ರಸ್ತೆಗಳು ಜಲಾವೃತ : ಸಿಎಂ ವೈಮಾನಿಕ ಸಮೀಕ್ಷೆ
Team Udayavani, Aug 9, 2019, 9:26 AM IST
ಸಾಂದರ್ಭಿಕ ಚಿತ್ರ
ಬಾಗಲಕೋಟೆ : ಜಿಲ್ಲೆಯ ಆರು ತಾಲೂಕುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಬಹುತೇಕ ಜಲಾವೃತಗೊಂಡಿರುವುದರಿಂದ ಸಿಎಂ ಯಡಿಯೂರಪ್ಪ ಅವರು, ರಸ್ತೆ ಮೂಲಕ ತೆರಳುವ ಬದಲು, ವೈಮಾನಿಕ ಸಮೀಕ್ಷೆ ನಡೆಸಲು ಮುಂದಾಗಿದ್ದಾರೆ.
ಮುಧೋಳದಲ್ಲಿ ವಾಸ್ತವ್ಯ ಮಾಡಿರುವ ಸಿಎಂ, ಶುಕ್ರವಾರ ಬೆಳಗ್ಗೆ ಜಮಖಂಡಿ ತಾಕೂಕಿನ ಜಲಾವೃತಗೊಂಡಿರುವ ಚಿಕ್ಕಪಡಸಲಗಿ, ಹಿಪ್ಪರಗಿ, ಮಹಾಲಿಂಗಪುರ ಬಳಿಯ ಡವಳೇಶ್ವರದಲ್ಲಿ ಪ್ರವಾಹ ಪರಿಸ್ಥಿತಿ ವೈಮಾನಿಕ ಸಮೀಕ್ಷೆ ನಡೆಸುವರು. ಅಲ್ಲಿಂದ ಬಾಗಲಕೋಟೆಯ ಹಿನ್ನೀರ ಪ್ರದೇಶ ಬಳಿಕ ಮೂರು ನದಿಗಳ ಸಂಗಮವಾದ ಕೂಡಲಸಂಗಮದ ಸುತ್ತ ವೈಮಾನಿಕ ಸಮೀಕ್ಷೆ ನಡೆಯಲಿದೆ. ನಂತರ ಬಾದಾಮಿ ತಾಲೂಕಿನಲ್ಲಿ ಮಲಪ್ರಭಾ ನದಿಯಿಂದ ಬಾಧಿತಗೊಂಡ ಗ್ರಾಮಗಳ ವೈಮಾನಿಕ ಸಮೀಕ್ಷೆ ಕೈಗೊಂಡು, ಬಾಗಲಕೋಟೆಗೆ ಆಗಮಿಸಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸುವರು.
ಬೆಳಗ್ಗೆ ಮುಧೋಳ ನಗರದಲ್ಲಿ ನಿರಾಶ್ರಿತರನ್ನು ಭೇಟಿ ಮಾಡಿ, ಸಮಸ್ಯೆ ಆಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