ಅಂಗನವಾಡಿ ಕೇಂದ್ರ ಶಿಥಿಲಾವಸ್ಥೆಗೆ

ಮಳೆಗಾಲದಲ್ಲಿ ಸೋರುವ ಕೊಠಡಿ •ಆಹಾರ ತಯಾರಿಸುವುದೂ ಕಷ್ಟಕರ

Team Udayavani, Aug 9, 2019, 12:01 PM IST

9-Agust-15

ಮರಿಯಮ್ಮನಹಳ್ಳಿ: ಶಿಥಿಲಾವಸ್ಥೆಗೆ ತಲುಪಿರುವ ಪಟ್ಟಣದ 8ನೇ ವಾರ್ಡ್‌ನ ಅಂಗನವಾಡಿ ಕೇಂದ್ರ.

ಎಂ.ಸೋಮೇಶ ಉಪ್ಪಾರ
ಮರಿಯಮ್ಮನಹಳ್ಳಿ:
ಪಟ್ಟಣದ 1ನೇ ವಾರ್ಡ್‌ ಮತ್ತು 8ನೇ ವಾರ್ಡ್‌ನ ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಗೊಂಡಿವೆ. ಮಕ್ಕಳ ಪೋಷಕರು ಆತಂಕದಲ್ಲಿಯೇ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ಮಳೆಗಾಲದಲ್ಲಿ ಕೊಠಡಿಗಳು ಸೋರುತ್ತಿವೆ ಇದರಿಂದ ಶಾಲೆಯಲ್ಲಿ ಮಕ್ಕಳನ್ನು ಕೂಡಿಸಿಕೊಳ್ಳುವುದು ಕಷ್ಟಕರವಾಗಿದೆ.

8ನೇ ವಾರ್ಡ್‌ ಅಂಗನವಾಡಿ ಕೇಂದ್ರ 11ರ ಮೇಲ್ಛಾವಣಿ ಅಲ್ಲಲ್ಲಿ ಬಿರುಕು ಬಿಟ್ಟಿದೆ. ಅಡುಗೆ ಕೋಣೆಯೂ ಸೋರುತ್ತಿದೆ. ಇದರಿಂದ ಮಕ್ಕಳಿಗೆ, ಗರ್ಭಿಣಿಯರಿಗೆ ಬಾಣಂತಿಯರಿಗೆ ಆಹಾರ ತಯಾರಿಸುವುದೂ ಕಷ್ಟಕರವಾಗುತ್ತಿದೆ ಎನ್ನುತ್ತಾರೆ ಅಂಗನವಾಡಿ ಕಾರ್ಯಕರ್ತೆ ಉಮಾದೇವಿ ಅವರು.

ಕೇಂದ್ರದಲ್ಲಿ 25 ಮಕ್ಕಳಿದ್ದು, ಇವರ ಮಳೆಗಾಲದಲ್ಲಿ ಮಕ್ಕಳನ್ನು ಕೂಡಿಸಿಕೊಳ್ಳುವುದು ಕಷ್ಟಕರವಾಗುತ್ತಿದೆ. ಮೇಲ್ಛಾವಣಿಯಲ್ಲಿ ನೀರು ಸೋರುತ್ತಿರುವುದರಿಂದ ವಿದ್ಯುತ್‌ ತಂತಿಗಳು ಎಲ್ಲಾದರೂ ಅಸ್ತವ್ಯಸ್ತವಾಗಿದ್ದರೆ ಅಪಾಯ ಕಟ್ಟಿಟ್ಟಬುತ್ತಿ ಅನ್ನುವಂತಿದೆ.

ಪಟ್ಟಣದಲ್ಲಿ 1 ಮತ್ತು 8ನೇ ವಾರ್ಡ್‌ನ ಎರಡು ಕೇಂದ್ರಗಳು ಶಿಥಿಲಾವಸ್ಥೆಯಲ್ಲಿದ್ದು, ಅಪಾಯ ತಂದೊಡ್ಡಲಿವೆ. ಎರಡೂ ಕಟ್ಟಡಗಳನ್ನು ಕೆಡವಲು ಲೋಕೋಪಯೋಗಿ ಇಲಾಖೆಯವರಿಗೆ ಹಾಗೂ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೂ ಕಳೆದ ಐದಾರು ತಿಂಗಳ ಹಿಂದೆ ಪತ್ರ ಬರೆಯಲಾಗಿದ್ದರೂ ಇಲಾಖೆಯವರಾಗಲೀ ಪಟ್ಟಣ ಪಂಚಾಯಿತಿ ಅವರಾಗಲಿ ಸ್ಪಂದಿಸುತ್ತಿಲ್ಲ ಎನ್ನುತ್ತಾರೆ ಮರಿಯಮ್ಮನಹಳ್ಳಿ ವಲಯದ ಅಂಗನವಾಡಿ ಮೇಲ್ವಿಚಾರಕಿ ಅಂಬುಜಾ ಅವರು.

ಈ ಬಗ್ಗೆ ನಮಗೆ ಮಾಹಿತಿ ಬಂದಿದೆ. ನಾವೂ ಸಹ ಲೋಕೋಪಯೋಗಿ ಇಲಾಖೆಯವರು ಕಟ್ಟಡಗಳು ಶಿಥಿಲ ಗೊಂಡಿರುವ ಬಗ್ಗೆ ಪ್ರಮಾಣ ಪತ್ರ ನೀಡಬೇಕಾಗಿದೆ. ಪ್ರಮಾಣ ಪತ್ರ ನೀಡಿದ ಮೇಲೆ ಯಾವುದಾದರೂ ಯೋಜನೆಯಲ್ಲಿ ಹೊಸ ಕಟ್ಟಡಗಳನ್ನು ನಿರ್ಮಿಸಿಕೊಡಲು ಮನವಿ ಮಾಡಿ ಕೊಳ್ಳುತ್ತೇವೆ.

ಸದ್ಯಕ್ಕೆ ಈ ಎರಡೂ ಅಂಗನವಾಡಿ ಕೇಂದ್ರಗಳನ್ನು ಯಾವುದಾದರೂ ಬಾಡಿಗೆ ಕಟ್ಟಡಗಳಿಗೆ ಸ್ಥಳಾಂತರಿಸಲು ಸೂಚನೆ ನೀಡುತ್ತೇವೆ ಎಂದು ಹೊಸಪೇಟೆಯ ಪ್ರಭಾರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುದೀಪ್‌ ಕುಮಾರ್‌.

ಪಟ್ಟಣ ಪಂಚಾಯತಿ 8ನೇ ವಾರ್ಡ್‌ನ ಸದಸ್ಯರಾದ ಎಸ್‌.ನವೀನ್‌ ಕುಮಾರ್‌ ಅವರು, ಕೂಡಲೇ ಈ ಅಂಗನವಾಡಿ ಕೇಂದ್ರವನ್ನು ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲು ಪ್ರಯತ್ನಿಸುತ್ತೇವೆ ಎನ್ನುತ್ತಾರೆ.

ಟಾಪ್ ನ್ಯೂಸ್

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.