ಬ್ಯಾಂಕ್‌ ಖಾತೆ ಹೊಂದಿದ್ದ‌ರೆ ಮಾತ್ರ ಸರ್ಕಾರದ ಸೌಲಭ್ಯ


Team Udayavani, Aug 9, 2019, 2:29 PM IST

br-tdy-2

ಹೊಸಕೋಟೆ: ಸಮಾಜದ ಎಲ್ಲಾ ವರ್ಗದ ಜನರೂ ಸಹ ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿದಲ್ಲಿ ಮಾತ್ರ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗ ಲಿದೆ ಎಂದು ತಹಶೀಲ್ದಾರ್‌ ಕೆ. ರಮೇಶ್‌ ಹೇಳಿದರು.

ನಗರದ ಶ್ರೀಕಂಠೇಶ್ವರ ಕಲ್ಯಾಣ ಮಂಟಪದಲ್ಲಿ ಬೆಂಗಳೂರಿನ ಕರ್ನಾಟಕ ಕಿರು ಹಣಕಾಸು ಸಂಸ್ಥೆಗಳ ಒಕ್ಕೂಟ, ಉಜ್ಜೀವನ್‌ ಬ್ಯಾಂಕ್‌ ವತಿಯಿಂದ ಏರ್ಪಡಿಸಿದ್ದ ಹಣಕಾಸು ವ್ಯವಹಾರದ ತಿಳಿವಳಿಕೆ ಸಭೆಯಲ್ಲಿ ಮಾತನಾಡಿದರು.

ಶೂನ್ಯ ಠೇವಣಿಯ ಜನಧನ ಖಾತೆ: ಅಡುಗೆ ಅನಿಲಕ್ಕೆ ನೀಡುವ ಸಹಾಯಧನ ಒಳಗೊಂಡಂತೆ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನೀಡುವ ಹಣ ಸಹ ಫ‌ಲಾನುಭವಿಗಳ ಬ್ಯಾಂಕ್‌ ಖಾತೆಗೆ ವರ್ಗಾಯಿಸ ಬೇಕಾಗಿದೆ. ಈ ಉದ್ದೇಶ ಕ್ಕಾಗಿಯೇ ಬ್ಯಾಂಕ್‌ಗಳಲ್ಲಿ ಶೂನ್ಯ ಠೇವಣಿಯ ಜನ್‌ಧನ್‌ ಖಾತೆ ತೆರೆಯಲು ಅವಕಾಶ ಕಲ್ಪಿಸ ಲಾಗಿದೆ. ಇದರಿಂದ ದುರುಪ ಯೋಗ ತಡೆಗಟ್ಟಲು ಸಾಧ್ಯವಾಗಿ ಯೋಜನೆಗಳು ಸಹ ಸಾರ್ಥಕ ಗೊಳ್ಳಲಿವೆ. ರಾಷ್ಟ್ರದ ಆರ್ಥಿಕ ಚಟುವಟಿಕೆಗಳಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳುವ ದಿಶೆಯಲ್ಲಿ ಜನಜಾಗೃತಿ ಮೂಡಿಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ. ತಾಲೂಕು ಕೇಂದ್ರಗಳಲ್ಲಷ್ಟೇ ಅಲ್ಲದೆ ಹೋಬಳಿ ಹಂತದಲ್ಲೂ ಹಮ್ಮಿಕೊಳ್ಳುವುದು ಹೆಚ್ಚು ಪರಿಣಾಮಕಾರಿ ಯಾಗಲಿದೆ ಎಂದರು.

ಬ್ಯಾಂಕ್‌ ಖಾತೆ ಹೊಂದಿ ಸರ್ಕಾರದ ಸೌಲಭ್ಯ ಪಡೆಯಿರಿ: ಲೀಡ್‌ ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕ ಮಧು ಸೂದನ್‌ ಮಾತನಾಡಿ, ಹಣಕಾಸು ವ್ಯವಹಾರ ಮಾಡುವ ಪ್ರತಿಯೊಬ್ಬರೂ ಬ್ಯಾಂಕ್‌ನಲ್ಲಿ ಖಾತೆ ಹೊಂದುವ ಮೂಲಕ ಸರ್ಕಾರದ ಅಂಗೀಕಾರ ದೊಂದಿಗೆ ಸಾಲ ಸೌಲಭ್ಯಗಳನ್ನು ಸಹ ಪಡೆಯಲು ಸಾಧ್ಯವಾಗಲಿದೆ. ಸಣ್ಣ ವ್ಯಾಪಾರಿಗಳನ್ನು ಸ್ವಾವಲಂಬಿ ಗಳನ್ನಾಗಿಸುವ ಪ್ರಮುಖ ಉದ್ದೇಶದಿಂದ ಜಾರಿಗೊ ಳಿಸಿರುವ ಯೋಜನೆಯಡಿ ಒಕ್ಕೂಟವು ಇತರೆ ಸಂಸ್ಥೆಗಳ ಸಹಯೋಗದಲ್ಲಿ ಗ್ರಾಹಕರಿಗೆ ಸಂಸ್ಥೆಯು ಸಾಲ ಸೌಲಭ್ಯ ನೀಡಿರುವುದಲ್ಲದೆ 20 ಸಾವಿರಕ್ಕೂ ಹೆಚ್ಚು ಯುವಕರು ಉದ್ಯೋಗ ಪಡೆದಿದ್ದಾರೆೆ ಎಂದರು.

ಕರ್ನಾಟಕ ಕಿರು ಹಣಕಾಸು ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ವಿ.ಎನ್‌.ಹೆಗ್ಡೆ, ತರಬೇತುದಾರ ನಾರಾಯಣ ಸ್ವಾಮಿ, ಭಾರತೀಯ ಸ್ಟೇಟ್ ಬ್ಯಾಂಕಿನ ವ್ಯವಸ್ಥಾಪಕ ಸುರೇಶ್‌ ಬೆಳ್ಳುಬ್ಬಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.