ಗಣಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ವಿಫಲ

ಜಿಲ್ಲೆಯಲ್ಲಿ ಮೊದಲ ಬಾರಿಗೆ ಮೋಡ ಬಿತ್ತನೆ•ಮೂರು ದಿನಗಳಾದರೂ ಬಾರದ ಮಳೆೆ •ಕೋಟ್ಯಂತರ ರೂ. ಖರ್ಚು

Team Udayavani, Aug 9, 2019, 11:57 AM IST

9-Agust-14

ಬಳ್ಳಾರಿ: ಸಮರ್ಪಕ ಮಳೆಯಾಗದೆ ಸತತ ಬರಗಾಲ ಆವರಿಸುತ್ತಿರುವ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ ಮೊದಲಬಾರಿಗೆ ಮೋಡ ಬಿತ್ತನೆ ಕಾರ್ಯ ಕೈಗೊಂಡಿದ್ದು, ಮೂರು ದಿನಗಳಾದರೂ ಮಳೆಯಾಗದೆ ವಿಫಲವಾಗಿದೆ.

ರಾಜ್ಯದೆಲ್ಲೆಡೆ ಮಳೆ ಅಬ್ಬರ, ನೆರೆ ಅಬ್ಬರ ಇದ್ದರೆ ಬಳ್ಳಾರಿ ಜಿಲ್ಲೆಗೆ ಮಾತ್ರ ಸಾಧಾರಣ ಮಳೆ ಸಹ ಆಗುತ್ತಿಲ್ಲ. ಈ ಮಧ್ಯೆ ಮಳೆ ಸುರಿಯಲಿ ಎಂದು ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ಕೈಗೆತ್ತಿಕೊಂಡಿದೆ. ಮೋಡಬಿತ್ತನೆ ಕಾರ್ಯನಿರ್ವಹಿಸುವ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಕಳೆದ ಆ.6 ರಂದು ಮಂಗಳವಾರ ಜಿಲ್ಲೆಯ ಸಂಡೂರು, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಮೋಡ ಬಿತ್ತನೆ ಕಾರ್ಯ ಮಾಡಲಾಗಿದ್ದು, ಅಂದು ಯಾವುದೇ ಮಳೆಯಾಗಿಲ್ಲ. ವಾರದಿಂದ ಇರುವ ಜಿಟಿಜಿಟಿ ಮಳೆಯೇ ಮಂಗಳವಾರವೂ ಮುಂದುವರೆದಿದ್ದು, ಮಳೆಗಾಗಿ ಮಾಡಿದ ಮೋಡಬಿತ್ತನೆ ಕಾರ್ಯ ಕೈಕೊಟ್ಟಿದೆ ಎನ್ನಲಾಗಿದೆ.

ಆ.6 ರಂದು ಮಂಗಳವಾರ ಮಧ್ಯಾಹ್ನ 2.24ರಿಂದ ಸಂಜೆ 5.50 ನಿಮಿಷದವರೆಗೆ ಹಗರಿಬೊಮ್ಮನಹಳ್ಳಿ ತಾಲೂಕಿನ ಕೋಗಳಿ, ಬ್ಯಾಸಿಗೇರಿ, ಹಂಪಸಾಗರ, ಹಳೆ ಹಗರಿಬೊಮ್ಮನಹಳ್ಳಿ, ಉಲುವತ್ತಿ ಮತ್ತು ಸಂಡೂರು ತಾಲೂಕಿನ ಸಂಡೂರು, ಮುರಾರಿಪುರ, ಉಬ್ಬಳಗುಂಡಿ, ವಿಠuಲಾಪುರ, ದೋಣಿಮಲೈ ಗ್ರಾಮಗಳಲ್ಲಿ ಮೋಡ ಬಿತ್ತನೆ ಮಾಡಲಾಗಿದೆ. ಆದರೆ, ಎಲ್ಲೂ ಸಹ ನಿರೀಕ್ಷಿತ ಮಳೆ ಆಗಿಲ್ಲ.

ಮೋಡಬಿತ್ತನೆ ಕಾರ್ಯ ಜವಾಬ್ದಾರಿ ಹೊತ್ತ ಅಧಿಕಾರಿಗಳೇ ಹೇಳುವಂತೆ ಬಿತ್ತನೆ ಮಾಡಿದ 15 ನಿಮಿಷದಲ್ಲಿ ಅಥವಾ 30 ರಿಂದ 40 ನಿಮಿಷಗಳಲ್ಲಿ ಉತ್ತಮ ಮಳೆಯಾಗಬೇಕು. ಜೆಟ್ ವಿಮಾನದ ಮೂಲಕ ರಾಕೆಟ್ ರೂಪದ ಫ್ಲೇರ್ಗಳನ್ನು ಆಕಾಶಕ್ಕೆ ಕೊಂಡೊಯ್ದು, ಬೀಜಗಟ್ಟಿದ, ಮಳೆಯಾಗಿ ಭೂಮಿಗೆ ಇಳಿಯಬಲ್ಲ ಮೋಡಗಳ ಮೇಲೆ ಬಿಡಲಾಗುತ್ತದೆ. ಆಗ ಫ್ಲೇರ್ನಲ್ಲಿನ ರಾಸಾಯನಿಕ ಪದಾರ್ಥಗಳು ಬಿಡುಗಡೆಯಾಗಿ ಮಂಜುಗಡ್ಡೆ ರೂಪದ ಮೋಡಗಳು ಕರಗಿ ಮಳೆಯಾಗಿ ಪರಿವರ್ತನೆಯಾಗುತ್ತದೆ. ಆದರೆ, ಜಿಲ್ಲೆಯ ಸಂಡೂರು, ಹಗರಿಬೊಮ್ಮನಹಳ್ಳಿ ತಾಲೂಕಿನ ಆಯ್ದ ಗ್ರಾಮಗಳಲ್ಲಿ ಮೋಡಬಿತ್ತನೆ ಮಾಡಿ ಮೂರು ದಿನಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ವಿಫಲಾಗಿದೆ.

