ನಿರಾಶ್ರಿತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದನೆ


Team Udayavani, Aug 10, 2019, 10:39 AM IST

hv-tdy-2

ಹಾನಗಲ್ಲ: ನೆರೆ ಸಂತ್ರಸ್ತರ ಪ್ರದೇಶಗಳ ಭೇಟಿಗೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸುದ್ದಿಗೋಷ್ಠಿ ನಡೆಸಿದರು.

ಹಾನಗಲ್ಲ: 25 ವರ್ಷಗಳ ಹಿಂದಿನಂತೆ ಧಾರಾಕಾರ ಸುರಿಯುತ್ತಿರುವ ಮಳೆಗೆ ಬೆಳೆ ಹಾನಿ, ನೆರೆ ಹಾವಳಿ, ಮನೆಗಳು ಹಾನಿಯಾಗಿದ್ದು, ಊರುಗಳೆಲ್ಲ ಜಲಾವೃತಗೊಂಡು ಜನ ನಿರಾಶ್ರಿತರಾಗಿದ್ದಾರೆ. ಈ ಎಲ್ಲ ಸಮಸ್ಯೆಗಳಿಗೆ ಸೂಕ್ತ ಪರಿಹಾರೋಪಾಯ ನೀಡುವಲ್ಲಿ ಸರಕಾರಿ ಆಡಳಿತ ಚೆನ್ನಾಗಿ ಸ್ಪಂದಿಸುತ್ತಿದೆ ಎಂದು ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ ತಿಳಿಸಿದರು.

ಶುಕ್ರವಾರ ಹಾನಗಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಲವು ಹಳ್ಳಿಗಳ ಜನರು ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದಾರೆ. ಅವರ ರಕ್ಷಣೆಗೆ ಪೂರ್ಣ ಪ್ರಮಾಣದ ಕಾರ್ಯ ನಡೆದಿದೆ. ಅಗತ್ಯವಿರುವಲ್ಲಿ ಬೋಟ್‌ಗಳನ್ನು ಒದಗಿಸಲಾಗಿದೆ. ವಿಳಂಬವಿಲ್ಲದೆ ಸರಿಯಾದ ರಕ್ಷಣೆ ಕಾರ್ಯ ನಡೆಯುತ್ತಿದೆ. ಮನೆ ಕಳೆದುಕೊಂಡವರಿಗೆ ಕೂಡಲೇ ಪರಿಹಾರ ನೀಡಲಾಗುತ್ತಿದೆ ಎಂದರು. ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮಂತ್ರಿಮಂಡಲ ರಚನೆಯಾಗದಿರುವುದಕ್ಕೂ, ಇಂತಹ ಸಂಕಷ್ಟದಲ್ಲಿ ಜನರಿಗೆ ಸಹಾಯಕ್ಕೆ ನಿಲ್ಲುವ ವಿಷಯಕ್ಕೂ ತಳುಕು ಹಾಕುವ ಅಗತ್ಯವಿಲ್ಲ. ಯಾರಿಗೆ ಯಾವುದೇ ಅಧಿಕಾರ ಇರಲಿ, ಇಲ್ಲದಿರಲಿ ನಾವೆಲ್ಲ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರೂ ಸಹ ಯದ್ಧೋಪಾದಿಯಲ್ಲಿ ಸರಕಾರದ ಪರವಾಗಿ ಕಾರ್ಯ ಕೈಗೊಂಡಿದ್ದಾರೆ. ಅವರೊಂದಿಗಿರುವ ಮಾಜಿ ಮಂತ್ರಿಗಳು, ಹಾಲಿ ಶಾಸಕರು, ಎಲ್ಲರೂ ಈ ಕಾರ್ಯದಲ್ಲಿ ತೊಡಿಗಿದ್ದೇವೆ ಎಂದರು.

ಐದಾರು ದಿನಗಳಿಂದ ಸಂಪೂರ್ಣ ವಾಗಿ ಈ ಕಾರ್ಯದಲ್ಲಿ ನಾನು ತೊಡಿಗಿಕೊಂಡಿದ್ದೇನೆ. ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಸಂತ್ರಸ್ತರ ಪ್ರದೇಶಗಳಿಗೆ, ಆತಂಕದ ಸ್ಥಳಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಕ್ಕಾಗಿ ಸರಕಾರಿ ಆಡಳಿತದ ಮೂಲಕ ನಮ್ಮ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದೇವೆ. ಶನಿವಾರ ಕಾರವಾರ ಜಿಲ್ಲೆಯ ಮಳೆ ಹಾನಿ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದರು. ಸರಕಾರದ ಜತೆಗೆ ಸಾರ್ವಜನಿಕರ ಸಹಕಾರವೂ ಅಗತ್ಯವಿದೆ. ಇದೇ ಹಾನಗಲ್ಲಿನಲ್ಲಿ ಚನ್ನಪ್ಪ ಶಂಕ್ರಪ್ಪ ಮಲ್ಲಾಡದ ಅವರು 1 ಲಕ್ಷ ರೂ.ಗಳನ್ನು ಮಳೆಯಿಂದಾಗಿ ಹಾನಿಗೊಳಗಾದ ಸಂತ್ರಸ್ತರಿಗೆ ನೀಡಿರುವುದು ಸಾಕ್ಷಿಯಾಗಿದೆ. ಇಂಥ ಸಂದರ್ಭಗಳಲ್ಲಿ ಎಲ್ಲರೂ ಒಟ್ಟಾಗಿ ನೇರವು ನೀಡಿ ಸೇವೆಗೆ ಮುಂದಾಗೋಣ ಎಂದರು.

ಸಂಸದ ಶಿವಕುಮಾರ ಉದಾಸಿ, ಶಾಸಕ ಸಿ.ಎಂ.ಉದಾಸಿ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನ, ಸವಣೂರು ಉಪವಿಭಾಗಾಧಿಕಾರಿ ಹರ್ಷದ ಬೋಯರ್‌ ನಾರಾಯಣರಾವ, ತಹಸೀಲ್ದಾರ್‌ ಎಂ.ಗಂಗಪ್ಪ ಇದ್ದರು.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.