ಜೋಡಿ ಶ್ವಾನದೊಂದಿಗೆ ಪ್ರವಾಹ ದಾಟಿದ ಯುವಕ
Team Udayavani, Aug 7, 2019, 8:53 PM IST
ಬಾಗಲಕೋಟೆ : ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಘಟಪ್ರಭಾ ನದಿಗೆ 1.72 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಘಟಪ್ರಭಾ ನದಿ ತುಂಬಿ, ಅತಿ ರಭಸವಾಗಿ ಹರಿಯುತ್ತಿದೆ. ತುಂಬಿ ಹರಿಯುತ್ತಿದ್ದ ನದಿಯಲ್ಲೇ ಓರ್ವ ಯುವಕ ಹಾಗೂ ಎರಡು ಶ್ವಾನಗಳು ಯಾದವಾಡ- ಮುಧೋಳ ನಡುವಿನ ಸೇತುವೆ ದಾಟಿ ಗಮನ ಸೆಳೆದಿವೆ.
ಮುಧೋಳ - ಯಾದವಾಡ ಸಂಪರ್ಕ ಸೇತುವೆ ಮುಳುಗಿ ಸೇತುವೆ ಮೇಲೆ ನೀರು ಹರಿಯುತ್ತಿರುವಾಗ ಮುಧೋಳದಿಂದ ಯಾದವಾಡದ ಕಡೆಗೆ ಎರಡು ನಾಯಿಗಳು ಸೇತುವೆ ಮಧ್ಯೆ ಭಾಗದಿಂದ ಈಜಿ ದಡಸೇರಿದವು. ಅಲ್ಲದೇ ಇದೇ ಸಂದರ್ಭದಲ್ಲಿ ಯಾದವಾಡದ ಕಡೆಯಿಂದ ಮುಧೋಳ ಕಡೆಗೆ ಸೇತುವೆಯ ಬದಿಯ ಕಂಬಗಳನ್ನು ಆಸರೆಯನ್ನಾಗಿ ಹಿಡಿದುಕೊಂಡು ಬಂದ ಯುವಕ ಗಮನ ಸೆಳೆದ. ಈ ಕಡೆಗೆದಾಟಿ ಬಂದ ತಕ್ಷಣ ಪೋಲಿಸರು ತರಾಟೆಗೆ ತೆಗೆದುಕೊಂಡ ತಕ್ಷಣ ಹೆದರಿದ ಯುವಕ ತನ್ನ ಹೆಸರನ್ನೂ ಹೇಳದೆ ತುರ್ತು ಕೆಲಸವಿತ್ತೆಂದು ಅಲ್ಲಿಂದ ತೆರಳಿದ.
ನಗರಸಭೆ ಸಿಬ್ಬಂದಿ ರಕ್ಷಿಸಿದ ಸೈನಿಕರು :
ರಬಕವಿ ಬನಹಟ್ಟಿ ತಾಲೂಕಿನ ಹಿಪ್ಪರಗಿ ಸೇತುವೆ ಬಳಿ ಕೃಷ್ಣಾ ನದಿಯಲ್ಲಿದ್ದ ಜಾಕವೆಲ್ ಗಳು ನೀರಿನಲ್ಲಿ ಮುಳುಗಿದ್ದು, ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನಗರಸಭೆ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿದ್ದರು. ಎನ್.ಡಿ.ಆರ್.ಎಫ್ ಸೈನಿಕರು ಧಾವಿಸಿ, ಮೂವರು ನಗರಸಭೆ ಸಿಬ್ಬಂದಿಯನ್ನು ಸುರಕ್ಷಿತವಾಗಿ ತಡಕ್ಕೆ ಕರೆ ತಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