ಕೃಷ್ಣಾ-ಘಟಪ್ರಭಾ ಆರ್ಭಟ

ಜಿಲ್ಲೆಯ 131 ಗ್ರಾಮಗಳಲ್ಲಿ ಪ್ರವಾಹ•ಕೃಷ್ಣಾ ನದಿಗೆ ಹರಿದು ಬರುತ್ತಿದೆ 4 ಲಕ್ಷ ಕ್ಯೂಸೆಕ್‌ ನೀರು

Team Udayavani, Aug 8, 2019, 11:43 AM IST

8–Agust-21

ಬಾಗಲಕೋಟೆ: ರೈತರೇ ಕಟ್ಟಿದ ಚಿಕ್ಕಪಡಸಲಗಿ ಬ್ಯಾರೇಜ್‌ ಬಳಿಯ ವಿಜಯಪುರ-ಧಾರವಾಡ ರಾಜ್ಯ ಹೆದ್ದಾರಿ ಹತ್ತಿರ ಕೃಷ್ಣಾ ನದಿ ತುಂಬಿ ಹರಿಯುತ್ತಿರುವುದು

ಶ್ರೀಶೈಲ ಬಿರಾದಾರ
ಬಾಗಲಕೋಟೆ:
ಕಳೆದೊಂದು ವಾರದಿಂದ ಕೃಷ್ಣಾ ನದಿಯಲ್ಲಿ ಮಾತ್ರ ಉಂಟಾಗಿದ್ದ ಪ್ರವಾಹ ಬುಧವಾರದಿಂದ ಮಲಪ್ರಭಾ ಹಾಗೂ ಘಟಪ್ರಭಾ ನದಿಗಳಿಗೂ ವಿಸ್ತರಿಸಿದೆ. ಜಿಲ್ಲೆಯ ಮೂರು ನದಿಗಳಲ್ಲೂ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಆರು ತಾಲೂಕಿನ 131 ಗ್ರಾಮಗಳ ಜನರು ಅತಂತ್ರ ಬದುಕು ಸಾಗಿಸುತ್ತಿದ್ದಾರೆ.

ಕೃಷ್ಣಾ ನದಿಗೆ ಬುಧವಾರ 3,46,567 ಕ್ಯೂಸೆಕ್‌, ಘಟಪ್ರಭಾ ನದಿಗೆ 1.72 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಈ ಎರಡೂ ನದಿಗಳ ನೀರು ಆಲಮಟ್ಟಿ ಜಲಾಶಯ ಸೇರುತ್ತಿದ್ದು, ಆಲಮಟ್ಟಿಯಿಂದ 4 ಲಕ್ಷ ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ. ಆಲಮಟ್ಟಿ ಜಲಾಶಯದ ಹಿನ್ನೀರು ಬಾಗಲಕೋಟೆ, ಬೀಳಗಿ, ಜಮಖಂಡಿ ತಾಲೂಕಿನ ಹಲವು ಹಳ್ಳಿಗಳು ಬಾಧಿತಗೊಂಡಿವೆ.

13 ಸೇತುವೆ ಜಲಾವೃತ: ಮಲಪ್ರಭಾ ನದಿಗೆ 45 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಬಾದಾಮಿ ತಾಲೂಕಿನ 27 ಹಳ್ಳಿಗಳು ಪ್ರವಾಹಕ್ಕೆ ಒಳಗಾಗುವ ತೀವ್ರ ಭೀತಿಯಲ್ಲಿವೆ. ಬುಧವಾರ ಘಟಪ್ರಭಾ ನದಿ ಪಾತ್ರದ ಯಾದವಾಡ-ಮುಧೋಳ ರಾಜ್ಯ ಹೆದ್ದಾರಿಯ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಬಂದ್‌ ಆಗಿದೆ. ಈ ಸೇತುವೆ ಸಹಿತ ಈವರೆಗೆ ಜಿಲ್ಲೆಯಲ್ಲಿ 13 ಸೇತುವೆಗಳ ಸಂಪರ್ಕ ಕಡಿತಗೊಂಡಿದೆ. ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಮುಧೋಳ ತಾಲೂಕಿನ ಮಳಲಿ, ಮಾಚಕನೂರ, ಇಂಗಳಗಿ, ಜಾಲಿಬೇರಿ, ಉತ್ತೂರ, ಬುದ್ನಿ ಬಿಕೆ, ಮಿರ್ಜಿ, ಚೆನಾಳ, ಒಂಟಗೋಡಿ, ರಂಜಣಗಿ ಗ್ರಾಮಗಳಿಗೆ ಮುಂಭಾಗ ನೀರು ನುಗ್ಗಿದೆ. ಮಿರ್ಜಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದ್ದು, ಇಲ್ಲಿನ ನದಿ ಪಾತ್ರದ 250 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

131 ಹಳ್ಳಿಗೆ ಆತಂಕ: ಮೂರು ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಜಮಖಂಡಿ 26, ಬೀಳಗಿ 12, ಮುಧೋಳ 21, ಬಾಗಲಕೋಟೆ 12, ಬಾದಾಮಿ 27 ಹಾಗೂ ಹುನಗುಂದ ತಾಲೂಕಿನ 33 ಹಳ್ಳಿಗಳು ಸೇರಿ ಒಟ್ಟು 131 ಹಳ್ಳಿಗಳಿಗೆ ಯಾವುದೇ ಕ್ಷಣದಲ್ಲಿ ನೀರು ನುಗ್ಗುವ ಆತಂಕ ಎದುರಾಗಿದೆ. ಈಗಾಗಲೇ ಮುಧೋಳ ಪಟ್ಟಣದ ಎರಡು ಗಲ್ಲಿಗಳು, ಮಿರ್ಜಿ ಸಹಿತ ಏಳು ಗ್ರಾಮ, ಜಮಖಂಡಿ ತಾಲೂಕಿನ 13 ಗ್ರಾಮಗಳ ಸುತ್ತ ನೀರು ಆವರಿಸಿಕೊಂಡಿದೆ. ಘಟಪ್ರಭಾ ನದಿ ಪಾತ್ರದಲ್ಲಿ 23 ಹಾಗೂ ಮಲಪ್ರಭಾ ನದಿ ಪಾತ್ರದಲ್ಲಿ 18 ಬ್ಯಾರೇಜ್‌ಗಳಿದ್ದು, ಎಲ್ಲಾ ಬ್ಯಾರೇಜ್‌ಗಳ ಮೂಲಕ ನೀರು ಹೊರ ಬಿಡಲಾಗುತ್ತಿದೆ.

ಇಬ್ಬರು ಯುವಕರ ರಕ್ಷಣೆ: ಘಟಪ್ರಭಾ ನದಿ ಪ್ರವಾಹ ಉಂಟಾಗಿದ್ದು, ಮುಧೋಳ ತಾಲೂಕಿನ ನಾಗರಾಳದಲ್ಲಿ ನದಿ ದಟದಲ್ಲಿದ್ದ ವಿದ್ಯುತ್‌ ಪಂಪಸೆಟ್ ತರಲು ಹೋಗಿದ್ದ ಇಬ್ಬರು ಯುವಕರು ಪ್ರವಾಹದಲ್ಲಿ ಸಿಲುಕಿದ್ದರು. ಅವರನ್ನು ಮಹಾಲಿಂಗಪುರ ಪೊಲೀಸರು ರಕ್ಷಣೆ ಮಾಡಿದ್ದಾರೆ. ಆ.8 ಮತ್ತು 9ರಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.