ಕಾಳಜಿಯುಳ್ಳ, ಧೈರ್ಯಶಾಲಿ ಮಹಿಳೆ


Team Udayavani, Aug 8, 2019, 5:15 AM IST

p-43

“ಸುಷ್ಮಾ ಸ್ವರಾಜ್‌ ಅತ್ಯಂತ ಕಾಳಜಿ ಇರುವ, ಧೈರ್ಯಶಾಲಿ ಮಹಿಳೆ’ ಇದು ಅಮೆರಿಕದ ಹ್ಯೂಸ್ಟನ್‌ನಲ್ಲಿ ಇರುವ ಭಾರತೀಯ ಮೂಲದ ವ್ಯಕ್ತಿಗಳ ಅಭಿಪ್ರಾಯ ಇದು. ಭಾರತದ ರಾಯಭಾರ, ದೂತಾವಾಸ ಕಚೇರಿಗಳನ್ನು ವಿಶ್ವದ ಎಲ್ಲೆಡೆ ತೆರೆಯಲು ಶ್ರಮಿಸಿದ್ದಾರೆ. ರಾಜತಾಂತ್ರಿಕತೆಗೆ ಮಾನವೀಯತೆಯ ಸ್ಪರ್ಶ ನೀಡಿದ ಹೆಗ್ಗಳಿಕೆ ಅವರದ್ದು. ಅವರ ನಾಯಕತ್ವ ಗುಣ ಯಾವತ್ತೂ ನೆನಪಿನಲ್ಲಿ ಇರಿಸಿ ಕೊಳ್ಳುವಂಥದ್ದು ಎಂದು ಗ್ರೇಟರ್‌ ಹ್ಯೂಸ್ಟನ್‌ನ ಇಂಡೋ ಅಮೆರಿಕನ್‌ ವಾಣಿಜ್ಯ ಮಂಡಳಿ ಸಂಸ್ಥಾಪಕ ಕಾರ್ಯದರ್ಶಿ ಜಗದೀಪ್‌ ಅಹ್ಲುವಾಲಿಯಾ ಹೇಳಿದ್ದಾರೆ. 2017ರಲ್ಲಿ ಹ್ಯೂಸ್ಟನ್‌ ವಿವಿಯಲ್ಲಿನ 200 ಮಂದಿ ಭಾರತದ ವಿದ್ಯಾರ್ಥಿ ಗಳು ಪ್ರವಾಹದಿಂದಾಗಿ ಸಿಕ್ಕಿ ಹಾಕಿಕೊಂಡಿದ್ದ ವೇಳೆ ಅವರನ್ನು ಕಾಪಾಡಲು ಹ್ಯೂಸ್ಟನ್‌ನಲ್ಲಿರುವ ಭಾರತದ ದೂತಾವಾಸದ ಕಚೇರಿ ಮೂಲಕ ನಡೆಸಿದ ಶ್ರಮ ಮೆಚ್ಚತಕ್ಕದ್ದಾಗಿತ್ತು ಎಂದಿದ್ದಾರೆ. ಓಕ್ಲಹಾಮಾ ಸ್ಟೇಟ್‌ ವಿವಿಯ ಪ್ರಾಧ್ಯಾಪಕ ಸುಭಾಷ್‌ ಕಾಕ್‌ ಪ್ರಕಾರ ಸುಷ್ಮಾ ಸ್ವರಾಜ್‌ ಧೈರ್ಯಶಾಲಿ ಮಹಿಳೆ ಯಾಗಿದ್ದರು. ವಿದೇಶಾಂಗ ಸಚಿವೆ‌ಯಾಗಿ ಐದು ವರ್ಷ ಅವರ ಕಾರ್ಯನಿರ್ವಹಣೆ ಮೆಚ್ಚತಕ್ಕದ್ದು ಎಂದಿದ್ದಾರೆ.

