ಕಿಲೋ ಕ್ಯಾರೆಟ್‌ 90 ರೂ.


Team Udayavani, Aug 11, 2019, 3:00 AM IST

kilo-carr

ಚಿಕ್ಕಬಳ್ಳಾಪುರ: ಜಿಲ್ಲೆಯ ಮಾರುಕಟ್ಟೆಯಲ್ಲಿ ಈಗ ಕ್ಯಾರೆಟ್‌ಗೆ ಚಿನ್ನದ ಬೆಲೆ ಬಂದಿದೆ. ಕಿಲೋ ಕ್ಯಾರೆಟ್‌ ಮಾರುಕಟ್ಟೆಯಲ್ಲಿ ಹೆಚ್ಚು ಅಂದರೆ 20, 30 ರೂ. ಗಡಿ ದಾಟಿರುವವ ನಿದರ್ಶನಗಳಿವೆ. ಆದರೆ ಸದ್ಯದ ಮಾರುಕಟ್ಟೆಯಲ್ಲಿ ಕೆ.ಜಿ. ಕ್ಯಾರೆಟ್‌ ಬರೋಬ್ಬರಿ 80 ರಿಂದ 90 ರೂ.ಗೆ ಮಾರಾಟಗೊಂಡು ಗಮನ ಸೆಳೆದಿದೆ.

ಬೆಳೆಗಾರರಿಗೆ ಸಂತಸ: ಹೌದು, ಚಿಕ್ಕಬಳ್ಳಾಪುರ ಜಿಲ್ಲೆಯ ಮಾರುಕಟ್ಟೆ ಇತಿಹಾಸದಲ್ಲಿ ಕ್ಯಾರೆಟ್‌ಗೆ ಈ ಪರಿ ಬೆಲೆ ಸಿಗುತ್ತಿರುವುದು ಇದೇ ಮೊದಲು. ಹಲವು ತಿಂಗಳ ಹಿಂದೆಯಷ್ಟೇ ಕ್ಯಾರೆಟ್‌ ಕೆ.ಜಿ 8, 10 ರೂ.ಗೆ ಮಾರಾಟವಾಗಿ ಜಿಲ್ಲೆಯ ಬೆಳೆಗಾರರು ಹಾಕಿದ ಬಂಡವಾಳ ಕೈಗೆ ಬಾರದೇ ಕೈ ಸುಟ್ಟುಕೊಂಡು ಕಣ್ಣೀರು ಸುರಿಸಿದ್ದರು. ಆದರೆ ಮಾರುಕಟ್ಟೆಯಲ್ಲಿ ದಿಢೀರನೇ ಕ್ಯಾರೆಟ್‌ ಬೆಲೆ ಗಗನಕ್ಕೇರಿರುವುದು ಈಗ ಬೆಳೆಗಾರರಲ್ಲಿ ಸಂತಸ ತಂದರೆ, ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ಕೈ ಕಚ್ಚುವಂತೆ ಮಾಡಿದೆ.

ಜಿಲ್ಲೆಯಲ್ಲಿ ಇತ್ತೀಚೆಗೆ ಟೊಮೆಟೋ, ಆಲೂಗಡ್ಡೆ ಬೆಳೆಯುವುದಕ್ಕಿಂತ ಅತಿ ಕಡಿಮೆ ವೆಚ್ಚದ ಕ್ಯಾರೆಟ್‌ನತ್ತ ಎಲ್ಲಾ ರೈತರು ಚಿತ್ತ ಹರಿಸಿದ್ದು, ಸಹಜವಾಗಿಯೇ ಜಿಲ್ಲೆಯಲ್ಲಿ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ಸದ್ಯ ಕ್ಯಾರೆಟ್‌ ಬೆಳೆದಿರುವ ರೈತರಿಗೆ ಕ್ಯಾರೆಟ್‌ ಬೆಲೆ ಏರಿಕೆಯಿಂದ ವರಮಹಾಲಕ್ಷ್ಮೀ ಮನೆಗೆ ಬರುವಂತಾಗಿದೆ.

100 ರೂ. ಗಡಿ ದಾಟಿದರೂ ಅಚ್ಚರಿಯಿಲ್ಲ: ಸದ್ಯ ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ಕ್ಯಾರೆಟ್‌ ಕಿಲೋ 80 ರಿಂದ 90 ರೂ, ವರೆಗೂ ಮಾರಾಟಗೊಳ್ಳುತ್ತಿದ್ದು, ಅದರ ಬೆಲೆ 100 ರೂ. ಗಡಿ ದಾಟಿದರೂ ಆಶ್ಚರ್ಯ ಪಡಬೇಕಿಲ್ಲ ಎಂದು ಎಪಿಎಂಸಿ ಮಾರುಕಟ್ಟೆ ತರಕಾರಿ ವ್ಯಾಪಾರಿ ಬೈರಾರೆಡ್ಡಿ “ಉದಯವಾಣಿ’ಗೆ ತಿಳಿಸಿದರು.

