ಬೂದಿಹಾಳ ನವಗ್ರಾಮಕ್ಕೂ ಬಂತು ಪ್ರವಾಹ!

•ಮಲಪ್ರಭೆಯ ಕರಾಳ ಛಾಯೆ•ತಟದ ಜನರಲ್ಲಿ ಹೆಚ್ಚುತ್ತಿದೆ ಆತಂಕ

Team Udayavani, Aug 9, 2019, 12:03 PM IST

gadaga-tdy-1

ನರಗುಂದ: ಬೂದಿಹಾಳ ಸಂತ್ರಸ್ತರು ನವಗ್ರಾಮದಿಂದ ಕೊಣ್ಣೂರ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಗೊಂಡಿದ್ದಾರೆ.

ನರಗುಂದ: ಮಲಪ್ರಭಾ ನದಿ ಪ್ರವಾಹ ತಾಲೂಕಿನ ಇತಿಹಾಸದಲ್ಲೇ ಮೊದಲ ಬಾರಿಗೆ ತನ್ನ ಪ್ರಭಾವ ಬೀರಿದ್ದು, ತಾಲೂಕಿನ ಬೂದಿಹಾಳ ಗ್ರಾಮ ಸ್ಥಳಾಂತರ ಮಾಡಲಾಗಿದ್ದ ನವಗ್ರಾಮಕ್ಕೂ ಆಗಮಿಸಿದೆ. ಪ್ರವಾಹ ನೀರು ಆವರಿಸಿದ್ದರಿಂದ ನವಗ್ರಾಮದಲ್ಲಿದ್ದ ಸಂತ್ರಸ್ತರನ್ನು ಮತ್ತೂಂದು ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ.

2007, 2009ರಲ್ಲಿ ಮಲಪ್ರಭಾ ನದಿ ಪ್ರವಾಹ ಪರಿಸ್ಥಿತಿಗೆ ಹಲವಾರು ಬಾರಿ ನಡುಗಡ್ಡೆಯಾಗಿದ್ದ ಬೂದಿಹಾಳ ಗ್ರಾಮವನ್ನು ನವಗ್ರಾಮಕ್ಕೆ ಸ್ಥಳಾಂತರ ಮಾಡಲಾಗಿತ್ತು. ಗ್ರಾಮದಿಂದ ಸುಮಾರು 2 ಕಿಮೀ ದೂರದಲ್ಲಿ ಶಿರೋಳ ರಾಜ್ಯ ಹೆದ್ದಾರಿಗೆ ಹೊಂದಿಕೊಂಡ ನಿವೇಶನದಲ್ಲಿ ಸುಮಾರು 400ಕ್ಕೂ ಹೆಚ್ಚು ಆಶ್ರಯ ಮನೆಗಳನ್ನು ನಿರ್ಮಿಸಲಾಗಿತ್ತು. ಕೆಲವು ಗ್ರಾಮಸ್ಥರು ಸ್ಥಳಾಂತರವಾಗಿದ್ದರೆ ಬಹುತೇಕ ಜನರು ಹಳೆ ಗ್ರಾಮದಲ್ಲೇ ಇದ್ದರು. ಪ್ರವಾಹ ಮುನ್ಸೂಚನೆಯಿಂದ ಬುಧವಾರವೇ ಗ್ರಾಮದ‌ ಜನರನ್ನು ನವಗ್ರಾಮಕ್ಕೆ ಸ್ಥಳಾಂತರಗೊಳಿಸಿದ್ದರು.

