಕುದುರೆ ಕಲ್ಲು ಸ್ಮಾರಕವನ್ನು ಗಂಡುಗಲಿ ಕುಮಾರರಾಮ ನಿರ್ಮಿಸಿದ್ದ ಎನ್ನಲಾಗಿದೆ. ಇದೀಗ ಕೋಟೆ ಸುತ್ತ ಕೆಲವರು ಕೃಷಿ ಮಾಡುತ್ತಿದ್ದು, ಪ್ರತಿ ವರ್ಷ ಮಳೆಗಾಲದಲ್ಲಿ ಬೆಳೆ ತೆಗೆಯುತ್ತಾರೆ. ಕಂಪಿಲರಾಯನ ಮನೆ ದೇವರಾದ ಜಟ್ಟಂಗಿ ರಾಮೇಶ್ವರ ದೇಗುಲ, ಜಲಭಾವಿ, ಕೋಟೆ ಕೊತ್ತಲ ಹೀಗೆ ಹಲವಾರು ಸ್ಮಾರಕಗಳಿದ್ದು ಇವುಗಳ ಸಂರಕ್ಷಣೆ ಮಾಡುವಲ್ಲಿ ಪುರಾತತ್ವ ಇಲಾಖೆ ಮತ್ತು ಜಿಲ್ಲಾಡಳಿತನಿರ್ಲಕ್ಷ್ಯವಹಿಸಿದೆ.

ಕುಮ್ಮಟ ದುರ್ಗ ಎರಡು ಗುಡ್ಡಗಳ ನಡುವೆ ಸುರಕ್ಷಿತವಾದ ಪ್ರದೇಶವಾಗಿದೆ. ದೆಹಲಿಯ ಸುಲ್ತಾನ್‌ ಕುಮ್ಮಟ ದುರ್ಗದ ಮೇಲೆ ದಂಡೆತ್ತಿ ಬಂದ ಸಂದರ್ಭದಲ್ಲಿ ಸೈನಿಕರು ಕೋಟೆಗೆ ನುಗ್ಗದಂತೆ ವಿವಿಧ ಗಾತ್ರದ ಕಲ್ಲುಗಳನ್ನು ದಾರಿಯುದ್ಧಕ್ಕೂ ಹುಗಿದ ಮಾಡಿದ ವಿಶಿಷ್ಠ ಪ್ರಯೋಗವೇ ಕುದುರೆ ಕಲ್ಲು ಪ್ರದೇಶವಾಗಿದೆ. ಇಂತಹ ದಾರಿಯನ್ನು ದಾಟಿ ಬರಲು ಸುಲ್ತಾನನ ಸೈನಿಕರಿಗೆ ತಡವಾಗುತ್ತಿತ್ತು. ಕುದುರೆ ಕಲ್ಲು ಯುದ್ಧ ತಾಂತ್ರಿಕತೆ ಪ್ರತೀಕವಾಗಿದೆ. ಕುಮ್ಮಟ ದುರ್ಗದ ಮೇಲೆ ದೆಹಲಿ ಸುಲ್ತಾನರು ದಾಳಿ ಮಾಡಿದ ಸಂದರ್ಭದಲ್ಲಿ ಕಂಪಿಲರಾಯ ಮತ್ತು ಕುಮಾರರಾಮನ ಸೈನಿಕರು ಪ್ರತಿರೋಧ ಒಡ್ಡಿ ಕುಮ್ಮಟದುರ್ಗವನ್ನು ಸಂರಕ್ಷಿಸಿಕೊಂಡರು. ಇಂತಹ ಕುದುರೆ ಕಲ್ಲುಗಳನ್ನು ಕೃಷಿ ಮಾಡುವ ನೆಪದಲ್ಲಿ ಕಿತ್ತು ಬೇರೆಡೆ ಹಾಕಲಾಗಿದೆ.

ಹಿನ್ನೆಲೆ: ಕಂಪಿಲರಾಯನ ಪುತ್ರ ಕುಮಾರರಾಮ ವಿಜಯನಗರಕ್ಕೂ ಮೊದಲು ಕುಮ್ಮಟ ದುರ್ಗವನ್ನು ಆಳ್ವಿಕೆ ಮಾಡಿದ್ದ. ದೆಹಲಿ ಸುಲ್ತಾನರಿಗೆ ದಕ್ಷಿಣ ಭಾರತದಲ್ಲಿ ಮೊದಲಿಗೆ ಸೋಲಿನ ರುಚಿ ತೋರಿಸಿದ ಯುವರಾಜನಾಗಿದ್ದ. ಪರನಾರಿ ಸಹೋದರ ಎಂಬ ಖ್ಯಾತಿಗೆ ಪಾತ್ರನಾಗಿದ್ದ. ರಾಜ್ಯದ ತುಂಬೆಲ್ಲ ಕೆರೆ, ಕಟ್ಟೆ ನಿರ್ಮಿಸಿ ಕೃಷಿಕರಿಗೆ ನೆರವಾಗಿದ್ದ. ದೆಹಲಿ ಸುಲ್ತಾನರ ವಿರುದ್ಧ ಹೊಯ್ಸಳರು ಸೇರಿ ರಕ್ಷಿಣ ಭಾರತದ ರಾಜರನ್ನು ಒಗ್ಗೂಡಿಸಿದವರಲ್ಲಿ ಕುಮಾರರಾಮ ಸಹ ಪ್ರಮುಖ ಪಾತ್ರ ವಹಿಸಿದ್ದರು.

ನಾಡಿನ ಸಂಸ್ಕೃತಿಯ ಪ್ರತೀಕವಾಗಿರುವ ಕುಮ್ಮಟದುರ್ಗದ ಕುದುರೆಕಲ್ಲುಗಳನ್ನು ಕಿತ್ತುಹಾಕಿ ಕೃಷಿ ಮಾಡುತ್ತಿರುವುದು ಖಂಡನೀಯವಾಗಿದೆ. ಕೂಡಲೇ ಜಿಲ್ಲಾಡಳಿತ ಪುರಾತತ್ವ ಇಲಾಖೆ ಸ್ಮಾರಕ ಸಂರಕ್ಷಣೆ ಮಾಡಬೇಕು. ಸ್ಮಾರಕಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಪುರಾತತ್ವ ಮತ್ತು ಪ್ರವಾಸೋದ್ಯಮ ಇಲಾಖೆ ಲಕ್ಷ ್ಯ ವಹಿಸಿ ನಾಮಫಲಕ ಜೋಡಣೆ ಮಾಡಿ ಕೃಷಿ ಮಾಡುವವರನ್ನು ಬಿಡಿಸಬೇಕು. ಇಲ್ಲಿಗೆ ಹೋಗಲು ಮಾರ್ಗ ನಿರ್ಮಿಸಿ ಪ್ರವಾಸೋದ್ಯಮ ಕೇಂದ್ರ ಮಾಡಬೇಕು.•ಡಾ| ಶರಣಬಸಪ್ಪ ಕೋಲ್ಕಾರ, ಇತಿಹಾಸ ತಜ್ಞ

 

ಕೆ. ನಿಂಗಜ್ಜ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.