ಅಂಬಾಲ ಕಂಟೋನ್ಮೆಂಟಲ್ಲಿ ದುಃಖ: ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್‌ ಸಣ್ಣ ವಯಸ್ಸಿನಲ್ಲಿ ಬೆಳೆದು ಬಂದ ಅಂಬಾಲ ಕಂಟೋನ್ಮೆಂಟ್‌ ಮತ್ತು ಇತರ ಸುತ್ತಮುತ್ತಲ ಪ್ರದೇಶಗಳಲ್ಲಿ ಈಗ ಬೇಸರದ ಛಾಯೆ ಆವರಿಸಿದೆ. ಚಿಕ್ಕಂದಿ ನಲ್ಲಿಯೇ ಅವರು ಅಲ್ಲಿ ಆಡಿ, ಬೆಳೆದಿದ್ದರು. ಚಿಕ್ಕಂದಿನಲ್ಲಿ ಯೇ ಅವರು ಶಾಲೆಯಲ್ಲಿ ನಡೆಯುತ್ತಿದ್ದ ಚರ್ಚೆ, ಭಾಷಣಗಳಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿದ್ದರು ಎಂದು ನಿವಾಸಿ ಯೊಬ್ಬರು ನೆನಪಿಸಿಕೊಂಡರು. “6ನೇ ತರಗತಿ ಯಿಂದ ಅವರು ರಾಜಕೀಯದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದರು. ನಂತರ ಆ ಕ್ಷೇತ್ರದತ್ತ ಹೆಚ್ಚಿನ ಆಸಕ್ತಿ ತೋರಿಸಲಾರಂಭಿಸಿದರು’ ಎಂದು ಕಂಟೋನ್ಮೆಂಟ್‌ನ ಹಿರಿಯ ನಿವಾಸಿ ಶ್ಯಾಮ್‌ ಬಿಹಾರಿ ನೆನಪಿಸಿಕೊಂಡರು. ಸಣ್ಣ ವಯಸ್ಸಿನಿಂದಲೇ ಅವರು ತೊಂದರೆಯಲ್ಲಿ ಇರುವವರಿಗೆ ನೆರವಾಗುವ ಪದ್ಧತಿ ಅವರಲ್ಲಿ ಇತ್ತು ಎಂದು ಶ್ಯಾಮ್‌ ಬಿಹಾರಿ ನೆನಪಿಸಿಕೊಂಡರು.

ಬಾಲ್‌ನಿಂದ ಚೆಲ್ಲಿದ ಹಾಲು: ಅರುವತ್ತರ ವಯಸ್ಸಿನಲ್ಲಿರುವ ಮತ್ತೂಬ್ಬರು ಸುಷ್ಮಾ ಅವರ ಕುಟುಂಬಕ್ಕಾಗಿ ಪ್ರತಿ ದಿನ ಬೆಳಗ್ಗೆ ಹಾಲು ತೆಗೆದುಕೊಂಡು ಹೋಗಲು ಬರುತ್ತಿದ್ದರು. ಅದೇ ಸಂದರ್ಭದಲ್ಲಿ ಅವರು ಮತ್ತು ಸ್ನೇಹಿತರು ಕ್ರಿಕೆಟ್‌ ಆಡುತ್ತಿದ್ದರು. ಬ್ಯಾಟ್‌ನಿಂದ ಸಿಡಿದ ಚೆಂಡು ಪಾತ್ರೆಗೆ ತಾಗಿ ನೆಲಕ್ಕೆ ಬಿದ್ದ ಕಾರಣ ಹಾಲು ಚೆಲ್ಲಿತು. ಅದರಿಂದ ಅವರು ಕೋಪಗೊಳ್ಳದೆ, “ಆಟ ಮುಂದುವರಿಸಿ’ ಎಂದು ಹೇಳಿದ್ದರು ಎಂದು ನೆನಪಿಸಿಕೊಂಡರು.

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.