ಇನ್ನಿಲ್ಲವಾದ ಶ್ರೇಷ್ಠ ರಾಜಕೀಯ ಪರಂಪರೆಯ ಕೊಂಡಿ


Team Udayavani, Aug 8, 2019, 5:12 AM IST

30

ಸಮರ್ಥ ಆಡಳಿತಗಾರ್ತಿ, ಉತ್ತಮ ವಾಗ್ಮಿ, ವಿನಮ್ರ ನಾಯಕಿ ಹೀಗೆ ಸುಷ್ಮಾ ಸ್ವರಾಜ್‌ ಅವರನ್ನು ಅನೇಕ ಗುಣ ವಿಶೇಷಣಗಳಿಂದ ಹೊಗಳಬಹುದು. ಆದರೆ ಇವೆಲ್ಲಕ್ಕಿಂತ ಮಿಗಿಲಾಗಿದ್ದದ್ದು ಅವರ ಮಾನವೀಯ ಅಂತಃಕರಣ. ಈ ಅಂತಃಕರಣದಿಂದಾಗಿಯೇ ಅವರು ಜನಮಾನಸದಲ್ಲಿ ಅಮ್ಮನ ಸ್ಥಾನಕ್ಕೇರಿದ್ದಾರೆ. ದೇಶದ ಮೊದಲ ಪೂರ್ಣ ಪ್ರಮಾಣದ ವಿದೇಶಾಂಗ ಸಚಿವರು ಎಂಬ ಹಿರಿಮೆಯೊಂದಿಗೆ ಆ ಹುದ್ದೆಯನ್ನು ಅಲಂಕರಿಸಿದ ಸುಷ್ಮಾ ತಾನು ಆ ಸ್ಥಾನಕ್ಕೆ ಯೋಗ್ಯ ಆಯ್ಕೆ ಎಂಬುದನ್ನು ಐದು ವರ್ಷದ ಅಧಿಕಾರ ವಧಿಯಲ್ಲಿ ತೋರಿಸಿಕೊಟ್ಟಿದ್ದರು. ಗಣ್ಯರು ಅಗಲಿದಾಗ ತುಂಬಲಾರದ ನಷ್ಟ ಎಂದು ವರ್ಣಿಸುವುದು ಒಂದು ಔಪಚಾರಿಕತೆಯಾಗಿದ್ದರೂ ಸುಷ್ಮಾ ಅಗಲಿಕೆ ಮಾತ್ರ ದೇಶಕ್ಕೆ ನಿಜವಾಗಿಯೂ ಭಾರೀ ನಷ್ಟವೇ ಸರಿ.

ರಾಜಕೀಯ ಮತ್ತು ಪರಿವಾರವನ್ನು ಪ್ರತ್ಯೇಕವಾಗಿಯೇ ಇರಿಸಿಕೊಂಡ ನಾಯಕರ ಸಾಲಿಗೆ ಸೇರಿದವರು ಸುಷ್ಮಾ. ರಾಜ್ಯ-ಕೇಂದ್ರದಲ್ಲಿ ಸಚಿವೆ, ಮುಖ್ಯಮಂತ್ರಿ, ವಿಪಕ್ಷ ನಾಯಕಿಯಾಗಿ ಹೀಗೆ ವಿವಿಧ ಉನ್ನತ ಹುದ್ದೆಗಳನ್ನು ನಿಭಾಯಿಸಿದ್ದರೂ ಎಂದಿಗೂ ಅಧಿಕಾರ ವ್ಯಾಪ್ತಿಯ ಮೇಲೆ ಕುಟುಂಬದ ನೆರಳು ಕೂಡಾ ಬೀಳದಂತೆ ನೋಡಿಕೊಂಡರು. ಕೈ ಬಾಯಿ ಸ್ವಚ್ಛ ವಾಗಿಟ್ಟು ಕೊಂಡು, ಅಧಿಕಾರದ ಭ್ರಮೆ ತಲೆಗೇರಿಸಿಕೊಳ್ಳದೆ ಸುಮಾರು ಐದು ದಶಕದ ರಾಜಕೀಯ ಪಯಣವನ್ನು ನಡೆಸಿದರು.

ಬಿಜೆಪಿ ಪಕ್ಷದಿಂದ ಮುಖ್ಯಮಂತ್ರಿಯಾದ ಮೊದಲ ಮಹಿಳೆ, ಮೊದಲ ವಿಪಕ್ಷ ನಾಯಕಿ ಸೇರಿದಂತೆ ಹಲವು ಪ್ರಥಮಗಳ ಉಪಾಧಿಗೆ ಸುಷ್ಮಾ ಪಾತ್ರರಾಗಿದ್ದಾರೆ. ವಿದ್ಯಾರ್ಥಿ ದೆಸೆಯಿಂದ ರಾಜಕೀಯ ಕ್ಷೇತ್ರ ಪ್ರವೇಶಿಸಿ ಹಂತಹಂತವಾಗಿ ಮೇಲೇರಿ ವಿದೇಶಾಂಗ ಸಚಿವೆಯ ಉನ್ನತ ಹುದ್ದೆ ಅಲಂಕರಿಸಿದವರು. ಹರ್ಯಾಣದ ಸಚಿವೆ, ದಿಲ್ಲಿಯ ಮುಖ್ಯಮಂತ್ರಿ, ಲೋಕಸಭೆಯಲ್ಲಿ ವಿಪಕ್ಷ ನಾಯಕಿ ಹೀಗೆ ಅವರ ಸುದೀರ್ಘ‌ ರಾಜಕೀಯ ಪಯಣಕ್ಕೆ ಅನೇಕ ಆಯಾಮಗಳುಂಟು. ನಿಭಾಯಿಸಿದ ಪ್ರತಿ ಹುದ್ದೆಯಲ್ಲೂ ತನ್ನದೇ ಛಾಪು ಮೂಡಿಸುವುದು ಅವರ ವೈಶಿಷ್ಟ್ಯವಾಗಿತ್ತು. ಅದರಲ್ಲೂ ವಿದೇ ಶಾಂಗ ಸಚಿವೆಯಾಗಿ ಅವರು ಮಾಡಿದ ಕೆಲಸಗಳನ್ನು ಇಡೀ ಜಗತ್ತು ಮೆಚ್ಚಿಕೊಂಡಿದೆ. ವಿದೇಶಾಂಗ ಇಲಾಖೆ ಮತ್ತು ಅದರ ಸಚಿವರೆಂದರೆ ಜನಸಾಮಾನ್ಯರ ಜೊತೆಗೆ ಯಾವ ಸಂಪರ್ಕವೂ ಇಲ್ಲದವರು. ಅವರೇ ನಿದ್ದರೂ ದೇಶಕ್ಕಾಗಮಿಸುವ ವಿದೇಶಿ ಗಣ್ಯರಿಗೆ ಹಸ್ತಲಾಘವ ನೀಡುವುದು, ವಿದೇಶ ಪ್ರಯಾಣ ಮಾಡುವುದು ಮತ್ತು ವಿದೇಶಾಂಗ ನೀತಿಗೆ ಸಂಬಂಧಪಟ್ಟಂತೆ ಮಾತನಾಡುವವರು ಎಂಬ ಸಾರ್ವತ್ರಿಕ ಗ್ರಹಿಕೆಯನ್ನು ಸುಳ್ಳು ಮಾಡಿದವರು ಸುಷ್ಮಾ ಸ್ವರಾಜ್‌. ವಿದೇಶಾಂಗ ಇಲಾಖೆಯನ್ನು ಜನಸಾಮಾನ್ಯರ ಬಳಿಗೊಯ್ದ ಕೀರ್ತಿ ಅವರಿಗೆ ಸಲ್ಲಬೇಕು.

ಬರೀ ಒಂದು ಟ್ವೀಟ್ನಿಂದ ದೇಶದ ವಿದೇಶಾಂಗ ಸಚಿವರನ್ನು ಸಂಪರ್ಕಿಸಬಹುದು ಎನ್ನುವುದನ್ನು ಅವರು ತೋರಿಸಿಕೊಟ್ಟಿದ್ದರು. ವಿದೇಶಗಳಲ್ಲಿದ್ದ ಭಾರತೀಯರು ಸಂಕಷ್ಟದ ಸಮಯದಲ್ಲಿ ಟ್ವೀಟ್ ಮೂಲಕ ಸುಷ್ಮಾ ನೆರವು ಪಡೆದು ಪಾರಾದ ಪ್ರಕರಣಗಳು ಅನೇಕ ಇವೆ. ಎಲ್ಲಿಯೇ ಇದ್ದರೂ ಒಂದು ಟ್ವೀಟ್ ನಮ್ಮನ್ನು ರಕ್ಷಿಸಬಹುದು ಎಂಬ ಸುರಕ್ಷತೆಯ ಭಾವನೆಯನ್ನು ಜನರಲ್ಲಿ ಮೂಡಿಸಿದ್ದು ಸುಷ್ಮಾರ ಬಹುದೊಡ್ಡ ಕೊಡುಗೆ. ಬಳಿಕ ಅನೇಕ ಸಚಿವರು ಈ ಮಾದರಿಯನ್ನು ಅನುಕರಿಸಿದ್ದಾರೆ. ಆರೋಗ್ಯ ಹದಗೆಟ್ಟು ಆಸ್ಪತ್ರೆಯ ಹಾಸಿಗೆಯಲ್ಲಿ ಮಲಗಿರುವಾಗಲೂ ನೆರವು ಕೋರಿ ಬಂದ ಟ್ವೀಟ್‌ಗೆ ತಕ್ಷಣ ಪ್ರತಿಸ್ಪಂದಿಸುವಷ್ಟು ಬದ್ಧತೆ ಅವರು ಹೊಂದಿದ್ದರು.