ಮಕ್ಕಳು ಮರಿ ಹಾಗೂ ಜಾನುವಾರುಗಳೊಂದಿಗೆ ಸಾಮಾನು ಸರಂಜಾಮು ಹೊತ್ತುಕೊಂಡು ನವಗ್ರಾಮದಲ್ಲಿ ಬೀಡು ಬಿಟ್ಟಿದ್ದ ಬೂದಿಹಾಳ ಸಂತ್ರಸ್ತರು ಸುರಿವ ಮಳೆ, ಬೀಸುವ ಛಳಿಯಲ್ಲೇ ನವಗ್ರಾಮದಲ್ಲಿ ಜಾಗ ಪಡೆದಿದ್ದರು. ಆದರೆ ಇಲ್ಲೂ ಪ್ರವಾಹ ಬಂದಿದೆ. ಗುರುವಾರ ಬೆಳಗ್ಗೆ ಉಕ್ಕಿ ಹರಿದ ಮಲಪ್ರಭಾ ನದಿ ನೀರು ಶಿರೋಳ ಮುಖ್ಯರಸ್ತೆ ದಾಟಿಕೊಂಡು ನವಗ್ರಾಮ ಪ್ರವೇಶಿಸಿದೆ. ತೀವ್ರ ಕಂಗಾಲಾದ ಸಂತ್ರಸ್ತರನ್ನು ಟ್ರ್ಯಾಕ್ಟರ್‌ಗಳಲ್ಲಿ ಕೊಣ್ಣೂರ ಎಪಿಎಂಸಿ ಪ್ರಾಂಗಣಕ್ಕೆ ಕರೆತರಲಾಗಿದೆ. ಸುರಕ್ಷಿತ ಸ್ಥಳದಲ್ಲಿ ನಿರ್ಮಿಸಿದ ನವಗ್ರಾಮಕ್ಕೂ ಪ್ರವಾಹ ಕರಾಳ ಬಾಹು ಹಸ್ತ ಚಾಚಿದ್ದರಿಂದ ನದಿ ಪಾತ್ರದಲ್ಲಿ ಜನಜೀವನ ಅಸ್ತವ್ಯಸ್ತವಾಗಿರುವುದಕ್ಕೆ ನಿದರ್ಶನವಾಗಿದೆ.

2007, 2009ರಲ್ಲಿ ಮಲಪ್ರಭಾ ನದಿ ಪ್ರವಾಹ ಪರಿಸ್ಥಿತಿಗೆ ಹಲವಾರು ಬಾರಿ ನಡುಗಡ್ಡೆಯಾಗಿದ್ದ ಬೂದಿಹಾಳ ಗ್ರಾಮವನ್ನು ನವಗ್ರಾಮಕ್ಕೆ ಸ್ಥಳಾಂತರ ಮಾಡಲಾಗಿತ್ತು.

ಬೆಣ್ಣಿಹಳ್ಳ ಸಮೀಪದ ತಾಲೂಕಿನ ಬನಹಟ್ಟಿ ಗ್ರಾಮಕ್ಕೂ ಪ್ರವಾಹ ಭೀತಿ ಆವರಿಸಿದೆ. ಗುರುವಾರ ಮಧ್ಯಾಹ್ನ ವೇಳೆಗೆ ಗ್ರಾಮದ ರುದ್ರಸ್ವಾಮಿ ಮಠದವರೆಗೂ ಪ್ರವಾಹ ಆವರಿಸಿದೆ ಎನ್ನಲಾಗಿದೆ. ಅಲ್ಲದೇ ಹದಲಿ ಗ್ರಾಮಕ್ಕೂ ಪ್ರವಾಹ ಕರಾಳ ಛಾಯೆ ಬೀರುತ್ತಿದೆ ಎಂದು ತಿಳಿದುಬಂದಿದೆ.

ಬೆಳ್ಳೇರಿ ಗ್ರಾಮದ ಸಂತ್ರಸ್ತರನ್ನು ಭೈರನಹಟ್ಟಿ ಸರಕಾರಿ ಶಾಲೆಗೆ, vಕುರ್ಲಗೇರಿ ಸಂತ್ರಸ್ತರನ್ನು ನರಗುಂದ ಎಪಿಎಂಸಿ ಯಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಲಖಮಾಪುರ, ಬೆಳ್ಳೇರಿ, ವಾಸನ ಗ್ರಾಮಗಳೂ ಪ್ರವಾಹಕ್ಕೆ ತತ್ತರಿಸಿವೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.