ಹೆಚ್ಚು ಬೇಡಿಕೆ: ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ ಹಾಗೂ ಬರದಿಂದ ಕೊಳವೆ ಬಾವಿಗಳು ಸಂಪೂರ್ಣ ಕೈ ಕೊಟ್ಟಿರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಕ್ಯಾರೆಟ್‌ ಬೆಳೆದಿಲ್ಲ. ಜೊತೆಗೆ ಮಹಾರಾಷ್ಟ್ರ, ಪುಣೆ ಮತ್ತಿತರ ಕಡೆಗಳಲ್ಲಿ ವ್ಯಾಪಕ ಮಳೆಯಿಂದ ಕ್ಯಾರೆಟ್‌ ಕೈ ಕೊಟ್ಟು ಮಾರುಕಟ್ಟೆ ಪ್ರವೇಶಿಸದ ಕಾರಣ ಚಿಕ್ಕಬಳ್ಳಾಪುರ ಮಾರುಕಟ್ಟೆಗೆ ಬರುವ ಕ್ಯಾರೆಟ್‌ಗೆ ಹೆಚ್ಚು ಬೇಡಿಕೆ ಬರುತ್ತಿದೆ.

ಹೀಗಾಗಿ ಸಗಟು ಮಾರುಕಟ್ಟೆಯಲ್ಲಿ ಕ್ಯಾರೆಟ್‌ 90 ರೂ.ಗೆ ಮಾರಾಟಗೊಳ್ಳುತ್ತಿದ್ದು, ಚಿಲ್ಲರೆಯಾಗಿ ಕೆ.ಜಿ 100 ರೂ.ಗೆ ಮಾರಾಟಗೊಳ್ಳುತ್ತಿದೆ. ಮತ್ತೂಂದೆಡೆ ಶ್ರಾವಣ ಮಾಸ ಆರಂಭಗೊಂಡಿರುವ ಪರಿಣಾಮ ಶುಭ ಕಾರ್ಯಗಳು ಹೆಚ್ಚಾಗಿದ್ದು, ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ಕ್ಯಾರೆಟ್‌ ಬಾರದ ಕಾರಣ ಬರುವ ಅಲ್ಪಸ್ಪಲ್ಪ ಕ್ಯಾರೆಟ್‌ಗೆ ಹೆಚ್ಚು ಬೇಡಿಕೆ ಉಂಟಾಗಿ ದರ ಹೆಚ್ಚಾಗಿದೆ ಎಂದು ಚಿಕ್ಕಬಳ್ಳಾಪುರದ ಎಪಿಎಂಸಿ ವರ್ತಕರು ಹೇಳುತ್ತಾರೆ.

ಹೋಟೆಲ್‌ ಮಾಲೀಕರ ಪರದಾಟ: ಕ್ಯಾರೆಟ್‌ ಬೆಲೆ ಹೆಚ್ಚಳ ಸಹಜವಾಗಿಯೇ ಹೋಟೆಲ್‌ ಮಾಲೀಕರನ್ನು ಕಂಗೆಡಿಸಿದೆ. ಇತ್ತೀಚಿನ ದಿನಗಳಲ್ಲಿ ಕ್ಯಾರೆಟ್‌ ಪ್ರತಿಯೊಂದು ಆಹಾರ ಪದಾರ್ಥಕ್ಕೂ ಅದರಲ್ಲೂ ಹೋಟೆಲ್‌ಗ‌ಳಲ್ಲಿ ತಯಾರಿಸುವ ದೋಸೆ, ರವೆ ಇಡ್ಲಿ, ಸಾಂಬಾರ್‌ ಹಾಗೂ ವಿವಿಧ ತರಹೇವಾರಿ ಪಲ್ಯಗಳಿಗೆ ಕ್ಯಾರೆಟ್‌ ಬಳಸುವುದು ಹೆಚ್ಚಾಗಿರುವುದರಿಂದ ಹೋಟೆಲ್‌ ಮಾಲೀಕರು ಬೆಲೆ ಹೆಚ್ಚಳಕ್ಕೆ ಹೈರಾಣಾಗಿದ್ದಾರೆ. ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಮದುವೆ, ನಾಮಕರಣ ಮತ್ತಿತರ ಶುಭ ಕಾರ್ಯಗಳು ಹೆಚ್ಚಾಗಿ ನಡೆಯುತ್ತಿದ್ದು, ಗ್ರಾಹಕರಿಗೆ ಕ್ಯಾರೆಟ್‌ ಬೆಲೆ ಏರಿಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಮಹಾರಾಷ್ಟ್ರ, ಪುಣೆಯಲ್ಲಿ ವಿಪರೀತ ಮಳೆಯಾಗುತ್ತಿದೆ. ಹೀಗಾಗಿ ಅಲ್ಲಿನ ಕ್ಯಾರೆಟ್‌ ಬೆಳೆ ಸಂಪೂರ್ಣ ನಾಶವಾಗಿದ್ದು, ಮಾರುಕಟ್ಟೆ ಬರುತ್ತಿಲ್ಲವಾದ್ದರಿಂದ ಜಿಲ್ಲೆಯ ಕ್ಯಾರೆಟ್‌ಗೆ ಬೇಡಿಕೆ ಬಂದಿದೆ. ಇದೇ ಮೊದಲ ಬಾರಿಗೆ ಕಿಲೋ ಕ್ಯಾರೆಟ್‌ 80, 90, 100 ರೂ. ವರೆಗೂ ಮಾರಾಟ ಮಾಡಲಾಗುತ್ತಿದೆ. ಮಳೆಗಾಲದ ಎಫೆಕ್ಟ್ನಿಂದ ಕ್ಯಾರೆಟ್‌ ಬೆಲೆ ಹೆಚ್ಚಾಗಿದೆ.
-ನಾಗರಾಜ್‌, ಎಪಿಎಂಸಿ ವರ್ತಕರು, ಚಿಕ್ಕಬಳ್ಳಾಪುರ

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.