ಎಂದಿನಂತೆ ಜಿಟಿಜಿಟಿ ಮಳೆ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರೀಕ್ಷಿತ ಪ್ರಮಾಣದಲ್ಲಿ ಆಗದಿದ್ದರೂ, ಆಗೊಮ್ಮೆ ಈಗೊಮ್ಮೆ ಜಿಟಿಜಿಟಿ ಮಳೆಯಾಗುತ್ತಿದೆ. ಮೋಡ ಬಿತ್ತನೆ ಮಾಡಿದ ಕಳೆದ ಆ.6 ರಂದು ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 6 ಮಿಮೀ ಮಳೆಯಾಗಿದೆ. ಇದು ಈ ತಿಂಗಳ ಆರಂಭದಿಂದಲೂ ಸುರಿಯುತ್ತಿರುವ ಮಳೆಯ ಪ್ರಮಾಣವೂ ಆಗಿದೆ. ಹಾಗೆ ನೋಡಿದರೆ ಮೋಡಬಿತ್ತನೆಯ ಹಿಂದಿನ ದಿನ ಆ.5ರಂದು 4.8 ಮಿಮಿ ಮಳೆಯಾಗಿದ್ದು, ಎಂದಿನಂತೆ ವಾಡಿಕೆ ಮಳೆಯಾಗುತ್ತಿದೆ ಎಂಬುದು ಜಿಲ್ಲಾಡಳಿತದ ಅಂಕಿ ಅಂಶಗಳು ಸ್ಪಷ್ಟಪಡಿಸುತ್ತವೆ.

ಇನ್ನು ಸಂಡೂರು ತಾಲೂಕಿನಲ್ಲಿ ಮೋಡಬಿತ್ತನೆಯಾದ ಆ.6 ರಂದು 1.4 ಮಿಮಿ ಮಳೆಯಾಗಿದೆ. ದುರಂತವೆಂದರೆ ಮಾರನೇದಿನ ಆ.7 ರಂದು ತಾಲೂಕಿನಲ್ಲಿ 6 ಮಿಮಿ ಮಳೆಯಾಗಿದೆ. ಈ ತಾಲೂಕಿನಲ್ಲಿ ಮಳೆ ಸುರಿಯುವಿಕೆಯ ಪ್ರಮಾಣ ಆಗಾಗ ಏರುಪೇರು ಆಗುತ್ತಲೇ ಇರುತ್ತದೆ. ಇದರಿಂದ ಜಿಲ್ಲೆಯನ್ನು ಸತತ ಬರ ಪರಿಸ್ಥಿತಿಯಿಂದ ಮುಕ್ತಗೊಳಿಸುವ ಸಲುವಾಗಿ ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರುವ ಮೋಡಬಿತ್ತನೆಯ ಮೊದಲ ಪ್ರಯತ್ನ ವಿಫಲವಾಗಿದೆ ಎಂಬುದು ಸ್ಪಷ್ಟವಾಗುತ್ತಿದೆ.

ಜಿಲ್ಲೆಯ ಅಧಿಕಾರಿಗಳಿಗಿಲ್ಲ ಮಾಹಿತಿ: ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡುತ್ತಿರುವ ಕುರಿತು ಜಿಲ್ಲೆಯ ಯಾವ ಅಧಿಕಾರಿಗಳಿಗೂ ಮಾಹಿತಿ ಇಲ್ಲ. ಕೃಷಿ ಇಲಾಖೆ, ತಾಲೂಕು ಆಡಳಿತ ಯಾರನ್ನೇ ಕೇಳಿದರೂ ಈ ಕುರಿತು ಮಾಹಿತಿ ಇಲ್ಲ ಎಂದಷ್ಟೇ ಹೇಳುತ್ತಿದ್ದಾರೆ. ಕೋಟ್ಯಂತರ ರೂಪಾಯಿ ಖರ್ಚುಮಾಡಿ ಕೈಗೊಳ್ಳುವ ಇಂತಹ ಯೋಜನೆ ಬಗ್ಗೆ ಜಿಲ್ಲೆ, ತಾಲೂಕು ಆಡಳಿತಕ್ಕೆ, ಕೃಷಿ ಇಲಾಖೆಗೆ ಮಾಹಿತಿ ನೀಡದೇ ಇರುವುದು ಅಚ್ಚರಿಗೆ ಕಾರಣವಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.