ನರೇಂದ್ರ ಮೋದಿ ಸರಕಾರದ ವಿದೇಶಾಂಗ ನೀತಿಗಳನ್ನು ಯಶಸ್ವಿಯಾಗಿ ಅನುಷ್ಠಾನಿಸಿದ ಹಿರಿಮೆ ಅವರಿಗೆ ಸಲ್ಲಬೇಕು. ಸರ್ಜಿಕಲ್ ಸ್ಟ್ರೈಕ್‌, ಬಾಲಾಕೋಟ್ ದಾಳಿ, ಡೋಕ್ಲಾಂ ಬಿಕ್ಕಟ್ಟು ಮತ್ತಿತರ ಕಠಿಣ ಸಂದರ್ಭಗಳಲ್ಲಿ ರಾಜತಾಂತ್ರಿಕತೆಯನ್ನು ಸಮರ್ಥವಾಗಿ ನಿಭಾಯಿಸಿದವರು ಅವರು. ಭಯೋತ್ಪಾದನೆ ಮತ್ತು ಮಾತುಕತೆ ಜೊತೆಯಾಗಿ ಸಾಗಲು ಸಾಧ್ಯವಿಲ್ಲ ಎಂಬುದನ್ನು ಪಾಕಿಸ್ಥಾನಕ್ಕೆ ಸ್ಪಷ್ಟವಾಗಿ ಮನವರಿಕೆ ಮಾಡಿಕೊಟ್ಟದ್ದು ಅವರ ರಾಜತಾಂತ್ರಿಕ ಕೌಶಲಕ್ಕೊಂದು ಉದಾಹರಣೆ.

ಪ್ರಾಯವಾಗಿ, ಅನಾರೋಗ್ಯ ಪೀಡಿತರಾಗಿ ಓಡಾಡಲೂ ಸಾಧ್ಯವಾಗ ದಿದ್ದರೂ ಅಧಿಕಾರ ಚಪಲ ಬಿಡದ ಅನೇಕ ರಾಜಕಾರಣಿಗಳನ್ನು ನೋಡುವಾಗ ಜನರಿಗೆ ಜುಗುಪ್ಸೆ ಉಂಟಾಗುತ್ತದೆ. ಆದರೆ ಸುಷ್ಮಾ ಈ ವಿಚಾರದಲ್ಲೂ ಮಾದರಿಯಾದರು. ಓರ್ವ ಯಶಸ್ವಿ ಸಚಿವೆಗೆ ಇನ್ನೊಂದು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಕಷ್ಟವೇನೂ ಆಗಿರಲಿಲ್ಲ. ಓಡಾಡಲು ಸಾಧ್ಯವಾಗದಿದ್ದರೆ ಪಕ್ಷವೇ ಅವರನ್ನು ಗೆಲ್ಲಿಸುವ ಹೊಣೆಯನ್ನೂ ವಹಿಸಿಕೊಳ್ಳಲು ತಯಾರಿತ್ತು. ಆದರೆ ಸಾರ್ವಜನಿಕ ಬದುಕಿಗೆ ಪರಿಪೂರ್ಣ ನ್ಯಾಯ ಸಲ್ಲಿಸುವ ದೈಹಿಕ ಕ್ಷಮತೆ ತನ್ನಲ್ಲಿ ಇಲ್ಲ ಎಂದು ಅರಿವಾದ ಕೂಡಲೇ ಸುಷ್ಮಾ ಚುನಾವಣಾ ರಾಜಕೀಯದಿಂದ ಹಿಂದೆ ಸರಿದರು. 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಇದ್ದ ಬಲವಾದ ಒತ್ತಡವನ್ನು ನಯವಾಗಿಯೇ ತಿರಸ್ಕರಿಸಿದರು. ಪ್ರಸ್ತುತ ರಾಜಕಾರಣದಲ್ಲಿ ಕಂಡುಬರುವ ವಿರಳ ನಿದರ್ಶನವಿದು. ದೇಶದ ಹೊಸ ಪೀಳಿಗೆಯ ರಾಜಕಾರಣಿಗಳಿಗೆ ಸುಷ್ಮಾ ಮಾದರಿಯಾಗುವ ವ್ಯಕ್ತಿತ್ವ. ಸುಷ್ಮಾ ಅಗಲಿಕೆಯಿಂದ ಶ್ರೇಷ್ಠ ರಾಜಕೀಯ ಪರಂಪರೆಯ ಕೊಂಡಿಯೊಂದು ಕಳಚಿಕೊಂಡಿದೆ.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.