80 ತಾಲೂಕು ಪ್ರವಾಹಪೀಡಿತ
Team Udayavani, Aug 11, 2019, 3:00 AM IST
ಬೆಂಗಳೂರು: ರಾಜ್ಯದಲ್ಲಿ ಆ.1ರಿಂದ ಈವರೆಗೆ ಸುರಿದ ಭಾರೀ ಮಳೆ ಹಾಗೂ ಇತರೆ ಕಾರಣಕ್ಕೆ ಅತಿವೃಷ್ಟಿಯಿಂದ ಉಂಟಾದ ಪ್ರವಾಹದಿಂದ ಜೀವ ಹಾನಿ ಜತೆಗೆ ಭಾರೀ ಪ್ರಮಾಣದಲ್ಲಿ ಬೆಳೆ ಹಾನಿ ಹಾಗೂ ಮೂಲ ಸೌಕರ್ಯಕ್ಕೆ ಹಾನಿಯಾಗಿದೆ. ಆ ಹಿನ್ನೆಲೆಯಲ್ಲಿ 17 ಜಿಲ್ಲೆಗಳ 80 ತಾಲೂಕುಗಳನ್ನು ತಕ್ಷಣ ದಿಂದ ಜಾರಿಗೆ ಬರುವಂತೆ ಪ್ರವಾಹಪೀಡಿತ ತಾಲೂಕು ಎಂದು ರಾಜ್ಯ ಸರ್ಕಾರ ಘೋಷಿಸಿ ಶನಿವಾರ ಆದೇಶ ಹೊರಡಿಸಿದೆ.
ಪ್ರವಾಹ ಪೀಡಿತವೆಂದು ಘೋಷಿಸಲಾಗಿರುವ ತಾಲೂಕುಗಳಲ್ಲಿ ಎಸ್ಡಿಆರ್ಎಫ್ ಹಾಗೂ ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಜಿಲ್ಲಾಡಳಿತವು ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದೆ. ಪ್ರವಾಹಪೀಡಿತ ಜಿಲ್ಲೆ, ತಾಲೂಕುಗಳ ವಿವರ ಹೀಗಿದೆ:
ಬೆಳಗಾವಿ: ಅಥಣಿ, ಬೈಲಹೊಂಗಲ, ಬೆಳಗಾವಿ, ಚಿಕ್ಕೋಡಿ, ಗೋಕಾಕ್, ಹುಕ್ಕೇರಿ, ಖಾನಾಪುರ, ರಾಮದುರ್ಗ, ರಾಯಬಾಗ, ಸವದತ್ತಿ.
ಬಾಗಲಕೋಟೆ: ಬಾದಾಮಿ, ಬಾಗಲಕೋಟೆ, ಬೀಳಗಿ, ಹುನಗುಂದ, ಜಮಖಂಡಿ, ಮುಧೋಳ.
ರಾಯಚೂರು: ದೇವದುರ್ಗ, ಲಿಂಗಸಗೂರು, ರಾಯಚೂರು.
ಕಲಬುರಗಿ: ಜೇವರ್ಗಿ, ಅಫಲ್ಪುರ.
ಯಾದಗಿರಿ: ಶಹಾಪುರ, ಶೋರಪುರ, ಯಾದಗಿರಿ.
ವಿಜಯಪುರ: ಬಸವನ ಬಾಗೇವಾಡಿ, ಮುದ್ದೇಬಿಹಾಳ, ಇಂಡಿ, ಸಿಂದಗಿ.
ಗದಗ: ನರಗುಂದ, ರೋಣ, ಶಿರಹಟ್ಟಿ.
ಹಾವೇರಿ: ಹಾನಗಲ್, ಹಾವೇರಿ, ಸವಣೂರು, ಶಿಗ್ಗಾಂವಿ, ಬ್ಯಾಡಗಿ, ಹಿರೇಕೆರೂರು.
ಧಾರವಾಡ: ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ, ನವಲಗುಂದ.
ಶಿವಮೊಗ್ಗ: ಹೊಸನಗರ, ಸಾಗರ, ಶಿಕಾರಿಪುರ, ಶಿವಮೊಗ್ಗ, ಸೊರಬ, ತೀರ್ಥಹಳ್ಳಿ.
ಹಾಸನ: ಸಕಲೇಶಪುರ, ಬೇಲೂರು, ಆಲೂರು.
ಚಿಕ್ಕಮಗಳೂರು: ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ, ಶೃಂಗೇರಿ.
ಕೊಡಗು: ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ.
ದಕ್ಷಿಣ ಕನ್ನಡ: ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಪುತ್ತೂರು, ಸುಳ್ಯ.
ಉಡುಪಿ: ಕಾರ್ಕಳ, ಕುಂದಾಪುರ, ಉಡುಪಿ.
ಉತ್ತರ ಕನ್ನಡ: ಅಂಕೋಲಾ, ಭಟ್ಕಳ, ಹಳಿಯಾಳ, ಹೊನ್ನಾವರ, ಕಾರವಾರ, ಕುಮಟಾ, ಮುಂಡಗೋಡ, ಸಿದ್ದಾಪುರ, ಶಿರಸಿ, ಸೂಪಾ, ಯಲ್ಲಾಪುರ.
ಮೈಸೂರು: ಹೆಗ್ಗಡದೇವನಕೋಟೆ, ನಂಜನಗೂಡು, ಟಿ.ನರಸೀಪುರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು