ರಾಜ್ಯದ 16 ಜಿಲ್ಲೆಗಳ 80 ತಾಲೂಕು ಪ್ರವಾಹ ಪೀಡಿತ, 6 ಸಾವಿರ ಕೋಟಿ ನಷ್ಟ; ಬಿಎಸ್ ಯಡಿಯೂರಪ್ಪ
Team Udayavani, Aug 10, 2019, 3:51 PM IST
ಬೆಂಗಳೂರು: ರಾಜ್ಯದ 16 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂ ಕು ಎಂದು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಗೃಹ ಕಚೇರಿ ಕೃಷ್ಞಾದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ 6000 ಕೋಟಿ ರೂ. ನಷ್ಟದ ಅಂದಾಜು ಮಾಡಿದ್ದು, 3000 ಕೋಟಿ ರೂ. ಬಿಡುಗಡೆಗೆ ಮನವಿ ಮಾಡಲಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಪ್ರಧಾನಿ ರಾಜ್ಯಕ್ಕೆ ಕಳುಹಿಸಿದ್ದು, ವಸ್ತು ಸ್ಥಿತಿ ಅವಲೋಕಿಸಲಿದ್ದಾರೆ. ರಾಷ್ಟ್ರೀಯ ವಿಪತ್ತು ಘೋಷಣೆ ಬಗ್ಗೆ ಇನ್ನು ಎರಡು ಮೂರು ದಿನ ಅವಲೋಕಿಸಿ ಮನವಿಗೆ ಚಿಂತಿಸಲಾಗುವುದು ಎಂದು ಹೇಳಿದರು.
ಸಿಆರ್ ಪಿಎಫ್ ನ 3000 ಸಿಬಂದಿ ನೇಮಕ ಪ್ರಕ್ರಿಯೆ ಮುಂದೂಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದರು.
ಸರಕಾರಿ ನೌಕರರಿಂದ 150 ಕೋಟಿ ರೂ. ದೇಣಿಗೆ;
ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನ 150 ಕೋಟಿ ರೂ., ನಿಗಮ, ಮಂಡಳಿ ಇತರೆ ನೌಕರರ ಒಂದು ದಿನದ ವೇತನ 50 ಕೋಟಿ ರೂ., ಪೊಲೀಸ್, ಸಾರಿಗೆ ಇಲಾಖೆ ನೌಕರರ ಒಂದು ದಿನದ ವೇತನ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ಹೇಳಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು